ಕೋಳಿಗಳಲ್ಲಿ ಕೊಕ್ಕರೆ ರೋಗ! : ನೂರಾರು ಕೋಳಿಗಳ ಸಾವು


Team Udayavani, Oct 22, 2021, 9:53 PM IST

hunasuru news

ಹುಣಸೂರು: ತಾಲೂಕಿನ ವಿವಿಧ ಗ್ರಾಮಗಳಲ್ಲಿ ನಾಟಿ ಕೋಳಿಗಳಿಗೆ ಕೊಕ್ಕರೆ ರೋಗ ಕಾಣಿಸಿಕೊಂಡು ನಾಟಿ ಕೋಳಿಗಳು ಸಾವನ್ನಪ್ಪುತ್ತಿದ್ದು, ಕೋಳಿ ಸಾಕಣೆದಾರರದಲ್ಲಿ ಆತಂಕ ಮೂಡಿಸಿದೆ.

ತಾಲೂಕಿನ ನೇರಳಕುಪ್ಪೆ, ಕಚುವಿನಹಳ್ಳಿ, ಚಿಲ್ಕುಂದ ಸೇರಿದಂತೆ ಅನೇಕ ಗ್ರಾಮಗಳಲ್ಲಿ ಕೋಳಿಗಳಿಗೆ ಕೊಕ್ಕರೆ ರೋಗ ಹರಡಿದ್ದು, ನಿತ್ಯ ನೂರಾರು ಕೋಳಿಗಳು ಸಾಯುತ್ತಿವೆ.

ನೇರಳಕುಪ್ಪೆಯ ಸಣ್ಣತಮ್ಮೇಗೌಡ, ಕೃಷ್ಣ, ಮಧುರ, ದೇವರಾಜು, ನಾಗರಾಜು, ಮಲ್ಲಮ್ಮ ಚಿಲ್ಕುಂದ ಗ್ರಾಮದ ರಾಮಚಂದ್ರಯ್ಯ, ನಂಜುಂಡಯ್ಯ ಹಾಗೂ ಮಹದೇವಮ್ಮ ಮತ್ತಿತರಿಗೆ ಸೇರಿದ ನೂರಾರು    ಕೋಳಿಗಳು ಸಾವನ್ನಪ್ಪುತ್ತಿದ್ದು, ಕೊಳಿ ಸಾಕಣೆಯಿಂದಲೇ ಜೀವನೋಪಾಯ ನಡೆಸಿ ಬದುಕು ಕಟ್ಟಿಕೊಂಡಿದ್ದವರ ಸ್ಥಿತಿ ಅತಂತ್ರವಾಗುವ ಭೀತಿ ಎದುರಾಗಿದ್ದು.  ಕೋಳಿ ಸಾವು ಮುಂದುವರೆಯುತ್ತಲೇ ಇದೆ.

ಇದನ್ನೂ ಓದಿ:ಅನಾಥ ಜೀವಕ್ಕೆ ಆಧಾರವಾಗಿ ಮಾನವೀಯತೆ ಮೆರೆದ ಎಸ್.ಆರ್.ಗಜಾಕೋಶ

ಮಲಗಿದಲ್ಲೇ ಕೋಳಿಸಾವು;  ಕೋಳಿಗಳು ಮೇವು-ನೀರನ್ನು ಬಿಟ್ಟು ಕುಳಿತಲ್ಲೇ ತೂಕಡಿಸುತ್ತಲೇ ಒಂದೇ ದಿನದಲ್ಲಿ ಸಾವನ್ನಪ್ಪುತ್ತವೆ. ಇದು ಸಾಂಕ್ರಾಮಿಕ ರೋಗವಾಗಿದ್ದು, ಒಂದು ಕೋಳಿಗೆ ರೋಗ ಕಾಣಿಸಿಕೊಂಡಲ್ಲಿ ಇಡೀ ಊರಿಗೆ ಹರಡಿ ನಾಟಿ ಕೋಳಿಗಳ ಸರಣಿ ಸಾವು ಮುಂದುವರೆದಿದೆ.

ಗ್ರಾಮೀಣ ಪ್ರದೇಶದ ನಾಟಿ ಕೋಳಿ ಸಾಕಣೆಯನ್ನೇ ಉಪ ಕಸುಬನ್ನಾಗಿಸಿಕೊಂಡಿದ್ದರೆ, ಕೆಲ ಕುಟುಂಬಗಳು ಜೀವನೋಪಾಯಕ್ಕಾಗಿ ನಾಟಿಕೋಳಿ ಸಾಕುತ್ತಿದ್ದಾರೆ, ಈ ರೋಗದಿಂದ ಕೋಳಿಗಳ ಸಾವು ಆರ್ಥಿಕವಾಗಿ ನಷ್ಟ ಉಂಟು ಮಾಡಿದ್ದರೆ, ಮಾರುಕಟ್ಟೆಯಲ್ಲಿ ನಾಟಿ ಕೋಳಿ ಮಾಂಸ ಹಾಗೂ ಮೊಟ್ಟೆಗೂ ದೊಡ್ಡ ಹೊಡೆತ ಬೀಳಲಿದೆ.

ನಾಟಿಕೋಳಿ ಸಾಕಣೆಯಿಂದ ಜೀವನ ಸಾಗಿಸುತ್ತಿರುವ ನಮ್ಮಂತ ಅನೇಕ ಕುಟುಂಬಗಳು ಕೊಕ್ಕರೆ ರೋಗದಿಂದ ತತ್ತರಿಸಿದ್ದಾರೆ. ಇದರಿಂದ ಹಳ್ಳಿಗಳಲ್ಲಿ ನಾಟಿಕೋಳಿ ಮಾಂಸ ಹಾಗೂ ಮೊಟ್ಟೆ ಕೊರತೆ ಉಂಟಾಗಲಿದ್ದು, ಪಶುವೈದ್ಯ ಇಲಾಖೆ ರೋಗನಿಯಂತ್ರಣಕ್ಕೆ ತಕ್ಷಣವೇ ಕ್ರಮವಹಿಸಿ, ಸಾಕಣೆದಾರರ ನೆರವಿಗೆ ನಿಲ್ಲಬೇಕು

-ರಾಮಚಂದ್ರಯ್ಯ, ಚಿಲ್ಕುಂದ.

ಕಡ್ಡಾಯವಾಗಿ ಲಸಿಕೆ ಹಾಕಿಸಬೇಕು:

ಬಹುತೇಕರು ಲಸಿಕೆ ಹಾಕಿಸುವುದಿಲ್ಲ. ಬದಲಾಗಿ ರೋಗ ಬಂದ ನಂತರ ಕೋಳಿ ತರುತ್ತಾರೆ. ಪಶುವೈದ್ಯ ಇಲಾಖೆವತಿಯಿಂದ ಪ್ರತಿ ಗುರುವಾರ ಎಲ್ಲಾ ಪಶು ಆಸ್ಪತ್ರೆಗಳಲ್ಲಿ ಕೊಕ್ಕರೆ ರೋಗಕ್ಕೆ ಮುಂಜಾಗ್ರತೆಯಾಗಿ ಉಚಿತವಾಗಿ ಲಸಿಕೆ ನೀಡಲಾಗುತ್ತದೆ. ಕೋಳಿ ಸಾಕಣೆದಾರರು ಕಡ್ಡಾಯವಾಗಿ ಲಸಿಕೆ ಹಾಕಿಸುವುದು ಒಳಿತು.

-ಜಿಲ್ಲಾ ಪಶುವೈದ್ಯಕೀಯಇಲಾಖೆ ಉಪನಿರ್ದೇಶಕ ಡಾ. ಷಡಕ್ಷರಸ್ವಾಮಿ.

ಟಾಪ್ ನ್ಯೂಸ್

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.