Hunsur; ಬುಲೆಟ್ ಬೈಕ್ ಗೆ ಢಿಕ್ಕಿ: ತಾತ ಸಾವು,ಮೊಮ್ಮಗನಿಗೆ ಗಾಯ
Team Udayavani, Jul 17, 2023, 10:17 PM IST
ಹುಣಸೂರು: ಹುಣಸೂರು ನಗರದಲ್ಲಿ ಅಪಘಾತದಲ್ಲಿ ತೀವ್ರಗಾಯಗೊಂಡಿದ್ದ ವೃದ್ದರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರೆ, ಮೊಮ್ಮಗ ತೀವ್ರಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಹುಣಸೂರು ತಾಲೂಕಿನ ಕಸಬಾ ಹೋಬಳಿಯ ರೆಡ್ಡಿಕೊಪ್ಪಲಿನ ರಾಮಶೆಟ್ಟಿ(72) ಮೃತರು. ಪತ್ನಿ,ಮೂವರು ಮಕ್ಕಳನ್ನು ಆಗಲಿದ್ದಾರೆ.
ಜು.15 ರಂದು ಹುಣಸೂರು ನಗರದ ಬ್ಯಾಂಕ್ ಆಫ್ ಬರೋಡಾ ಬಳಿ ರಾಮಶೆಟ್ಟರು ಮೊಮ್ಮಗ ವಿನಯ್ನೊಂದಿಗೆ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಹಿಂದಿನಿಂದ ವೇಗವಾಗಿ ಬಂದ ಬುಲೆಟ್ ಸವಾರ ಢಿಕ್ಕಿ ಹೊಡೆದ ರಭಸಕ್ಕೆ ಕೆಳಗೆ ಬಿದ್ದ ರಾಮಶೆಟ್ಟರ ತಲೆ, ಕೈಕಾಲುಗಳಿಗೆ ತೀವ್ರಗಾಯವಾಗಿತ್ತು, ಮೊಮ್ಮಗ ವಿನಯ್ಗೂ ಪೆಟ್ಟು ಬಿದ್ದಿತ್ತು. ಮೈಸೂರು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಸೋಮವಾರ ಸ್ವಗ್ರಾಮ ರೆಡ್ಡಿಕೊಪ್ಪಲಿನಲ್ಲಿ ಅಂತ್ಯಕ್ರಿಯೆ ನಡೆಯಿತು. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ
ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್ ಹೊಂದಿರುವ ಕ್ಯಾನ್ಸರ್ ಚಿಕಿತ್ಸೆ ಕ್ರಮ