ಹುಣಸೂರು: ಕೊಟ್ಟಿಗೆಗೆ ನುಗ್ಗಿದ ಹುಲಿಯೊಂದಿಗೆ ಸೆಣಸಿ ಪ್ರಾಣ ಉಳಿಸಿಕೊಂಡ ಹಸು
Team Udayavani, Dec 19, 2022, 10:12 PM IST
ಹುಣಸೂರು: ನಾಗರಹೊಳೆ ಉದ್ಯಾನದಂಚಿನ ಕೆ.ಜಿ.ಹೆಬ್ಬನಕುಪ್ಪೆಯಲ್ಲಿ ಸೋಮವಾರ ಬೆಳಗಿನ ಜಾವ ಹುಲಿಯೊಂದು ಕೊಟ್ಟಿಗೆಗೆ ನುಗ್ಗಿ ಹಸುವಿನ ಮೇಲೆ ದಾಳಿ ನಡೆಸಿದೆ.
ನೇರಳಕುಪ್ಪೆ ಗ್ರಾಮ ಪಂಚಾಯ್ತಿ ಅಧ್ಯಕ್ಷ ಉದಯ್ ಎಂಬುವರು ತಮ್ಮ ಕೆ.ಜಿ.ಹಬ್ಬನಕುಪ್ಪೆಯ ತೋಟದ ಕೊಟ್ಟಿಗೆಯಲ್ಲಿ ಹಸು ಕಟ್ಟಿ ಹಾಕಿದ್ದು, ಹಸುವಿನ ಮೇಲೆ ಹುಲಿಯ ದಾಳಿಯಿಂದ ಗಾಬರಿಗೊಂಡ ಹಸು ಎಗರಿದ್ದರಿಂದ ಕಟ್ಟಿದ್ದ ಹಗ್ಗ ತುಂಡಾಗಿದ್ದರಿಂದಾಗಿ ಹುಲಿ ಬಾಯಿಯಿಂದ ತಪ್ಪಿಸಿಕೊಂಡಿದೆ. ಹುಲಿ ಹಸುವಿನ ಮೇಲೆ ಮತ್ತೆ ದಾಳಿ ನಡೆಸಿದರೂ ಹಸು ಮಾತ್ರ ಹುಲಿಯೊಂದಿಗೆ ಸೆಣಸಾಟ ನಡೆಸಿ ಹುಲಿ ಬಾಯಿಂದ ಪಾರಾಗಿದ್ದು, ಮುಂಜಾನೆ ಹಾಲು ಕರೆಯಲು ಮನೆಯವರು ತೆರಳಿದ್ದ ವೇಳೆ ಹುಲಿ ಕಾಡಿನತ್ತ ಓಡಿಹೋಗಿದೆ.
ಮಾಹಿತಿ ನೀಡಿದ ಮೇರೆಗೆ ಸ್ಥಳಕ್ಕೆ ಅರಣ್ಯ ಇಲಾಖೆಯ ಸಿಬ್ಬಂದಿಗಳು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಗಾಯಗೊಂಡಿರುವ ಹಸುವಿಗೆ ಚಿಕಿತ್ಸೆ ಕೊಡಿಸಿದ್ದಾರೆ.
ಗ್ರಾಮಸ್ಥರ ಆಗ್ರಹ;
ಈ ಭಾಗದ ಜನರು ಭಯಬೀತರಾಗಿದ್ದು, ಬೋನಿಟ್ಟು ಹುಲಿ ಸೆರೆಹಿಡಿಯುವಂತೆ ಅರಣ್ಯ ಇಲಾಖೆಯನ್ನು ನೇರಳಕುಪ್ಪೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಇದನ್ನೂ ಓದಿ: ಸ್ಯಾಮ್ ಸಂಗ್ ಗೆಲಾಕ್ಸಿ ಎಫ್ 13: ಹತ್ತು ಸಾವಿರ ಬಜೆಟ್ ನ ಆಯ್ಕೆಗಳಲ್ಲಿ ಸ್ಥಾನ ಪಡೆವ ಫೋನ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ