ಹುಣಸೂರು: ಗೊಮ್ಮಟಗಿರಿಯಲ್ಲಿ 73 ನೇ ವರ್ಷದ ಮಸ್ತಕಾಭಿಷೇಕದ ವೈಭವ

ಬಗೆಬಗೆಯ ಅಭಿಷೇಕದಲ್ಲಿ ಕಂಗೊಳಿಸಿದ ಬಾಹುಬಲಿ

Team Udayavani, Nov 27, 2022, 7:32 PM IST

1-qwewqewqe

ಹುಣಸೂರು : ಜೈನರ ಆರಾಧ್ಯ ದೈವ ಹುಣಸೂರು ತಾಲೂಕಿನ ಬಿಳಿಕೆರೆ ಹೋಬಳಿಯ ಗೊಮ್ಮಟಗಿರಿಯಲ್ಲಿ ವಿರಾಜಮಾನವಾಗಿ ನಿಂತಿರುವ ಬಾಹುಬಲಿಗೆ ನ.27 ರ ಭಾನುವಾರದಂದು ನಡೆದ 73 ನೇ ವರ್ಷದ ಮಸ್ತಕಾಭಿಷೇಕದಲ್ಲಿ ಗೊಮ್ಮಟ ಭಕ್ತರ ಜಯಉದ್ಘೋಷಗಳ ನಡುವೆ ಬಣ್ಣಬಣ್ಣದ ಅಭಿಷೇಕದಲ್ಲಿ ಕಂಗೊಳಿಸಿತು.

ಕೋವಿಡ್ ನಂತರದ ನಡೆಯುತ್ತಿರುವ ಮಸ್ತಕಾಭಿಷೇಕವು ಶಿವಮೊಗ್ಗಜಿಲ್ಲೆಯ ಹೊಂಬುಜ ಜೈನ ಮಠದ ಡಾ.ದೇವೇಂದ್ರ ಕೀರ್ತಿ ಭಟ್ಟಾರಕ ಸ್ವಾಮಿಜಿಯವರ ಸಾನಿಧ್ಯದಲ್ಲಿ ಮಹಾ ಮಸ್ತಕಾಭಿಷೇಕವು ಜರುಗಿತು.

ಧಾರ್ಮಿಕ ವಿಧಿ ವಿಧಾನಗಳ ನಂತರ ಬೆಟ್ಟದ ಮೇಲಿನ 18 ಅಡಿ ಎತ್ತರದ ನಗುಮೊಗದ ಬಾಹುಬಲಿ ಮೂರ್ತಿಗೆ ಹರಾಜಿನಲ್ಲಿ ತಮ್ಮದಾಗಿಸಿ ಕೊಂಡ ಭಕ್ತರು ಕಳಸಗಳನ್ನು ತಲೆಯ ಮೇಲೆ ಹೊತ್ತುತಂದು ಅಭಿಷೇಕ ನೆರವೇರಿಸಿದರು.

ಗೊಮ್ಮಟನಿಗೆ ಮೊದಲಿಗೆ ಜಲಾಭಿಷೇಕ, ಎಳನೀರು, ಕಬ್ಬಿನ ಹಾಲು, ಅರಿಶಿನ, ಚಂದನ, ಕ್ಷೀರ, ಕಂಕಚೂರ್ಣ, ಅರಳು, ಸಕ್ಕರೆಪುಡಿ, ಅಕ್ಕಿ ಹಿಟ್ಟು, ಜೇನುತುಪ್ಪ, ಶ್ರೀಗಂಧ, ವಿವಿಧ ಕಷಾಯಾಭಿಷೇಕ ಸೇರಿದಂತೆ ಒಟ್ಟು ೧೮ ಬಗೆಯ ಅಭಿಷೇಕದ ವೇಳೆ ವಿರಾಗಿ ಬಣ್ಣಬಣ್ಣಗಳಿಂದ ಕಂಗೊಳಿಸಿದ, ಪ್ರತಿ ಅಭಿಷೇಕದಲ್ಲೂ ಗೊಮ್ಮಟನನ್ನು ಕಣ್ತುಂಬಿಕೊAಡ ಭಕ್ತರು ವಿರಾಟ್ ಯೋಗಿ ಬಾಹುಬಲಿ ಮಹಾರಾಜ್ ಕೀ ಜೈ ಎನ್ನುತ್ತಾ ಜಯಘೋಷ ಮೊಳಗಿಸಿದರು.

ರಾಜ್ಯದ ವಿವಿಧೆಡೆಗಳಿಂದ ಜೈನ ಭಕ್ತರು ಹಾಗೂ ಸುತ್ತಮುತ್ತಲ ಗ್ರಾಮಗಳಿಂದ ಸಾವಿರಾರು ಮಂದಿ ಗ್ರಾಮಸ್ಥರು ಮಸ್ತಕಾಭಿಷೇಕವನ್ನು ಕಣ್ತುಂಬಿಕೊಂಡರು. ಮಹಿಳೆಯರು, ಮಕ್ಕಳೆನ್ನದೆ ಬೆಟ್ಟ ಹತ್ತಿ ಪೂಜೆ ಸಲ್ಲಿಸಿ ಬಾಹು ಬಲಿ ದರ್ಶನ ಪಡೆದರು.

ಈ ಬಾರಿ ಗೊಮ್ಮಟಗಿರಿ ಕ್ಷೇತ್ರದ ಸೇವಾಸಮಿತಿಯ ಅಧ್ಯಕ್ಷ ಡಾ.ಎಂ.ವಿ.ಶಾಂತಕುಮಾರ್, ಕಾರ್ಯದರ್ಶಿ ಪದ್ಮರಾಜಯ್ಯ, ಖಜಾಂಚಿ ರಾಜೇಶ್, ಪೂಜಾ ಸಮಿತಿ ಅಧ್ಯಕ್ಷ ಸಂತೋಷ್ ಮತ್ತಿತರ ಮುಖಂಡರ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಗಳು ಹಾಗೂ ಮಸ್ತಕಾಭಿಷೇಕ ಜರುಗಿತು. ಅಭಿಷೇಕಕ್ಕೂ ಮೊದಲಿಗೆ ಸ್ವಾಮಿಜಿ ಹಾಗೂ ಕ್ಷಲಿಕಾ ಶ್ರೀ ವಿನಯ ಶ್ರೀ ಮಾತಾಜಿ ಆಶೀರ್ವಚನ ನೀಡಿದರು.

ಪ್ರಸಾದ ವಿತರಣೆ
ಮಸ್ತಕಾಭಿಷೇಕಕ್ಕೆ ಬಂದಿದ್ದ ಭಕ್ತಾಗಳಿಗೆ ಅನೇಕ ದಾನಿಗಳು ಅನ್ನಸಂತರ್ಪಣೆ ನಡೆಸಿಕೊಟ್ಟರು, ಬಿಳಿಕೆರೆ ಠಾಣಾ ಇನ್ಸ್ಪೆಕ್ಟರ್ ಚಿಕ್ಕಸ್ವಾಮಿ ನೇತೃತ್ವದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು, ಚುನಾವಣಾ ವರ್ಷವಾದರೂ ಸಹ ಈ ಬಾರಿ ಯಾವುದೇ ರಾಜಕೀಯ ಮುಖಂಡರು ಭಾಗವಹಿಸಿರಲಿಲ್ಲ.

ಮಸಾಲೆ ಪುರಿಯ ವೈಶಿಷ್ಟ್ಯ
ಎಲ್ಲೇ ಮಸ್ತಕಾಭಿಷೇಕ ನಡೆದರೂ ಅಲ್ಲಿ ಮಸಾಲೆ ಪುರಿಯ ಮಾರಾಟ ಭರ್ಜರಿಯಾಗಿರುತ್ತದೆ, ಇಲ್ಲಿಯೂ ಬಗೆಬಗೆಯ ಮಸಾಲೆಪುರಿ ಘಮಘಮಿಸುತ್ತಿತ್ತು, ಭಕ್ತರು ಮುಗಿ ಬಿದ್ದು ಖರೀದಿಸಿದರು, ಸಿಹಿತಿಂಡಿ ಅಂಗಡಿ, ಮಕ್ಕಳ ಆಟಿಕೆ ಸಾಮಾನುಗಳ ಅಂಗಡಿಗಳು ಗಮನ ಸೆಳೆಯಿತು.
ಗೊಮ್ಮಟನ ಅಭಿಷೇಕದಿಂದ ಸುಖ ಶಾಂತಿ, ದಾನದಿಂದ ನೆಮ್ಮದಿ ಸಿಗಲಿದೆ.

ಶಿವಮೊಗ್ಗಜಿಲ್ಲೆಯ ಹೊಂಬುಜ ಜೈನ ಮಠದ ಡಾ.ದೇವೇಂದ್ರ ಕೀರ್ತಿ ಭಟ್ಟಾರಕ ಸ್ವಾಮಿಜಿ ಆಶೀರ್ವಚನ ನೀಡಿ, ಶ್ರವಣ ಬೆಳಗೊಳದಲ್ಲಿ 12 ವರ್ಷಗಳಿಗೊಮ್ಮೆ ಮಸ್ತಕಾಭಿಷೇಕ ನಡೆಯುತ್ತದೆ. ಆದರೆ ಗೊಮ್ಮಟಗಿರಿಯಲ್ಲಿ ಭಕ್ತರ ನೆರವಿನೊಂದಿಗೆ ಪ್ರತಿವರ್ಷವೂ ಅಭಿಷೇಕ ನಡೆದುಕೊಂಡು ಬರುತ್ತಿರುವುದು ಈ ಭಾಗದ ಜನರ ಆರಾಧ್ಯ ದೈವವೆಂಬುದನ್ನು ಸಾಕ್ಷೀಕರಿಸಿದೆ. ಇನ್ನು ಬಾಹುಬಲಿಗೆ ಅಭಿಷೇಕ ನಡೆಸುವುದು ಮತ್ತು ದಾನ ಮಾಡುವುದು ಒಂದೆ ಎನ್ನುತ್ತಾರೆ, ಆದರೆ ಅಭಿಷೇಕ ನಮ್ಮ ಒಳಿತಿಗಾಗಿ, ದಾನ ಮಾಡುವುದು ಮತ್ತೊಬ್ಬರ ಶ್ರೇಯಸ್ಸಿಗಾಗಿ ಎನ್ನುವುದನ್ನು ಎಲ್ಲರೂ ಅರಿಯಬೇಕೆಂದರು.

ಜೈನ ಬಿಕ್ಕು ಕ್ಷಲಿಕಾ ಶ್ರೀ ವಿನಯ ಶ್ರೀ ಮಾತಾಜಿ ಆಶೀರ್ವಚನ ನೀಡಿ ಮಾತನಾಡಿ, ಉಳ್ಳವರು ಅದ್ದೂರಿ ಮದುವೆ ಮತ್ತಿತರ ಸಮಾರಂಭ ನಡೆಸುವ ಬದಲಿಗೆ ಇಷ್ಟ ದೇವರಿಗೆ ಅಭಿಷೇಕ ನಡೆಸುವುದು ಮತ್ತು ದಾನ ಮಾಡಿದಲ್ಲಿ ಸಂಕಷ್ಟದಲ್ಲಿರುವವರಿಗೆ ನೆರವಾಗಲಿದೆ. ಅಭಿಷೇಕದಿಂದ ಮನಸ್ಸಿಗೆ ನಿಮ್ಮದಿ ಸಿಗಲಿದೆ ಆದೇರೀತಿ ದಾನದಿಂದ ಸಂತೃಪ್ತಿ ಸಿಗಲಿದೆ ಜೈನ ಸಮುದಾಯದ ಎಲ್ಲರೂ ಅಳವಡಿಸಿಕೊಂಡಲ್ಲಿ ನಮ್ಮ ಸುತ್ತಮುತ್ತಲಿನಲ್ಲಿ ಸುಭಿಕ್ಷೆಯಾಗಿರಲಿದೆ ಎಂದರು.

ವೈರಾಗ್ಯಮೂರ್ತಿಯ, ಶಾಂತಸ್ವರೂಪವದನದ ಬಾಹುಬಲಿಯ ಅವರ್ಣನೀಯ ಸೌಂದರ್ಯವನ್ನು ಬೆಟ್ಟದ ತಪ್ಪಲಿನಲ್ಲಿ ವೀಕ್ಷಿಸುತ್ತಿದ್ದ ಭಕ್ತಗಣ ಜೈ ಬಾಹುಬಲಿ, ಜೈ ಶಾಂತಿದೂತ ಮುಂತಾದ ಘೋಷಣೆಗಳನ್ನು ಮೊಳಗಿಸಿ ಭಕ್ತಿಯ ಪರಾಕಾಷ್ಠೆ ಮೆರೆದರು. ನೆರೆದ ಭಕ್ತಗಣ ಭಾವವೇಶದಲ್ಲಿ ಹೋ ಎಂದು ಕೂಗಿ ತಮ್ಮ ಭಕ್ತಿಯನ್ನು ಪ್ರದರ್ಶಿಸುತ್ತಿದ್ದರು. ಅಂತಿಮವಾಗಿ ಪುಷ್ಪಾರ್ಚನೆ, ಪೂರ್ಣಕುಂಬ ಜಲಾಭಿಷೇಕ ನೆರವೇರಿಸಿದ ನಂತರ ದೃಷ್ಟಿ ತೆಗೆದು ಮಹಾಮಂಗಳಾರತಿ ಬೆಳಗಿಸಲಾಯಿತು. ಮಸ್ತಕಾಭಿಷೇಕದ ನಂತರ ಭಕ್ತರು ಬೆಟ್ಟದ ತಪ್ಪಲಿನ 24 ತೀರ್ಥಂಕರರ ಪಾದುಕೆಗಳ ಸ್ಥಳಕ್ಕೆ ಭೇಟಿ ನೀಡಿ ಪೂಜಾ ಕಾರ್ಯಗಳನ್ನು ಸಲ್ಲಿಸಿದರು.

*ಸಂಪತ್ ಕುಮಾರ್ ಹುಣಸೂರು

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.