ಹುಣಸೂರು: 36 ಡೆಂಗ್ಯೂ,7 ಚಿಕುನ್ ಗುನ್ಯಾ ಪ್ರಕರಣ ಪತ್ತೆ; ಓರ್ವ ಬಲಿ
Team Udayavani, Nov 9, 2022, 10:15 PM IST
ಹುಣಸೂರು: ಹುಣಸೂರು ತಾಲೂಕಿನಲ್ಲಿ ಡೆಂಗ್ಯೂ ಜ್ವರಕ್ಕೆ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ. ಹನಗೋಡು ಹೋಬಳಿಯ ಚೆನ್ನಸೋಗೆ ಗ್ರಾಮದ ಚಂದ್ರಶೇಖರ್ (52) ಜ್ವರಕ್ಕೆ ತುತ್ತಾಗಿ ಸಾವನ್ನಪ್ಪಿದ್ದಾರೆ.
ಚಂದ್ರಶೇಖರ್ ರಿಗೆ ಕಳೆದೆರಡು ದಿನಗಳಿಂದ ಜ್ವರ ಕಾಣಿಸಿಕೊಂಡಿದ್ದು, ಹುಣಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗಾಗಿ ನ.8 ರಂದು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಮಧ್ಯಾಹ್ನ ಸಾವನಪ್ಪಿದ್ದಾರೆ. ಮೃತರಿಗೆ ಪತ್ನಿ ಹಾಗೂ ಇಬ್ಬರು ಗಂಡು ಮಕ್ಕಳಿದ್ದಾರೆ. ಮೃತರ ಅಂತ್ಯಕ್ರಿಯೆ ಬುಧವಾರ ಸಂಜೆ ಅವರ ಜಮೀನಿನಲ್ಲಿ ನಡೆಯಿತು.ಶಾಸಕ ಎಚ್.ಪಿ.ಮಂಜುನಾಥ್ ಮೃತರ ಅಂತಿಮ ದರ್ಶನ ಪಡೆದು ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
36 ಡೆಂಗ್ಯೂ ಪ್ರಕರಣ ಪತ್ತೆ
ತಾಲೂಕಿನಲ್ಲಿ 36 ಮಂದಿ ಶಂಕಿತ ಡೆಂಗ್ಯೂ ಹಾಗೂ 7 ಚಿಕುನ್ ಗುನ್ಯಾ ಪ್ರಕರಣ ಪತ್ತೆಯಾಗಿದೆ. ಆರೋಗ್ಯ ಮತ್ತು ಆಶಾ ಕಾರ್ಯಕರ್ತರು ರೋಗಿಗಳ ಬಗ್ಗೆ ನಿಗಾವಹಿಸಿದ್ದಾರೆಂದು ಆರೋಗ್ಯ ಇಲಾಖೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್