
ಹುಣಸೂರು: ಸಾಲಬಾಧೆಯಿಂದ ರೈತ ನೇಣಿಗೆ ಶರಣು
Team Udayavani, Jan 23, 2023, 9:57 PM IST

ಹುಣಸೂರು: ಲಕ್ಷಾಂತರ ರೂ ಸಾಲ ಮಾಡಿಕೊಂಡಿದ್ದ ರೈತರೊಬ್ಬರು ನೇಣಿಗೆ ಶರಣಾದ ಘಟನೆ ತಾಲೂಕಿನ ಬನ್ನಿಕುಪ್ಪೆಯಲ್ಲಿ ನಡೆದಿದೆ.
ಹುಣಸೂರು ತಾಲೂಕಿನ ಬನ್ನಿಕುಪ್ಪೆಯ ಜವರನಾಯಕರ ಪುತ್ರ ಶಿವಣ್ಣನಾಯಕ(೫೬) ನೇಣಿಗೆ ಕೊರಳೊಡ್ಡಿದಾತ. ಇವರಿಗೆ ಪತ್ನಿ, ಇಬ್ಬರು ಮಕ್ಕಳಿದ್ದಾರೆ.
ಘಟನೆ ವಿವರ: ಶಿವಣ್ಣ ನಾಯಕರ ಹೆಸರಿನಲ್ಲಿ ಹೆಸರಿನಲ್ಲಿ 2.20 ಎಕರೆ ಜಮೀನಿದ್ದು, ವ್ಯವಸಾಯಕ್ಕಾಗಿ, ಸಂಸಾರ ನಿರ್ವಹಿಸಲು ಮತ್ತು ಮಗಳ ಮದುವೆ ಮಾಡಲು ಬನ್ನಿಕುಪ್ಪೆ ಗ್ರಾಮದಲ್ಲಿರುವ ಕರ್ನಾಟಕ ಗ್ರಾಮೀಣ ಬ್ಯಾಂಕ್ ನಲ್ಲಿ 7.5 ಲಕ್ಷ ಸಾಲ ಹಾಗೂ ಮಹಿಳಾ ಸಂಘಗಳಿಂದ ಸಾಲ ಮಾಡಿ ಜಮೀನಿನಲ್ಲಿ ಹೊಗೆ ಸೊಪ್ಪು ಬೆಳೆ ಬೆಳೆದಿದ್ದು, ಕಳೆದ ಆರು ತಿಂಗಳ ಹಿಂದೆ ಸುರಿದ ಧಾರಾಕಾರ ಮಳೆಗೆ ಬೆಳೆ ನಷ್ಟವಾಗಿ, ನಿರೀಕ್ಷೆಯಂತೆ ಬೆಳೆ ಬಾರದ ಹಿನ್ನೆಲೆಯಲ್ಲಿ ಸಾಲ, ಬಡ್ಡಿ ಜಾಸ್ತಿಯಾಗಿ ಸಾಲ ಭಾದೆಯಿಂದ ಮನನೊಂದ ಶಿವಣ್ಣ ನಾಯಕ ಜೀವನದಲ್ಲಿ ಜಿಗುಪ್ಸೆಗೊಂಡು ತನ್ನ ಜಮೀನಿನಲ್ಲಿರುವ ಮಾವಿನ ಮರಕ್ಕೆ ಭಾನುವಾರ ಸಂಜೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು, ಮನೆಯವರು ಹುಡುಕಾಟ ನಡೆಸಿ ಜಮೀನಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿತ್ತು. ಶಿವಣ್ಣನಾಯಕರ ಪುತ್ರ ಸತೀಶ್ ಬಿಳಿಕೆರೆ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.
ಹುಣಸೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ನಂತರ ಶವವನ್ನು ಸ್ವಗ್ರಾಮದಲ್ಲಿ ಅಂತ್ಯ ಸಂಸ್ಕಾರ ನಡೆಸಿದರು. ವಿಷಯ ತಿಳಿದ ಶಾಸಕ ಎಚ್.ಪಿ.ಮಂಜುನಾಥ್ ಭೇಟಿ ನೀಡಿ ಅಂತಿಮ ದರ್ಶನ ಪಡೆದು ಸಾಂತ್ವಾನ ಹೇಳಿದರು.
ಇದನ್ನೂ ಓದಿ: 2 ವರ್ಷಗಳಿಂದ ಸ್ಥಗಿತಗೊಂಡಿದ್ದ ಕ್ಯಾಮನಹಳ್ಳಿ ಶ್ರೀ ಆಂಜನೇಯ ಸ್ವಾಮಿ ದನಗಳ ಜಾತ್ರೆಗೆ ಮತ್ತೆ ಕಳೆ
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress Guarantee ಬಜರಂಗದಳದ ನಿರುದ್ಯೋಗಿಗಳಿಗೂ ಯುವನಿಧಿ ಫ್ರೀ!

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ…: ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Congress ಗ್ಯಾರಂಟಿ; 200 ಯೂನಿಟ್ ವಿದ್ಯುತ್ ಫ್ರೀ ,ಗೃಹ ಲಕ್ಷ್ಮೀ ಜಾರಿ; ವಿವರ ಇಲ್ಲಿದೆ

ಮತದಾರರನ್ನು ಭಿಕ್ಷುಕರ ಸಾಲಿನಲ್ಲಿ ನಿಲ್ಲಿಸಲು ಕಾಂಗ್ರೆಸ್ ಷಡ್ಯಂತ್ರ: ಎ.ನಾರಾಯಣಸ್ವಾಮಿ

Bajrang Dal ನಿಷೇಧಿಸುವ ಪರಿಸ್ಥಿತಿ ಬರದು: ಪರಮೇಶ್ವರ್
MUST WATCH
ಹೊಸ ಸೇರ್ಪಡೆ

ಶೂಟಿಂಗ್ ಮುಗಿಸಿದ ‘ಟಗರು ಪಲ್ಯ’: ಪೋಸ್ಟ್ ಪ್ರೊಡಕ್ಷನ್ ನತ್ತ ಡಾಲಿ ನಿರ್ಮಾಣದ ಚಿತ್ರ

Congress Guarantee ಬಜರಂಗದಳದ ನಿರುದ್ಯೋಗಿಗಳಿಗೂ ಯುವನಿಧಿ ಫ್ರೀ!

ಕುರುಬೂರು ಅಪಘಾತ ಪ್ರಕರಣ: ಸಾವಿನ ಸಂಖ್ಯೆ 11ಕ್ಕೆ ಏರಿಕೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

UP; ಅಯೋಧ್ಯೆಯಲ್ಲಿ ಬ್ರಿಜ್ ಭೂಷಣ್ ‘ಮಹಾ ರ್ಯಾಲಿ’ಗೆ ಅನುಮತಿ ನಿರಾಕಾರ