ಹುಣಸೂರು ನಗರಸಭೆ: ಮತದಾನ ಶಾಂತಿಯುತ


Team Udayavani, Feb 10, 2020, 4:07 PM IST

mysuru-tdy-1

ಹುಣಸೂರು: ಹುಣಸೂರು ನಗರಸಭೆಗೆ ಭಾನುವಾರ ನಡೆದ ಚುನಾವಣೆಯು ಸಣ್ಣ-ಪುಟ್ಟ ಗಲಾಟೆ, ಮಾತಿನ ಚಕಮುಖೀಗಳ ನಡುವೆ ಶಾಂತಿಯುತ ವಾಗಿ ನಡೆಯಿತು.

ಬೆಳಗ್ಗೆಯಿಂದಲೇ 7ರಿಂದ ಆರಂಭವಾದ ಮತದಾನ ಮಂದಗತಿಯಲ್ಲಿ ಸಾಗಿತ್ತು. ಮಧ್ಯಾಹ್ನದ ನಂತರ ಬಿರುಸಾಗಿ ನಡೆಯಿತು. ಕೆಲ ವಾರ್ಡ್‌ಗಳಲ್ಲಿ ಸಾಲುಗಟ್ಟಿ ನಿಂತು ಮತಹಾಕಿದರೆ, ಹಲವು ವಾರ್ಡ್‌ಗಳಲ್ಲಿ ಮತದಾರರಿಲ್ಲದೆ ಬಿಕೋ ಎನ್ನುತ್ತಿತ್ತು. ಬೆಳಗ್ಗೆ 9 ರವರೆಗೆ ಶೇ.9ರಷ್ಟು, 11ಕ್ಕೆ ಶೇ.20, ಮಧ್ಯಾಹ್ನ ಒಂದರ ವೇಳೆಗೆ ಶೇ.39ರಷ್ಟು, ಮಧ್ಯಾಹ್ನ 3ರ ವೇಳೆಗೆ ಶೇ.55.80ರಷ್ಟು ಮತದಾನವಾಗಿತ್ತು. ಸಂಜೆ 5ರವರೆಗೆ ಶೇ.75.16ರಷ್ಟು ಮತದಾನವಾಗಿತ್ತು.

ಕೂಲಿ ಕಾರ್ಮಿಕರೇ ಹೆಚ್ಚಿರುವ ವಾರ್ಡ್‌ ನಂ 15ರ ಸರಸ್ವತಿಪುರಂನಲ್ಲಿ ಮತಗಟ್ಟೆಯಲ್ಲಿ 181 ಮಂದಿ ಸರತಿ ಸಾಲಿನಲ್ಲಿ ನಿಂತಿದ್ದರು. ಸ್ಥಳದಲ್ಲಿದ್ದ ಉಪ ವಿಭಾಗಾಧಿಕಾರಿ ಬಿ.ಎನ್‌.ವೀಣಾ,ತಹಶೀಲ್ದಾರ್‌ ಬಸವರಾಜ್‌ ಸಮ್ಮುಖದಲ್ಲಿ ಟೋಕನ್‌ ವಿತರಿಸಿ 6.30ರವರೆಗೂ ಮತದಾನಕ್ಕೆ ಅವಕಾಶ ಕಲ್ಪಿಸಿದರು.

ಶಾಸಕ ಮತಚಲಾವಣೆ: ಶಾಸಕ ಎಚ್‌ .ಪಿ.ಮಂಜುನಾಥ್‌ ವಾರ್ಡ್‌ ನಂ.9ರ ಮುಸಾಫರ್‌ ಖಾನೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತಮ್ಮ ತಂದೆ ಎಚ್‌. ಎನ್‌.ಪ್ರೇಮಕುಮಾರ್‌, ತಾಯಿ ರತ್ನಮ್ಮ ಜತೆ ಬಂದು ಮತಚಲಾಯಿಸಿದರು. ಮಾಜಿ ಮಂತ್ರಿ ಎಚ್.ವಿಶ್ವನಾಥ್‌ 26ನೇ ವಾರ್ಡ್‌ನ ಕರೀಗೌಡ ಶಾಲೆಯಲ್ಲಿ ತಮ್ಮ ಬೆಂಬಲಿಗರೊಡನೆ ಆಗಮಿಸಿ ಮತಚಲಾಯಿಸಿದರು. ಶಾಸಕ ಎಚ್‌.ಪಿ. ಮಂಜುನಾಥ್‌ ಎಲ್ಲಾ ಮತ ಕೇಂದ್ರಗಳಿಗೆ ಭೇಟಿ ನೀಡಿ, ಕಾರ್ಯಕರ್ತರನ್ನು ವಿಚಾರಿಸಿದರು. ಮಾಜಿ ಮಂತ್ರಿ ವಿಶ್ವ ನಾಥ್‌ ಮತಚಲಾಯಿಸಿ, ಅನಾ ರೋಗ್ಯ ಕಾರಣ ನೀಡಿ ಬೆಂಗಳೂರಿನತ್ತ ತೆರಳಿದರು. ಇನ್ನು ಜೆಡಿಎಸ್‌ ಮುಖಂಡ ದೇವರಹಳ್ಳಿ ಸೋಮಶೇಖರ್‌ ಕೆಲ ವಾರ್ಡ್‌ಗಳಿಗೆ ಭೇಟಿ ನೀಡಿದರು.

ಒಂದರಿಂದ ನಾಲ್ಕು ವಾರ್ಡ್‌ಗಳ ಮತಗಟ್ಟೆಯು ರಂಗನಾಥ ಬಡಾವಣೆಯ ಶಾಲೆಯಲ್ಲಿದ್ದುದ್ದರಿಂದ ಹೊರಗೆ ಜನಸಂದಣಿ ಇತ್ತು. ಮಧ್ಯಾಹ್ನದ ನಂತರ ಅಭ್ಯರ್ಥಿಗಳ ಬೆಂಬಲಿಗರ ನಡುವೆ ಮತಯಾಚನೆ ವೇಳೆ ಮಾತಿನ ಚಕಮಕಿ, ತಳ್ಳಾಟ- ನೂಕಾಟ ನಡೆಯಿತಾದರೂ ಪೊಲೀಸರ ಸಕಾಲಿಕ ಕ್ರಮದಿಂದ ಗಲಾಟೆ ತಪ್ಪಿತು. ಎಲ್ಲಾ 39 ಮತ ಕೇಂದ್ರಗಳ ಹೊರಗೆ ಮತದಾನ ಆರಂಭಕ್ಕೂ ಮೊದಲೇ ಅಭ್ಯರ್ಥಿಗಳ ಕಡೆಯವರು ಜಮಾಯಿಸಿದ್ದರು. ಹಲವು ಮತ ಕೇಂದ್ರಗಳು ಒಂದೇ ಶಾಲೆಯ ಕೊಠಡಿಗಳಲ್ಲಿ ಸ್ಥಾಪಿಸಿದ್ದರಿಂದ ಭಾರೀ ಸಂಖ್ಯೆಯಲ್ಲಿ ಪಕ್ಷಗಳ ಕಾರ್ಯಕರ್ತರು ಜಮಾಯಿಸಿದ್ದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.