
ಲಕ್ಷ್ಮಣತೀರ್ಥ ನದಿ ಪ್ರವಾಹಕ್ಕೆ ಕುಸಿದುಬಿದ್ದ ರೈಲ್ವೆ ಕಂಬಿ ತಡೆಗೋಡೆ, ಮತ್ತೆ ಕುಸಿಯುವ ಭೀತಿ
ನಾಗರಹೊಳೆ ಉದ್ಯಾನದಂಚಿನ ಕೋಣನಹೊಸಹಳ್ಳಿ ಬಳಿ ಘಟನೆ
Team Udayavani, Sep 14, 2022, 9:14 AM IST

ಹುಣಸೂರು; ನಾಗರಹೊಳೆ ಉದ್ಯಾನದಂಚಿನಲ್ಲಿ ನಿರ್ಮಿಸಿರುವ ರೈಲ್ವೆ ಕಂಬಿ ತಡೆಗೋಡೆ ಲಕ್ಷ್ಮಣ ತೀರ್ಥ ನದಿ ನೀರಿನ ಪ್ರವಾಹಕ್ಕೆ ಸಿಲುಕಿ ಕುಸಿದು ಬಿದ್ದಿದೆ.
ನಾಗರಹೊಳೆ ಉದ್ಯಾನವನದಂಚಿನ ತಾಲೂಕಿನ ಹನಗೋಡು ಹೋಬಳಿಯ ಕೋಣನಹೊಸಹಳ್ಳಿ ಬಳಿಯ ಲಕ್ಷ್ಮಣ ತೀರ್ಥ ನದಿ ಅಂಚಿನಲ್ಲಿ ನಿರ್ಮಿಸಿದ್ದ ಸುಮಾರು ೧೫ ಮೀಟರ್ನಷ್ಟು ಉದ್ದದ ರೈಲ್ವೆ ಕಂಬಿ ತಡೆಗೋಡೆ ಮಣ್ಣು ಸಹಿತ ಕುಸಿದು ಬಿದ್ದಿದೆ. ಕೊಡಗಿನ ಕುಟ್ಟ ಹಾಗೂ ನಾಗರಹೊಳೆ ರಾಷ್ಟ್ರೀಯ ಉದ್ಯಾನದಲ್ಲಿ ಸತತ ಮಳೆಯಿಂದಾಗಿ ಲಕ್ಷ್ಮಣ ತೀರ್ಥ ನದಿಯಲ್ಲಿ ಪ್ರವಾಹ ಹೆಚ್ಚಿದ್ದು, ಎರಡು ವರ್ಷಗಳ ಹಿಂದೆ ಇದೇ ರೀತಿ ತಡೆಗೋಡೆ ಕುಸಿದಿತ್ತು. ಮತ್ತಷ್ಟು ತಡೆಗೋಡೆ ಕುಸಿಯುವ ಸಂಭವವಿದೆ.
ಆನೆಗಳಿಗೆ ಸರಾಗ:
ತಡೆಗೋಡೆ ಕುಸಿದು ಬಿದ್ದಿದ್ದರಿಂದ ಕಾಡಾನೆಗಳು ಈ ಭಾಗದಿಂದ ಸರಾಗವಾಗಿ ಹೊರಬಂದು ಬೆಳೆಗಳನ್ನು ನಾಶಪಡಿಸುವ ಆತಂಕ ಒಂದೆಡೆಯಾದರೆ, ಮತ್ತೊಂದೆಡೆ ಗ್ರಾಮವು ಹತ್ತಿರದಲ್ಲೇ ಇರುವುದರಿಂದ ಕಾಡಾನೆಗಳು ಸರಾಗವಾಗಿ ಊರಿನೊಳಕ್ಕೂ ಬರುವ ಸಂಭವವಿದ್ದು, ಗ್ರಾಮಸ್ಥರು ಭಯಭೀತರಾಗಿದ್ದಾರೆ.
ಕಾಡಾನೆ ಭೀತಿಯಲ್ಲಿ ಜನರು: ಕಳೆದ ಅವಧಿಯಲ್ಲಿ ತಡೆಗೋಡೆ ಬಿದ್ದ ಸಂದರ್ಭದಲ್ಲಿ ಹೊರ ದಾಟಿದ್ದ ಕಾಡಾನೆಗಳು ಬೆಳೆ ನಾಶದ ಜೊತೆಗೆ ಊರೊಳಗೆ ಲಗ್ಗೆ ಸಲಗವು ವ್ಯಕ್ತಿಯೊಬ್ಬರನ್ನು ತಿವಿದು ಸಾಯಿಸಿತ್ತು. ಅಲ್ಲದೆ ಟ್ರಾö್ಯಕ್ಟರ್ನ್ನು ಉರುಳಿಸಿ, ಬೈಕ್ ಹಾಗೂ ಮನೆಗಳಿಗೆ ಹಾನಿಮಾಡಿದ್ದನ್ನು ಸ್ಮರಿಸಬಹುದು. ಶೀಘ್ರ ತಡೆಗೋಡೆ ಮರು ನಿರ್ಮಾಣಕ್ಕೆ ರೈತರು ಆಗ್ರಹಿಸಿದ್ದಾರೆ.
ಇದನ್ನೂ ಓದಿ : ಧಾರವಾಡ : ಭಾರಿ ಮಳೆಗೆ ಮನೆಗೋಡೆ ಕುಸಿದು ತಾಯಿ ಸೇರಿ ನಾಲ್ವರು ಮಕ್ಕಳಿಗೆ ಗಾಯ
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಲಿಜ ಸಮುದಾಯಕ್ಕೆ ಕೂಡಲೇ ಪೂರ್ಣ ಪ್ರಮಾಣದ 2ಎ ಮೀಸಲಾತಿ ಸೌಲಭ್ಯ ಕಲ್ಪಿಸಿ : ಮಾಜಿ ಸಚಿವ ಎಂ.ಆರ್. ಸೀತಾರಾಂ

ಬಿಎಸ್ ವೈ ಮಾರ್ಗದರ್ಶನ, ಬೊಮ್ಮಾಯಿ ನೇತೃತ್ವದಲ್ಲೇ ಮುಂದಿನ ಚುನಾವಣೆ: ನಳಿನ್ ಕಟೀಲ್

ಸುಮಲತಾ ಅವರು ಬಿಜೆಪಿ ಸೇರಿದರೆ ಸಂತೋಷ: ಸಿ.ಟಿ ರವಿ

ಭವಾನಿ ರೇವಣ್ಣಗೆ ಬಿಜೆಪಿ ಟಿಕೆಟ್ ಆಫರ್ ನೀಡಿದ ಸಿ.ಟಿ.ರವಿ!

ಸಿದ್ದರಾಮಯ್ಯನವರಿಗೆ ವರುಣಾದಲ್ಲಿ ಅವಕಾಶ ತೆರೆದ ಬಾಗಿಲು: ಡಾ.ಯತೀಂದ್ರ
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan

ಯಾರು ಬೇಕಾದರೂ ಸುಲಭವಾಗಿ ನಂದಿ ಬಟ್ಟಲು ಹೂವಿನಿಂದ ಸುಂದರ ಹಾರ ತಯಾಸಬಹುದು
ಹೊಸ ಸೇರ್ಪಡೆ

ಮಹಾದಾಯಿ ವಿವಾದ: “ದುರ್ಯೋಧನನಂತೆ ಕರ್ನಾಟದ ಧೋರಣೆ’

ಪ್ರವೀಣ್ ನೆಟ್ಟಾರ್ ಪ್ರಕರಣದಲ್ಲಿ ಪಿಎಫ್ಐ ಹೇಗೆ ಪ್ಲ್ಯಾನ್ ಮಾಡಿತ್ತು?: ಎನ್ಐಎ ವರದಿಯಲ್ಲೇನಿದೆ?

ಮಧುಗಿರಿ: ಲೋಕೋಪಯೋಗಿ ಇಲಾಖೆ ಅಧಿಕಾರಿ ನೇಣಿಗೆ ಶರಣು

ಸೆಲ್ಫಿ ತೆಗೆಯಲು ಪ್ರಯತ್ನಿಸಿದ ಅಭಿಮಾನಿಯ ಮೊಬೈಲ್ ಫೋನ್ ಎಸೆದ ರಣಬೀರ್ ಕಪೂರ್ ವಿಡಿಯೋ ವೈರಲ್!

ಬಿಬಿಸಿ ಡಾಕ್ಯುಮೆಂಟರಿ ಪ್ರದರ್ಶಿಸಲು ಮುಂದಾದ ಯೂನಿರ್ವಸಿಟಿಗಳ ವಿದ್ಯುತ್ ಸರಬರಾಜು ಸ್ಥಗಿತ…