ಅಂಧ ಬಾಲಕಿ ಬಾಳಿಗೆ ಬೆಳಕಾದ ಹುಣಸೂರು ಶಾಸಕ ಮಂಜುನಾಥ್
Team Udayavani, Dec 17, 2022, 10:49 PM IST
ಹುಣಸೂರು: ದೃಷ್ಟಿ ದೋಷದಿಂದ ಬಳಲುತ್ತಿದ್ದ ಬಾಲಕಿಯೊರ್ವಳ ಶಸ್ತ್ರ ಚಿಕಿತ್ಸೆಗೆ ನೆರವಾಗುವ ಮೂಲಕ ಶಾಸಕ ಎಚ್.ಪಿ.ಮಂಜುನಾಥ್ ಕುಟುಂಬದ ಬೆಳಕಾಗಿದ್ದಾರೆ.
ತಾಲೂಕಿನ ಹನಗೋಡು ಹೋಬಳಿಯ ಮುತ್ತುರಾಯನಹೊಸಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಸಹಾಯಕ ಮನುಕುಮಾರ್-ಅರ್ಪಿತ ದಂಪತಿ ಪುತ್ರಿ ಮೈನಾಗೆ ಹುಟ್ಟಿನಿಂದಲೇ ಎಡ ಭಾಗದ ಕಣ್ಣು ದೃಷ್ಠಿ ಕಳೆದುಕೊಂಡಿದ್ದಳು, ಪೋಷಕರು ಹಲವಾರು ಬಾರಿ ಕಣ್ಣಾಸ್ಪತ್ರೆಗೆ ತೋರಿಸಿ ಶಸ್ತ್ರ ಚಿಕಿತ್ಸೆಗೆ ದುಬಾರಿ ವೆಚ್ಚವಾಗಲಿದೆ ಎಂದು ತಿಳಿದು ಕಂಗಾಲಾಗಿದ್ದರು.
ಇತ್ತೀಚೆಗೆ ಶಾಸಕ ಎಚ್.ಪಿ.ಮಂಜುನಾಥ್ ಮುತ್ತುರಾಯನಹೊಸಹಳ್ಳಿ ಗ್ರಾಮದ ಗ್ರಾಮಾಭಿವೃದ್ದಿ ಕಾಮಗಾರಿಗೆ ಚಾಲನೆ ನೀಡಲು ಆಗಮಿಸಿದ್ದ ವೇಳೆ ಪುತ್ರಿಯ ಕಣ್ಣಿನ ಸಮಸ್ಯೆ ಬಗ್ಗೆ ಅಳಲುತೋಡಿಕೊಂಡಿದ್ದರು. ತಕ್ಷಣವೇ ಪರಿಚಯದ ನೇತ್ರ ತಜ್ಞರೊಂದಿಗೆ ಸಮಾಲೋಚನೆ ನಡೆಸಿ, ಸಂಪೂರ್ಣ ವೆಚ್ಚವನ್ನು ಭರಿಸಿ ಶಸ್ತ್ರಚಿಕಿತ್ಸೆ ಮಾಡಿಸಿದ್ದು, ಇದೀಗ ಮೈನಾಗೆ ದೃಷ್ಟಿ ಮರಳಿದ್ದು, ಇಡೀ ಕುಟುಂಬ ಸಂತಸದಲ್ಲಿದೆ.
ಆಸ್ಪತ್ರೆಯಿಂದ ಬಿಡುಗಡೆಯಾದ ತರುವಾಯ ಶಾಸಕ ಎಚ್.ಪಿ. ಮಂಜುನಾಥ್ರನ್ನು ಭೇಟಿಯಾದ ಪೋಷಕರು ಕೃತಜ್ಞತೆ ಸಲ್ಲಿಸಿದ್ದಾರೆ. ಮೈನಾ ಸಹ ಕಣ್ಣಿನ ದೃಷ್ಟಿ ಮರಳಿದ ಸಂತಸದಲ್ಲಿದ್ದಾಳೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ