ಹುಣಸೂರು ಕ್ಷೇತ್ರದಲ್ಲಿ ಮಹಿಳಾ ಮತದಾರರೇ ಹೆಚ್ಚು.. 274 ಮತಗಟ್ಟೆಗೆ 1029 ಸಿಬ್ಬಂದಿ ನಿಯೋಜನೆ

ಸುಗಮ ಚುನಾವಣೆಗಾಗಿ ಆಡಳಿತ ಸಜ್ಜು

Team Udayavani, Mar 25, 2024, 8:00 PM IST

ಹುಣಸೂರು ಕ್ಷೇತ್ರದಲ್ಲಿ ಮಹಿಳಾ ಮತದಾರರೇ ಹೆಚ್ಚು.. 274 ಮತಗಟ್ಟೆಗೆ 1029 ಸಿಬ್ಬಂದಿ ನಿಯೋಜನೆ

ಹುಣಸೂರು: ಮುಂಬರುವ ಲೋಕಸಭಾ ಚುನಾವಣೆಗಾಗಿ ಸುಗಮವಾಗಿ ನಡೆಸಲು ಹುಣಸೂರು ತಾಲೂಕಿನಲ್ಲಿ ಅಗತ್ಯ ಸಿದ್ದತೆ ಕೈಗೊಳ್ಳಲಾಗುತ್ತಿದೆ ಹಾಗೂ ಆಡಳಿತವನ್ನು ಸಜ್ಜುಗೊಳಿಸಲಾಗುತ್ತಿದೆ ಎಂದು ಸಹಾಯಕ ಚುನಾವಣಾಧಿಕಾರಿಯಾದ ಮಹಮ್ಮದ್ ಹ್ಯಾರಿಸ್ ಸುಮೇರ ತಿಳಿಸಿದರು.

ನಗರದ ಉಪವಿಭಾಗಾಧಿಕಾರಿ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಅವರು ಹುಣಸೂರು ಕ್ಷೇತ್ರದಲ್ಲಿ 273 ಸೈನಿಕರು, 16ಮಂದಿ ತೃತಿಯಲಿಂಗಿಗಳು ಸೇರಿದಂತೆ ಒಟ್ಟು 2,46,832 ಮತದಾರರಿದ್ದು, ಈ ಪೈಕಿ 1,24,245 ಮಹಿಳಾ ಮತದಾರರು ಹಾಗೂ 1,22,571 ಪುರುಷ ಮತದಾರರಿದ್ದು, ಇಲ್ಲಿ 1,674 ಮಹಿಳಾ ಮತದಾರರು ಹೆಚ್ಚಿರುವುದು ವಿಷೇಶವೆಂದರು.

85 ವರ್ಷ ಮೇಲ್ಪಟ್ಟ 3928 ಹಿರಿಯ ನಾಗರಿಕ ಮತದಾರಿದ್ದು, ಇವರಲ್ಲಿ ಪುರುಷರು 1567 ಮತ್ತು 2361 ಮಹಿಳೆಯರು, 3676 ವಿಕಲಚೇತನ ಮತದಾರರು, 18 ರಿಂದ 19 ವಯಸ್ಸಿನ 3166 ಯುವ ಮತದಾರರಿದ್ದಾರೆ. ಗ್ರಾಮಾಂತರದಲ್ಲಿ 233 ಕೇಂದ್ರಗಳಿದೆ. ಚುನಾವಣೆ ಸುಸೂತ್ರವಾಗಿ ನಡೆಸಲು 274 ಮತಗಟ್ಟೆಯಲ್ಲಿ ಕರ್ತವ್ಯ ನಿರ್ವಹಿಸಲು 1029 ಸಿಬ್ಬಂದಿ ನಿಯೋಜಿಸಿಕೊಳ್ಳಲಾಗಿದೆ.

ನಾಲ್ಕು ಕಡೆ ತನಿಖಾ ಕೇಂದ್ರ: ತಾಲೂಕಿನ ಮನುಗನಹಳ್ಳಿ, ಗಾವಡಗೆರೆ, ಮುತ್ತುರಾಯನಹೊಸಹಳ್ಳಿ, ಉಮ್ಮತ್ತೂರುಗಳಲ್ಲಿ ತನಿಖಾ ಕೇಂದ್ರ ಸ್ಥಾಪಿಸಿ ದಿನದ 24 ಗಂಟೆ ಮೂರು ಪಾಳಿಯಲ್ಲಿ ಕರ್ತವ್ಯ ನಿರ್ವಹಿಸಲು 15 ಸಿಬ್ಬಂದಿ ನಿಯೋಜಿಸಲಾಗಿದೆ. ಮುಂದಿನ ದಿನದಲ್ಲಿ ಅಗತ್ಯವಿದ್ದಲ್ಲಿ ಚಿಲ್ಕುಂದ ಗ್ರಾಮದಲ್ಲಿ ತೆರೆಯುವ ಸಾಧ್ಯತೆ ಇದೆ ಎಂದರು.

55 ಸೂಕ್ಷ್ಮ ಮತಗಟ್ಟೆ;
274 ಮತಗಟ್ಟೆಗಳಲ್ಲಿ 3 ಅತಿಸೂಕ್ಷ್ಮ ಮತ್ತು 55 ಸೂಕ್ಷ್ಮ ಮತಗಟ್ಟೆಗಳಿವೆ. ಉಳಿದಂತೆ ಸಾಮಾನ್ಯ ಎಂದು ಗುರುತಿಸಲಾಗಿದೆ. ಈ ಮತಗಟ್ಟೆಗಳಿಗೆ ನಿಯಮಾನುಸಾರ ಭದ್ರತೆ ನೀಡಲಾಗುವುದು. ಮತಯಂತ್ರ ಮತ್ತು ಇತರೆ ಪರಿಕರಗಳನ್ನು ನಗರದ ಸಂತ ಜೋಸೆಫ್ ಶಾಲೆಯಲ್ಲಿ ಬಿಗಿ ಬಂದೋಬಸ್ತಿನಲ್ಲಿ ಇಡಲಾಗಿದೆ ಎಂದರು.

ಮತ ಜಾಗೃತಿ; ಕಳೆದ ಲೋಕಸಭಾ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ಒಟ್ಟು 2,26,920 ಮತದಾರರಿಂದ ಶೇ 77.24 ರಷ್ಟು ಮತದಾನವಾಗಿತ್ತು. ಈ ಬಾರಿ ಮತಪ್ರಮಾಣ ಹೆಚ್ಚಿಸುವ ದಿಕ್ಕಿನಲ್ಲಿ ಸ್ವೀಪ್ ಸಮಿತಿ ಜಾಗೃತಿ ಆಂದೋಲನ ಹಮ್ಮಿಕೊಂಡಿದೆ. ಯುವ ಮತದಾರರನ್ನು ಜಾಗೃತಿಗೊಳಿಸುವ ದಿಕ್ಕಿನಲ್ಲಿ ಕಾಲೇಜು ಹಂತದಲ್ಲಿ ಜಾಗೃತಿ ಕಾರ್ಯಕ್ರಮ ಮತ್ತು ಮಾರ್ಚ್ 24 ರೊಳಗೆ ನೊಂದಣಿ ಅಭಿಯಾನ ಸಂಬಂಧಿಸಿದ ಅರಿವು ಕಾರ್ಯಕ್ರಮ ನಡೆಯಲಿದೆ ಎಂದು ಸ್ವೀಪ್ ಸಮಿತಿ ಉಸ್ತುವಾರಿ ಅಧಿಕಾರಿಯಾದ ತಾ.ಪಂ.ಇಓ ಶಿವಕುಮಾರ್ ತಿಳಿಸಿದರು.

ಹೆಚ್ಚು-ಕಡಿಮೆ ಮತದಾನ: ಕಳೆದ ಲೋಕಸಭಾ ಚುನಾವಣೆಯಲ್ಲಿ ಮಂಗಳೂರು ಮಾಳ ಮತಗಟ್ಟೆಯಲ್ಲಿ ಅತಿ ಹೆಚ್ಚು ಮತದಾನವಾಗಿದ್ದು, ಅತಿ ಕಡಿಮೆ ಚಿಕ್ಕಪಡುಕೋಡೆ ಮತಗಟ್ಟೆಯಲ್ಲಿ ದಾಖಲಾಗಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ತಹಶೀಲ್ದಾರ್ ನಯನ ಎಂ, ನಗರಸಭೆ ಆಯುಕ್ತೆ ಲಕ್ಷ್ಮಿ, ಗ್ರೇಡ್-2 ತಹಶೀಲ್ದಾರ್‌ಗಳಾದ ಯದುಗಿರೀಶ್, ನರಸಿಂಹಯ್ಯ ಇದ್ದರು.

ಇದನ್ನೂ ಓದಿ: Phone-Tapping Row: ಫೋನ್ ಕದ್ದಾಲಿಕೆ ಪ್ರಕರಣ.. ಗುಪ್ತಚರ ದಳದ ಮಾಜಿ ಮುಖ್ಯಸ್ಥ ನಂ.1 ಆರೋಪಿ

ಟಾಪ್ ನ್ಯೂಸ್

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.