ಹುಣಸೂರು : ತಾವು ಗಳಿಸಿದ್ದರಲ್ಲಿ ಉಳಿಸಿ ಅಮ್ಮನ ಹೆಸರಲ್ಲಿ ಕೊಡುಗೆ ನೀಡುವ ಸತ್ಯಾನಂದರಾವ್


Team Udayavani, Sep 14, 2022, 2:43 PM IST

ತಾವು ಗಳಿಸಿದ್ದರಲ್ಲಿ, ಉಳಿಸಿ ಅಮ್ಮನ ಹೆಸರಲ್ಲಿ ಕೊಡುಗೆ ನೀಡುವ ಸತ್ಯಾನಂದರಾವ್

ಹುಣಸೂರು : 9 ದಶಕಗಳ ಹಿಂದೆ ತಮ್ಮ ತಾಯಿ ವ್ಯಾಸಂಗ ಮಾಡಿದ ಹುಣಸೂರಿನ ಪ್ರಾಥಮಿಕ ಮತ್ತು ಫ್ರೌಢಶಾಲೆಗೆ ಅವರ ಮಕ್ಕಳು ಹಲವಾರು ಕೊಡುಗೆ ನೀಡುವ ಮೂಲಕ ಮಾದರಿಯಾಗಿದ್ದಾರೆ.

ಹುಣಸೂರಿನ ಬ್ರಾಹ್ಮಣರ ಬಡಾವಣೆಯಲ್ಲಿ ವಾಸವಿದ್ದ ನಾಗಲಕ್ಷ್ಮಮ್ಮನವರು 90 ವರ್ಷಗಳ ಹಿಂದೆ ಇಲ್ಲಿನ ಬಾಲಕಿಯರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವ್ಯಾಸಂಗ ಮಾಡಿದ್ದರು. ಅವರ ಮಕ್ಕಳು ಉನ್ನತ ವ್ಯಾಸಂಗ ಪಡೆದು ವಿವಿಧೆಡೆ ಉದ್ಯಮಿಗಳಾಗಿದ್ದು, ಇದೀಗ ಅವರ ಮಕ್ಕಳು ಅಮ್ಮ ನಾಗಲಕ್ಷ್ಮಮ್ಮನವರ ಹೆಸರಿನಲ್ಲಿ ನರಸೀಪುರ ದೊಡ್ಡಮನೆ ಸುಜನ ಚಾರಿಟೇಬಲ್ ಟ್ರಸ್ಟ್ ರಚಿಸಿಕೊಂಡು ಹಲವಾರು ಶೈಕ್ಷಣಿಕ ಚಟುವಟಿಕೆಗಳ ಮೂಲಕ ಶೈಕ್ಷಣಿಕ ಪ್ರಗತಿಗೆ ಶ್ರಮಿಸುತ್ತಿದ್ದಾರೆ.

ಶಾಲೆಗಳಿಗೆ ಕೊಡುಗೆ:
ದಿ.ನಾಗಲಕ್ಷ್ಮಮ್ಮನವರ ಸ್ಮರಣಾರ್ಥ ಈ ಬಾರಿ ಬಾಲಕಿಯರ ಸರಕಾರಿ ಪ.ಪೂ.ಕಾಲೇಜಿನ ಪ್ರೌಢಶಾಲಾ ವಿಭಾಗಕ್ಕೆ ವಿದ್ಯುತ್ ಚಾಲಿತ ಪ್ಯಾಡ್ ಬರ್ನಿಂಗ್ ಯಂತ್ರವನ್ನು ಕೊಡುಗೆಯಾಗಿ ನೀಡಿದ್ದಲ್ಲದೆ, ೮ನೇ ತರಗತಿಯ ೬, ೯ ಮತ್ತು ೧೦ನೇ ತರಗತಿಯ ತಲಾ ಮೂರು ಸೇರಿದಂತೆ ೧೨ಮಂದಿ ಪ್ರತಿಭಾನ್ವಿತ ವಿದ್ಯಾರ್ಥಿನಿಯರಿಗೆ ಮಾಹೆಯಾನ ೫೦೦ರೂಗಳ ವಿದ್ಯಾರ್ಥಿವೇತನ ನೀಡುತ್ತಿದ್ದಾರೆ. ಹಿಂದೆ ಬಾಲಕಿಯರ ಹಿರಿಯ ಪ್ರಾಥಮಿಕ ಶಾಲೆಗೆ ಕೊಳವೆಬಾವಿ ಹಾಕಿಸಿ ನೀರಿನ ಸೌಲಭ್ಯ ಕಲ್ಪಿಸಿಕೊಟ್ಟಿದ್ದಾರೆ. ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ವಿಜ್ಞಾನದ ಉಪಕರಣಗಳನ್ನು ತಂದು ಪ್ರಾತ್ಯಕ್ಷತೆ ಮೂಲಕ ವಿವಿಧ ಪ್ರಯೋಗಗಳನ್ನು ಮಾಡಿ ವಿದ್ಯಾರ್ಥಿಗಳಲ್ಲಿ ವಿಜ್ಞಾನದ ಕುರಿತು ಹೆಚ್ಚು ಆಸಕ್ತಿ ಬೆಳೆಸಿ ಉತ್ತಮ ಅಂಕ ಪಡೆಯಲು ಸಹಕಾರಿಯಾಗಿದ್ದಾರೆ.

ಬಿಇಓ ಶ್ಲಾಘನೆ:
ಟ್ರಸ್ಟ್ ಕೊಡುಗೆಯಾಗಿ ನೀಡಿದ ಪ್ಯಾಡ್ ಬರ್ನಿಂಗ್ ಯಂತ್ರಕ್ಕೆ ಚಾಲನೆ ನೀಡಿ ಮಾತನಾಡಿದ ಬಿಇಓ ರೇವಣ್ಣರವರು ತಾಯಿ ಓದಿದ ಶಾಲೆಗೆ ನರಸೀಪುರದ ದೊಡ್ಡಮನೆ ಸುಜನ ಚಾರಿಟಬಲ್ ಟ್ರಸ್ಟ್ ಮೂಲಕ ಅವರ ಮಕ್ಕಳು ಸರಕಾರಿ ಶಾಲೆಗೆ ಅನೇಕ ರೀತಿಯಲ್ಲಿ ನೆರವಾಗುತ್ತಿರುವುದು ಶ್ಲಾಘನೀಯ ಕಾರ್ಯ, ಇತರರಿಗೂ ಮಾದರಿಯೂ ಹೌದೆಂದ ಅವರು ಶಾಲೆಯ ಶಿಕ್ಷಕರಿಗಾಗಿ ಶೌಚಾಲಯ ನಿರ್ಮಿಸಿಕೊಡುವಂತೆ ಮನವಿ ಮಾಡಿದರು.

ಈ ವೇಳೆ ಮಾತನಾಡಿದ ನಾಗಲಕ್ಷ್ಮಮ್ಮರ ಪುತ್ರ, ಟ್ರಸ್ಟಿ ಎಂ.ಸತ್ಯಾನಂದರಾವ್ ನನ್ನ ಅಮ್ಮನಿಂದಾಗಿ ಇಂದು ಉದ್ಯಮಿಯಾಗಿ ಬೆಳೆದಿದ್ದೇನೆ, ಅಮ್ಮ ವಿದ್ಯೆ ಕಲಿತ ಶಾಲೆಗೆ ಏನಾದರೂ ಕೊಡುಗೆ ನೀಡಬೇಕೆಂಬ ಹಂಬಲದಿಂದಾಗಿ ಈ ಕೊಡುಗೆ ನೀಡಿದ್ದೇವೆ. ಮುಂದೆ ಎಸ್.ಎಸ್.ಎಲ್.ಸಿ.ಯಲ್ಲಿ ಶೇ.೯೦ಕ್ಕೂ ಹೆಚ್ಚು ಅಂಕ ಪಡೆವ ಈ ಶಾಲೆಯ ವಿದ್ಯಾರ್ಥಿಗಳಿಗೆ ಮೆರಿಟ್ ಸ್ಕಾಲರ್‌ಶಿಪ್ ನೀಡುವ ಹಾಗೂ ಶಾಲೆಯ ಪ್ರಗತಿಗೆ ನೆರವಾಗುತ್ತೇವೆಂದು ಪ್ರಕಟಿಸಿದರು.

ಶಿಕ್ಷಕರ ದಿನಾಚರಣೆ ಅಂಗವಾಗಿ ಶಾಲೆಯ ಎಲ್ಲ ಶಿಕ್ಷಕರಿಗೆ ಟ್ರಸ್ಟ್ವತಿಯಿಂದ ಗೌರವಿಸಲಾಯಿತು. ಈ ವೇಳೆ ಉಪ ಪ್ರಾಚಾರ್ಯರಾದ ಬಿ.ಎನ್.ಗೀತಾ, ಟ್ರಸ್ಟ್ನ ಸುಜಾತಾರಾವ್, ಎನ್.ಎಸ್.ಪ್ರಕಾಶ್, ಎನ್.ಆರ್.ಕುಮಾರ್ ಹಾಗೂ ಮೀನಾಕ್ಷಿಕುಮಾರ್, ಶಿಕ್ಷಕವೃಂದ ಹಾಜರಿದ್ದರು.

Ad

ಟಾಪ್ ನ್ಯೂಸ್

1-aa-aa-rd

ವನಿತಾ ಟಿ20 ಸರಣಿ: 4ನೇ ಗೆಲುವಿಗೆ ಭಾರತ ಕಾತರ

1-aa-aa-huli

ಹುಲಿಕಲ್‌ ಘಾಟಿ ರಸ್ತೆ ಅಭಿವೃದ್ಧಿ ; 39.50 ಕೋ.ರೂ. ಪ್ರಸ್ತಾವನೆ

ವಿಮಾನ ದುರಂತದ ವರದಿ ಶೀಘ್ರವೇ ಬಹಿರಂಗ: ಸಚಿವ ಕೆ.ರಾಮಮೋಹನ್‌ ನಾಯ್ಡು

ವಿಮಾನ ದುರಂತದ ವರದಿ ಶೀಘ್ರವೇ ಬಹಿರಂಗ: ಸಚಿವ ಕೆ.ರಾಮಮೋಹನ್‌ ನಾಯ್ಡು

Mumbai; ಹಲ್ಲೆಕೋರ ಮಹಾರಾಷ್ಟ್ರ “ಶಿಂಧೆ’ ಶಾಸಕನ ವಿರುದ್ಧ 2 ದಿನ ಬಳಿಕ ಎಫ್ಐಆರ್‌

Mumbai; ಹ*ಲ್ಲೆಕೋರ ಮಹಾರಾಷ್ಟ್ರ “ಶಿಂಧೆ’ ಶಾಸಕನ ವಿರುದ್ಧ 2 ದಿನ ಬಳಿಕ ಎಫ್ಐಆರ್‌

ಇರಾನ್‌ನಿಂದ ಮತ್ತೊಮ್ಮೆ ಅಣು ಯೋಜನೆ ಆರಂಭ ಸಾಧ್ಯತೆ: ಇಸ್ರೇಲ್‌ಇರಾನ್‌ನಿಂದ ಮತ್ತೊಮ್ಮೆ ಅಣು ಯೋಜನೆ ಆರಂಭ ಸಾಧ್ಯತೆ: ಇಸ್ರೇಲ್‌

ಇರಾನ್‌ನಿಂದ ಮತ್ತೊಮ್ಮೆ ಅಣು ಯೋಜನೆ ಆರಂಭ ಸಾಧ್ಯತೆ: ಇಸ್ರೇಲ್‌

ಪುತ್ರಿ ಹಣದಲ್ಲೇ ಜೀವನ ಎಂಬ ಕುಹಕ ಮಾತಿಗೆ ಕೊ*ಲೆ: ಆರೋಪಿ ತಂದೆ ಒಪ್ಪಿಗೆಪುತ್ರಿ ಹಣದಲ್ಲೇ ಜೀವನ ಎಂಬ ಕುಹಕ ಮಾತಿಗೆ ಕೊ*ಲೆ: ಆರೋಪಿ ತಂದೆ ಒಪ್ಪಿಗೆ

ಪುತ್ರಿ ಹಣದಲ್ಲೇ ಜೀವನ ಎಂಬ ಕುಹಕ ಮಾತಿಗೆ ಕೊ*ಲೆ: ಆರೋಪಿ ತಂದೆ ಒಪ್ಪಿಗೆ

Kolukkumala; ಹೂ ಬದಲು ಹುಲಿಯ ದರ್ಶನ: ಸ್ವಲ್ಪದರಲ್ಲೇ ಕೇರಳ ಚಾರಣಿಗ ಪಾರು

Kolukkumala; ಹೂ ಬದಲು ಹುಲಿಯ ದರ್ಶನ: ಸ್ವಲ್ಪದರಲ್ಲೇ ಕೇರಳ ಚಾರಣಿಗ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೃದಯಾಘಾತ: ಮತ್ತೆ ನಾಲ್ವರು ದಿಢೀರ್‌ ಸಾವು

ಹೃದಯಾಘಾತ: ಮತ್ತೆ ನಾಲ್ವರು ದಿಢೀರ್‌ ಸಾವು

ದ್ವೇಷ ಭಾಷಣ ಮಾಡಬೇಡಿ: ಹರೀಶ್‌ ಪೂಂಜಗೆ ಹೈಕೋರ್ಟ್‌

ದ್ವೇಷ ಭಾಷಣ ಮಾಡಬೇಡಿ: ಹರೀಶ್‌ ಪೂಂಜಗೆ ಹೈಕೋರ್ಟ್‌

ಯುಜಿಸಿಇಟಿ: ಆಪ್ಷನ್‌ ಎಂಟ್ರಿ ದಿನಾಂಕ ವಿಸ್ತರಣೆ

KEA; ಯುಜಿಸಿಇಟಿ: ಆಪ್ಷನ್‌ ಎಂಟ್ರಿ ದಿನಾಂಕ ವಿಸ್ತರಣೆ

ಹೈಕೋರ್ಟ್‌

ಸಿಬಿಎಸ್‌ಸಿ ಶಾಲೆಗಳಲ್ಲಿ ಕನ್ನಡ ಕಡ್ಡಾಯ: ಆಕ್ಷೇಪಣೆ ಸಲ್ಲಿಸಲು ಸರಕಾರಕ್ಕೆ ಹೈಕೋರ್ಟ್‌ ಸೂಚನೆ

High Court: ಬಿಜೆಪಿ ವಿರುದ್ಧ 40 ಪರ್ಸೆಂಟ್‌ ಆರೋಪ; ಸಿಎಂ ವಿರುದ್ಧದ ವಿಚಾರಣೆಗೆ ತಡೆ

High Court: ಬಿಜೆಪಿ ವಿರುದ್ಧ 40 ಪರ್ಸೆಂಟ್‌ ಆರೋಪ; ಸಿಎಂ ವಿರುದ್ಧದ ವಿಚಾರಣೆಗೆ ತಡೆ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

1-aa-aa-rd

ವನಿತಾ ಟಿ20 ಸರಣಿ: 4ನೇ ಗೆಲುವಿಗೆ ಭಾರತ ಕಾತರ

1-aa-aa-huli

ಹುಲಿಕಲ್‌ ಘಾಟಿ ರಸ್ತೆ ಅಭಿವೃದ್ಧಿ ; 39.50 ಕೋ.ರೂ. ಪ್ರಸ್ತಾವನೆ

police

ಬಾಕಿ ಬಿಲ್‌ ಕೇಳಿದ ಮಾಲಕ: ಅಂಗಡಿ ಬ್ಯಾನರ್‌ಗೆ ಬೆಂಕಿ ಹಚ್ಚಿದ ಗ್ರಾಹಕ

arrest-lady

ವಿಚಾರಣಾಧೀನ ಕೈದಿಗೆ ನೀಡಲು ತಂದಿದ್ದ ಅನುಮಾನಾಸ್ಪದ ಪುಡಿ; ಮಹಿಳೆ ವಶಕ್ಕೆ

Malpe ಸೈಂಟ್‌ ಮೇರಿಸ್‌ ಬಳಿ ನಾಡದೋಣಿ ದುರ್ಘ‌ಟನೆ: ದೋಣಿ ಮಗುಚಿ ಓರ್ವ ಸಾವು, ಇಬ್ಬರಿಗೆ ಗಾಯ

Malpe ಸೈಂಟ್‌ ಮೇರಿಸ್‌ ಬಳಿ ನಾಡದೋಣಿ ದುರ್ಘ‌ಟನೆ: ದೋಣಿ ಮಗುಚಿ ಓರ್ವ ಸಾವು, ಇಬ್ಬರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.