Hunsur: ವಿರಾಟ್ ಯೋಗಿ ಗೊಮ್ಮಟೇಶ್ವರನಿಗೆ 74 ನೇ ಮಹಾಮಸ್ತಕಾಭಿಷೇಕ ಸಂಭ್ರಮ


Team Udayavani, Nov 26, 2023, 9:20 PM IST

1-asdsadasd

ಹುಣಸೂರು: ತಾಲೂಕಿನ ಬಿಳಿಕೆರೆ ಹೋಬಳಿಯ ಗೊಮ್ಮಟಗಿರಿಯಲ್ಲಿ ವೀರಾಜಮಾನವಾಗಿರುವ ಗೊಮ್ಮಟೇಶ್ವರಸ್ವಾಮಿಯ 74ನೇ ವರ್ಷದ ಮಹಾ ಮಸ್ತಕಾಭಿಷೇಕ ಭಕ್ತರ ಉದ್ಘೋಷಗಳ ನಡುವೆ ನಡೆಯಿತು.

ಶಿವಮೊಗ್ಗ ಜಿಲ್ಲೆಯ ಹೊಂಬುಜ ಜೈನ ಮಠದ ಡಾ.ದೇವೇಂದ್ರ ಕೀರ್ತಿ ಭಟ್ಟಾರಕ ಸ್ವಾಮೀಜಿ, ಕನಕಗಿರಿ ಜೈನ ಮಠದ ಭುವನಕೀರ್ತಿಭಟ್ಟಾರಕ ಪಟ್ಟಾಚಾರ್ಯವರ್ಯ ಸ್ವಾಮೀಜಿ, ಮಂಡ್ಯ ಜಿಲ್ಲೆಯ ಆರತಿಪುರದ ಜೈನಮಠದ ಸಿದ್ದಾಂತ ಕೀರ್ತಿ ಭಟ್ಟಾರಕಸ್ವಾಮೀಜಿ, ಕಂಬದಹಳ್ಳಿ ಜೈನಮಠದ ಭಾನುಕೀರ್ತಿ ಭಟ್ಟಾರಕ ಸ್ವಾಮೀಜಿ, ಮರೂರು ಜೈನಮಠದ ಧರ್ಮಸೇನಾ ಸ್ವಾಮೀಜಿಗಳ ಸಾನಿಧ್ಯದಲ್ಲಿ  ಮಹಾ ಮಸ್ತಕಾಭಿಷೇಕ ಜರುಗಿತು.

ಜೈನರ ಸಮುದಾಯ ಭವನದಲ್ಲಿ ಧಾರ್ಮಿಕ ವಿಧಿ ವಿಧಾನಗಳ ನಂತರ ವಿರಾಜಮಾನವಾಗಿ ನಿಂತಿರುವ ಬೆಟ್ಟದ ಮೇಲಿನ 18 ಅಡಿ ಎತ್ತರದ  ಬಾಹುಬಲಿ ಮೂರ್ತಿಗೆ ಭಕ್ತರು ಹರಾಜಿನಲ್ಲಿ ಕೊಂಡ ಕಳಸಗಳನ್ನು ತಲೆಯ ಮೇಲೆ ಹೊತ್ತುತಂದು ಅಭಿಷೇಕ ನೆರವೇರಿಸಿದರು.

ಮೊದಲಿಗೆ ಜಲಾಭಿಷೇಕ, ಎಳನೀರು, ಕಬ್ಬಿನ ಹಾಲು, ಅರಿಶಿನ, ಚಂದನ, ಕ್ಷೀರ, ಕಂಕಚೂರ್ಣ, ಅಷ್ಟಗಂಧ, ಅರಳು, ಸಕ್ಕರೆಪುಡಿ, ಅಕ್ಕಿಹಿಟ್ಟು, ಜೇನುತುಪ್ಪ, ಶ್ರೀಗಂಧ, ವಿವಿಧ ಕಷಾಯಾಭಿಷೇಕ, ನಂತರ ಪುಷ್ಪಾರ್ಚನೆ ನಡೆಸಲಾಯಿತು. ವಿರಾಗ ಮೂರ್ತಿ ಬಣ್ಣಬಣ್ಣಗಳಿಂದ ಕಂಗೊಳಿಸಿದ, ಪ್ರತಿ ಅಭಿಷೇಕದಲ್ಲೂ ಗೊಮ್ಮಟನನ್ನು ಕಣ್ತುಂಬಿಕೊಂಡ ಭಕ್ತರು ವಿರಾಟ್ ಯೋಗಿ ಕೀ ಜೈ, ಬಾಹುಬಲಿ ಮಹಾರಾಜ್ ಕೀ ಜೈ ಎನ್ನುತ್ತಾ ಜಯಘೋಷ ಮೊಳಗಿಸಿದರು.

ರಾಜ್ಯದ ವಿವಿಧೆಡೆಗಳಿಂದ ಜೈನ ಸಮುದಾಯದ ಮಂದಿ ಹಾಗೂ ಸುತ್ತಮುತ್ತಲ ಗ್ರಾಮಗಳಿಂದ ಸಾವಿರಾರು ಮಂದಿ ಗ್ರಾಮಸ್ಥರು ಮಸ್ತಕಾಭಿಷೇಕವನ್ನು ಕಣ್ತುಂಬಿಕೊಂಡರು. ಮಹಿಳೆಯರು, ಮಕ್ಕಳೆನ್ನದೆ ಬೆಟ್ಟ ಹತ್ತಿ ಪೂಜೆ ಸಲ್ಲಿಸಿ ದರ್ಶನ ಪಡೆದು ಧನ್ಯತಾ ಭಾವ ಮೆರೆದರು.

ಈ ಬಾರಿ ಗೊಮ್ಮಟಗಿರಿ ಕ್ಷೇತ್ರದ ಸೇವಾಸಮಿತಿ ಟ್ರಸ್ಟ್ ಅಧ್ಯಕ್ಷ ಎಸ್.ಡಿ.ಮನ್ಮಥರಾಜ್ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಗಳು ಹಾಗೂ ಮಸ್ತಕಾಭಿಷೇಕ ಜರುಗಿತು. ಆನಂತರ ಸ್ವಾಮಿಜಿಗಳು ಆಶೀರ್ವಚನ ನೀಡಿದರು. ಇದೇ ವೇಳೆ ಆವರಣದಲ್ಲಿ ನಿರ್ಮಿಸಿರುವ ಹೊಸ ವಿಶ್ರಾಂತಿ ಗೃಹ, ಶೌಚಾಲಯ ಕಟ್ಟಡಗಳನ್ನು ಪೂಜ್ಯರು ಉಧ್ಘಾಟಿಸಿದರು. ಹಾಗೂ 1.5ಕೋಟಿ ರೂ. ವೆಚ್ಚದ ಸಮುದಾಯ ಭವನ,ಯಾತ್ರಿನಿವಾಸ್ ಕಟ್ಟಡಗಳ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು.

ಪ್ರಸಾದ ವಿತರಣೆ: ಮಸ್ತಕಾಭಿಷೇಕಕ್ಕೆ ಬಂದಿದ್ದ ಭಕ್ತಾಧಿಗಳಿಗೆ ಅನೇಕ ದಾನಿಗಳು ಅನ್ನಸಂತರ್ಪಣೆ ನಡೆಸಿಕೊಟ್ಟರು, ಬಿಳಿಕೆರೆ ಇನ್ಸ್ಪೆಕ್ಟರ್ ಲೋಲಾಕ್ಷಿ ನೇತೃತ್ವದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು.

ಮಸಾಲೆ ಪುರಿಯ ವೈಶಿಷ್ಟ್ಯ
ಮಸ್ತಕಾಭಿಷೇಕ ಅಂಗವಾಗಿ ನಡೆದ ಮಹೋತ್ಸವದಲ್ಲಿ ಬಗೆಬಗೆಯ ಮಸಾಲೆಪುರಿ ಮಾರಾಟ ಭರ್ಜರಿಯಾಗಿತ್ತು. ಭಕ್ತರು ಮುಗಿ ಬಿದ್ದು ಖರೀದಿಸಿದರು, ಸಿಹಿತಿಂಡಿ ಅಂಗಡಿ, ಮಕ್ಕಳ ಆಟಿಕೆ ಸಾಮಾನುಗಳ ಅಂಗಡಿಗಳು ಗಮನ ಸೆಳೆಯಿತು.

ಟಾಪ್ ನ್ಯೂಸ್

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.