ಬಿಜೆಪಿ ಸರ್ಕಾರ ರಾಜ್ಯವನ್ನೇ ಲೂಟಿ ಮಾಡುತ್ತಿದೆ: ಡಾ.ಯತೀಂದ್ರ ಸಿದ್ದರಾಮಯ್ಯ

ಜೆಡಿಎಸ್‌ಗೆ ಓಟು ಹಾಕಿದರೆ ಬಿಜೆಪಿಗೆ ಹಾಕಿದಂತೆ

Team Udayavani, Jan 25, 2023, 12:12 PM IST

4-hunsur

ಹುಣಸೂರು: ಕೇಂದ್ರ-ರಾಜ್ಯದಲ್ಲಿನ ಬಿಜೆಪಿ ಸರಕಾರಗಳು ಜನರಿಗೆ ನೀಡಿದ್ದ ಭರವಸೆಯನ್ನು ಈಡೇರಿಸುವಲ್ಲಿ ವಿಫಲವಾಗಿದ್ದು, ಜನಪರವಾಗಿರುವ, ಸಾಮಾಜಿಕ ನ್ಯಾಯಕ್ಕೆ ಬದ್ದವಾಗಿರುವ ಕಾಂಗ್ರೆಸ್‌ನ್ನು ಬೆಂಬಲಿಸುವಂತೆ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಮನವಿ ಮಾಡಿದರು.

ಹುಣಸೂರು ತಾಲೂಕಿನ ಚಿಲ್ಕುಂದದಲ್ಲಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಕಾಂಗ್ರೆಸ್ ಕಾರ್ಯಕರ್ತರ ಸಭೆ ಹಾಗೂ ಪಕ್ಷ ಸೇರ್ಪಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಈ ಹಿಂದೆ ತನ್ನ ಪ್ರಾಣಾಳಿಕೆಯಲ್ಲಿ ನೀಡಿದ್ದ 165 ಭರವಸೆಗಳಲ್ಲಿ 163 ಭರವಸೆಗಳನ್ನು ಈಡೇರಿಸಿತ್ತು. ಆದರೆ ಬಿಜೆಪಿಯವರು ಖಜಾನೆ ಲೂಟಿ ಮಾಡುತ್ತಿದ್ದಾರೆ. ಪೆಟ್ರೋಲ್, ಡೀಸೆಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ಶೋಷಣೆ ಮಾಡುತ್ತಿದೆ ಎಂದು ಆರೋಪಿಸಿದರು.

ಜೆಡಿಎಸ್‌ಗೆ ಓಟು-ಬಿಜೆಪಿಗೆ ಲಾಭ:

ಚುನಾವಣೆಯಲ್ಲಿ ಜೆಡಿಎಸ್ ಪಕ್ಷಕ್ಕೆ ಮತ ಹಾಕಿದರೆ ಪರೋಕ್ಷವಾಗಿ ಬಿಜೆಪಿ ಪಕ್ಷಕ್ಕೆ ಮತ ಹಾಕಿದಂತೆ ಎಂದು ಎಚ್ಚರಿಸಿ, ಕ್ಷೇತ್ರದಲ್ಲಿ ಅಪಾರ ಅಭಿವೃದ್ದಿ ಕೆಲಸ ಮಾಡಿರುವ, ಜನಪರ ಕಾಳಜಿಯುಳ್ಳ ನಿಮ್ಮ ಮನೆಮಗ ಮಂಜುನಾಥ್‌ರನ್ನು ಬೆಂಬಲಿಸಿ, ಮತ್ತೊಮ್ಮೆ ವಿಧಾನಸಭೆಗೆ ಕಳುಹಿಸಿ ಇವರು ಮಂತ್ರಿಯಾಗಲಿದ್ದಾರೆಂದರು.

ಮಾಜಿ ಶಾಸಕ ಕೆ.ವೆಂಕಟೇಶ್ ಮಾತನಾಡಿ, ರಾಜಕಾರಣದಲ್ಲಿ ಬದ್ಧತೆ, ತತ್ವ ಸಿದ್ಧಾಂತ ಇರಬೇಕು. ಯಾವುದೇ ಪಕ್ಷಗಳಿಗೂ ದುಡ್ಡಿನ ರಾಜಕಾರಣ ಒಳ್ಳೆಯ ಬೆಳವಣಿಗೆಯಲ್ಲ. ಜೆಡಿಎಸ್‌ಗೆ ತತ್ವ, ಸಿದ್ಧಾಂತ, ಬದ್ಧತೆ ಇಲ್ಲ, ಜೆಡಿಎಸ್ ಪಕ್ಷದವರು ಎಲ್ಲಾ ಚುನಾವಣೆಗಳಲ್ಲಿ ಅವಕಾಶವಾದಿ ರಾಜಕಾರಣ ಮಾಡುತ್ತಿದ್ದಾರೆ. ಸಾಮಾಜಿಕ ನ್ಯಾಯದ ಪರವಾಗಿರುವ ಶಾಸಕ ಮಂಜುನಾಥರನ್ನು ಮತ್ತೊಮ್ಮೆ ಚುನಾಯಿಸಬೇಕೆಂದು ಕರೆ ನೀಡಿದರು.

ಶಾಸಕ ಎಚ್.ಪಿ.ಮಂಜುನಾಥ್ ಮಾತನಾಡಿ, ನನ್ನ ಶಾಸಕತ್ವದ ಅವಧಿಯಲ್ಲಿ ಎಲ್ಲಾ ಜಾತಿ, ಧರ್ಮದವರನ್ನು ವಿಶ್ವಾಸದಿಂದ ಕಂಡಿದ್ದೇನೆ. ವಿರೋಧಿಗಳನ್ನು ಸಹ ವಿಶ್ವಾಸಕ್ಕೆ ಪಡೆದು ಕೆಲಸ ಮಾಡಿದ್ದೇನೆ. ಕಾರ್ಯಕರ್ತರು ಪಕ್ಷ ಮಾಡಿರುವ ಕೆಲಸವನ್ನು ಮನೆ ಮನೆಗೆ ತಿಳಿಸಬೇಕು. ಪ್ರಸ್ತುತ ಸಿದ್ದರಾಮಯ್ಯರವರ ನಾಯಕತ್ವ ರಾಜ್ಯಕ್ಕೆ ಅವಶ್ಯವಾಗಿದ್ದು, ಕನಸು ನನಸು ಮಾಡುವಂತೆ ಕಾರ್ಯಕರ್ತರನ್ನು ಹುರಿದುಂಬಿಸಿದರು.

ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ ವಿಜಯಕುಮಾರ್ ಉಪಾಧ್ಯಕ್ಷ ಎಸ್.ಜಯರಾಂ ಮಾತನಾಡಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದಟಿ.ವಿ.ನಾರಾಯಣ್, ಕಲ್ಕುಣಿಕೆರಮೇಶ್, ಮಾಜಿ ತಾ.ಪಂ.ಮಾಜಿ ಸದಸ್ಯ ಮಹೇಂದ್ರಕುಮಾರ್, ಗುಂಡರವಿ, ಹಿರಿಕ್ಯಾತನಹಳ್ಳಿ ಪಂಚಾಯಿತಿ ಅಧ್ಯಕ್ಷ ಜವರೇಗೌಡ, ಗ್ರಾ.ಪಂ.ಮಾಜಿ ಅಧ್ಯಕ್ಷೆ ಶೋಭಾ, ಸದಸ್ಯೆ ಶಿವಕುಮಾರ್, ಮುಖಂಡ ಸಿ.ಎನ್.ಕುಮಾರ್, ಪದ್ಮನಾಭ  ಸೇರಿದಂತೆ ಕಾಂಗ್ರೆಸ್ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು, ಕಾರ್ಯಕರ್ತರು ಸೇರಿದಂತೆ ಎರಡುಸಾವಿರಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದರು.

ಕಾಂಗ್ರೆಸ್‌ ಸೇರ್ಪಡೆ; ಉದ್ಯಮಿ ಸಿ.ಎನ್.ಕುಮಾರ್, ಮುಸ್ಲಿಂ ಮುಖಂಡ ಪಾಷ, ಅತಾವುಲ್ಲಾ, ರೆಹಮಾನ್, ಚಿಲ್ಕುಂದ ಗ್ರಾ.ಪಂ.ಮಾಜಿ ಅಧ್ಯಕ್ಷೆ ಶೋಭಾ, ಸದಸ್ಯ ಶಿವಕುಮಾರ್, ವಸಂತಸಿದ್ದೇಶ್, ವಿಎಸ್‌ಎಸ್‌ಎನ್ ಅಧ್ಯಕ್ಷ ಸೂರಜ್, ಕುಮಾರ್, ಮುಖಂಡರಾದ ಕೃಷ್ಣೆಗೌಡ, ಮಾದೇಗೌಡ, ಶಿವಣ್ಣೇಗೌಡ, ಕುಮಾರಸ್ವಾಮಿ, ಸೇರಿದಂತೆ ವಿವಿಧ ಪಕ್ಷಗಳ ಮುನ್ನೂರಕ್ಕೂ ಹೆಚ್ಚು ಮಂದಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಪೂರ್ಣಕುಂಭ ಸ್ವಾಗತ-ಮೆರವಣಿಗೆ; ಸಭೆಗೂ ಮುನ್ನ 101 ಕಳಸಹೊತ್ತ ಮಹಿಳೆಯರು ಪೂರ್ಣಕುಂಭ ಸ್ವಾಗತದೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಶಾಸಕ ಮಂಜುನಾಥ್, ಡಾ. ಯತೀಂದ್ರಸಿದ್ದರಾಮಯ್ಯ, ವೆಂಕಟೇಶ್, ಡಾ.ಬಿ.ಜಿ.ವಿಜಯಕುಮಾರ್, ಶೋಭಾ ಮತ್ತಿತರ ಮುಖಂಡರನ್ನು ತೆರೆದವಾಹನದಲ್ಲಿ  ಮೆರವಣಿಗೆ ನಡೆಸಿದರು. ಬಹೃತ್ ಸೇಬಿನ ಹಾರ ಹಾಕಿ, ಪುಷ್ಪಾರ್ಚನೆ ಗೈದು ಗಣ್ಯರನ್ನು ವೇದಿಕೆಗೆ ಬರಮಾಡಿಕೊಂಡರು

ಟಾಪ್ ನ್ಯೂಸ್

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.