ಅರಸುರವರಿಗೆ ಅರಸುರವರೇ ಸಾಟಿ, ನಾವೆಲ್ಲಾ ಅವರ ಕಾಲಿನ ದೂಳಿಗೂ ಸಮಾನರಲ್ಲ. ಶಾಸಕ ಮಂಜುನಾಥ್


Team Udayavani, Aug 20, 2021, 8:13 PM IST

hunasuru news

ಹುಣಸೂರು:ದೇವರಾಜ ಅರಸರು ಸಣ್ಣ ಸಮುದಾಯಗಳ ದಾರಿ ದೀಪವಾಗಿದ್ದರು. ಅವರ ಯೋಚನೆ-ಯೋಜನೆ, ಸಿದ್ದಾಂತ ಯಾವಾಗಲೂ ಸಾಮಾಜಿಕ ನ್ಯಾಯದ ಪರವಾಗಿರುತ್ತಿತ್ತೆಂದು ಶಾಸಕ ಎಚ್.ಪಿ.ಮಂಜುನಾಥ್ ಬಣ್ಣಿಸಿದರು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆವತಿಯಿಂದ ಆಯೋಜಿಸಿದ್ದ ದೇವರಾಜ ಅರಸರ 106ನೇ ಜನ್ಮದಿನದ ಅಂಗವಾಗಿ ನಗರದ ಎಪಿಎಂಸಿ ಬಳಿಯ ದೇವರಾಜ ಅರಸರ ಪುತ್ಥಳಿಗೆ ಎಂ.ಎಲ್.ಸಿ. ಅಡಗೂರು ಎಚ್.ವಿಶ್ವನಾಥರೊಂದಿಗೆ ಮಾಲಾರ್ಪಣೆ ಗೈದು, ನೂತನವಾಗಿ ನಿರ್ಮಿಸಿರುವ ಗೋಪುರವನ್ನು ಉದ್ಘಾಟಿಸಿ ಮಾತನಾಡಿದರು.

ಅರಸರು ತಮ್ಮ ಅಧಿಕಾರದ ಅವಧಿಯಲ್ಲಿ ಪ್ರತಿ ಮನೆಗೂ ಸವಲತ್ತು ತಲುಪುವಂತೆ ಯೋಜನೆ ರೂಪಿಸಿದ್ದರು, ಇಡೀ ದೇಶಕ್ಕೆ ಮೈಸೂರಿನ ನಾಲ್ವಡಿ ಕೃಷ್ಣರಾಜ ಒಡೆಯರ್, ನಂತರ ದೇವರಾಜರಸರು ಮಾದರಿ ಆಡಳಿತ ನೀಡಿದವರು, ಅವರ ಹಾದಿಯಲ್ಲಿ ಸಿದ್ದರಾಮಯ್ಯ ಆಡಳಿತ ನೀಡಿದ್ದಾರೆ.

ಅರಸುರವರಿಗೆ ಅರಸುರವರೇ ಸಾಟಿ, ನಾವೆಲ್ಲಾ ಅವರ ಕಾಲಿನ ದೂಳಿಗೂ ಸಮಾನರಲ್ಲ. ಆದರೆ ಅವರು ಬಂದ ದಾರಿಯಲ್ಲಿ, ಅರಸರ ಕನಸನ್ನು ನನಸು ಮಾಡುವ ಕಡೆಗೆ ಹೊರಟಿದ್ದೇವೆ. ಅರಸರ ಹುಟ್ಟೂರು ಕಲ್ಲಹಳ್ಳಿ ಅಭಿವೃದ್ದಿಯನ್ನು ಗ್ರಾಮಸ್ಥರ ಆಶಯದಂತೆ ಕೈಗೊಳ್ಳಲಾಗಿದೆ. ಮತ್ತಷ್ಟು ಅಭಿವೃದ್ದಿ ಅನುದಾನದ ಕೊರತೆಯಿಂದ ಸ್ಥಗಿತಗೊಂಡಿದೆ ಎಂದರು. ಅರಸರ ಹೆಸರಿನಲ್ಲಿ ಜಿಲ್ಲೆಯನ್ನಾಗಿಸುವ ಸಂಬಂಧ ಪಕ್ಷಬೇದ ಮರೆತು ಎಲ್ಲರೂ ಒಗ್ಗಟ್ಟಾಗಿ ಮನವಿ ಸಲ್ಲಿಸುವ ಹಾಗೂ ರೂಪು ರೇಷೆ ನಿರ್ಮಿಸಲಾಗುವುದೆಂದರು.

ಇದನ್ನೂ ಓದಿ:ತೆರೆ ಮೇಲೆ ಬರಲಿದೆ ಡ್ರೋನ್ ಪ್ರತಾಪ್ ವಂಚನೆ : ಪ್ರತಾಪ್ ಪಾತ್ರದಲ್ಲಿ ಪ್ರಥಮ್

ಆಧುನಿಕ ಸ್ಪರ್ಶ ನೀಡಿದ ರಾಜೀವಗಾಂಧಿ: ಮಾಜಿ ಪ್ರಧಾನಿ ದಿ.ರಾಜೀವ್ ಗಾಂಧಿಯವರ ಹುಟ್ಟು ಹಬ್ಬವೂ ಇಂದೇ ಆಗಿದ್ದು, ಅವರ ಆಡಳಿತದಲ್ಲಿ ದೇಶಕ್ಕೆ ಆಧುನಿಕ ಸ್ಪರ್ಶ ನೀಡಿದ್ದಾರೆ. ಅಲ್ಲದೆ ಸ್ಥಳೀಯ ಸಂಸ್ಥೆಗಳ ವಿಕೇಂದ್ರೀಕರಣಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆಂದು ಸ್ಮರಿಸಿದರು.

ಅರಸರ ಹೆಸರೇ ರೋಮಾಂಚನ: ಎಂ.ಎಲ್.ಸಿ.ವಿಶ್ವನಾಥರು ಮಾತನಾಡಿ ನನ್ನ ರಾಜಕೀಯ ಗುರು ದೇವರಾಜ ಅರಸರ ಹೆಸರೇ ಒಂದು ರೋಮಾಂಚನ, ಆವರ ಆಡಳಿತಾವಧಿಯಲ್ಲಿ  ಉಳುವವನೇ ಭೂಮಿ ಒಡೆಯ, ಜೀತವಿಮುಕ್ತಿ- ಮಲಹೊರುವ ಪದ್ದತಿ ನಿಷೇಧದಂತಹ  ಕ್ರಾಂತಿಕಾರಿ ಯೋಜನೆಗಳು ದೇಶಕ್ಕೆ ಮಾದರಿಯಾಗಿದ್ದು, ಇವರ ಆಡಳಿತ ಅಜರಾಮರವಾಗಿದೆ ಎಂದು ಸ್ಮರಿಸಿದರು.

ರಕ್ತಪಾತವಿಲ್ಲದೆ ಭೂ ಸುಧಾರಣೆ ಕಾಯ್ದೆ ಜಾರಿಗೆ ತಂದ ಮಹಾನ್ ನಾಯಕ, ಇವರ ಅವಧಿಯಲ್ಲಿ ಭೂಮಿ,ನೀರು, ಉದ್ಯೋಗ,ಶಿಕ್ಷಣಕ್ಕೆ ಆಧ್ಯತೆ ನೀಡಿದ್ದಲ್ಲದೆ ಹಾವನೂರು ವರದಿಯನ್ನು ಜಾರಿಗೆ ತಂದು ಹಿಂದುಳಿದ ವರ್ಗಗಳ ಜ್ಯೋತಿಯಾಗಿದ್ದಾರೆ. ಅರಸರ ಶತಮಾನೋತ್ಸವವನ್ನು ಸಿದ್ದರಾಮಯ್ಯ ಸರಕಾರದ ಅವಧಿಯಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಹುಟ್ಟಿದ ಊರು ಬೆಟ್ಟದ ತುಂಗ, ಬೆಳೆದ ಹಳ್ಳಿ ಕಲ್ಲಹಳ್ಳಿಯನ್ನು ತಲಾ 10ಕೋಟಿ ವೆಚ್ಚದಲ್ಲಿ ಅಭಿವೃದ್ದಿ ಪಡಿಸಲಾಗುತ್ತಿದೆ ಎಂದರು.

ಶಿಕ್ಷಕ ಜೆ.ಮಹದೇವ್ ಅರಸರ  ಹೋರಾಟ, ಬದುಕು, ಕಾರ್ಯಕ್ರಮಗಳ ಕುರಿತು ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ  ನಗಗರಸಭೆ ಉಪಾಧ್ಯಕ್ಷರು, ಅಧಿಕಾರಿಗಳು, ರಾಜಕೀಯ ಮುಖಂಡರು ಸೇರಿದಂತೆ ಅನೇಕರು ಮಾಸ್ಕ್ ಧರಿಸದೆ ಸಾಮಾಜಿಕ ಅಂತರವೂ ಕಾಯ್ದುಕೊಳ್ಳದೆ ಭಾಗಿಯಾಗಿದ್ದರೂ ಸಹ ಹಿರಿಯ ಅಧಿಕಾರಿಗಳು  ಮೌನಕ್ಕೆ ಶರಣಾಗಿದ್ದರು.

ಕಾರ್ಯಕ್ರಮದಲ್ಲಿ ಎ.ಸಿ.ವರ್ಣಿತ್ ನೇಗಿ, ತಾ.ಪಂ.ಇ.ಓ.ಗಿರೀಶ್, ತಹಸೀಲ್ದಾರ್ ಮೋಹನ್‌ಕುಮಾರ್, ನಗರಸಭೆ ಅಧ್ಯಕ್ಷೆ ಅನುಷಾ, ಉಪಾಧ್ಯಕ್ಷ ದೇವನಾಯ್ಕ ಹಾಗೂ ಸದಸ್ಯರು, ಹುಡಾ ಅಧ್ಯಕ್ಷ ಗಣೇಶಕುಮಾರಸ್ವಾಮಿ, ಹಿಂದುಳಿದವರ್ಗಗಳ ಕಲ್ಯಾಣಾಧಿಕಾರಿ ಸುಜೇಂದ್ರಕುಮಾರ್, ಡಿವೈಎಸ್‌ಪಿ ರವಿಪ್ರಸಾದ್, ಬಿಇಓ ನಾಗರಾಜ್, ಪೌರಾಯುಕ್ತ ರಮೇಶ್,ಎಇಇ ಬೋಜರಾಜ್, ಸಿದ್ದಪ್ಪ, ಕೃಷಿ ಅಧಿಕಾರಿ ವೆಂಕಟೇಶ್, ಮುಖಂಡರಾದ ದೇವರಾಜ್, ನಾರಾಯಣ್, ಕಲ್ಕುಣಿಕೆರಮೇಶ್, ನಾಗರಾಜಮಲ್ಲಾಡಿ, ವಕೀಲ ಶಿವಕುಮಾರ್, ನಿಂಗರಾಜಮಲ್ಲಾಡಿ, ಲೋಕೇಶ್, ರವಿಪ್ರಸನ್ನ, ಗಣಪತಿರಾವ್ ಇಂಡೋಲ್ಕರ್, ಪಾಂಡುಕುಮಾರ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

11-

UPSC ಪರೀಕ್ಷೆಯಲ್ಲಿ ಹುಣಸೂರಿನ ಲೇಖನ್‌ಗೆ 77ನೇ ರ‍್ಯಾಂಕ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.