Hunsur ಪತಿಯ ಸಾವಿನಿಂದ ಆಘಾತಕ್ಕೊಳಗಾದ ಪತ್ನಿ ಆತ್ಮಹತ್ಯೆ
Team Udayavani, Jul 3, 2023, 11:08 PM IST
ಹುಣಸೂರು: ಪತಿಯ ಸಾವಿನ ದೃಶ್ಯವನ್ನು ನೋಡಿದ ಮಹಿಳೆಯೊಬ್ಬರು ದಿಗ್ಭ್ರಾಂತ ಳಾಗಿ ವಿಷ ಸೆವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ದಾರುಣ ಘಟನೆ ತಾಲೂಕಿನ ಕೊಯಮುತ್ತೂರು ಕಾಲೋನಿಯಲ್ಲಿ ಸೋಮವಾರ ಸಂಜೆ ಸಂಭವಿಸಿದೆ.
ಗ್ರಾಮದ ಬಂಡಾರಿಯವರ ಪುತ್ರ ದೊರೆ(55) ಹಾಗೂ ಇವರ ಪತ್ನಿ ಸಾವಿತ್ರಿ (47) ಸಾವಿನಲ್ಲೂ ಒಂದಾದ ದಂಪತಿ. ಇವರಿಗೆ ಒರ್ವಪುತ್ರ ಹಾಗೂ ಒಬ್ಬಳು ಮಗಳಿದ್ದು ಮದುವೆಯಾಗಿ ಬೇರೆಡೆ ವಾಸವಾಗಿದ್ದಾರೆ.
ಮೃತದೊರೆ ಮೂರು ತಿಂಗಳ ಹಿಂದೆ ಕೆಲಸಕ್ಕೆಂದು ಕೆ.ಅರ್.ನಗರಕ್ಕೆ ಹೋದಿದ್ದ ವೇಳೆ ಅಪಘಾತಕ್ಕೊಳಗಾಗಿ ತಮಿಳುನಾಡಿನ ಕೊಯಮುತ್ತೂರು ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು,ವಾರದ ಹಿಂದೆ ಮನೆಗೆ ಬಂದಿದ್ದರು. ಪತಿಯ ಐಡಿಎಫ್ಸಿ ಮತ್ತು ಇಕ್ವಿಟಾಕ್ಸ್ ಬ್ಯಾಂಕ್ಗಳಲ್ಲಿ ಸಾಲ ಮಾಡಿದ್ದು ಅಲ್ಲದೆ ವಿವಿದ ಸಂಘಗಳಲ್ಲಿಯು ಸಹ ಸಾಕಷ್ಟು ಸಾಲ ಮಾಡಿಕೊಂಡಿದ್ದರು.
ದೊರೆ ಮನೆಯಲ್ಲಿಯೆ ಔಷದೋಪಚಾರ ಪಡೆದುಕೊಳ್ಳುತ್ತಿದ್ದು ಸೋಮವಾರ ಪತ್ನಿ ಸಾವಿತ್ರಿ ಪತಿಗೆ ಬೆಳಗ್ಗೆ ತಿಂಡಿ ತಿನ್ನಿಸಿ ಔಷಧಿ ಮಾತ್ರೆಗಳನ್ನು ನೀಡಿ ಕೂಲಿ ಕೆಲಸಕ್ಕೆಂದು ಹೊರ ಹೋಗಿದ್ದರು. ಮಧ್ಯಾಹ್ನ ಮನೆಗೆ ಬಂದಾಗ ಪತಿ ಪ್ರಾಣ ಬಿಟ್ಟಿರುವುದನ್ನು ಕಂಡು ದಿಗಿಲಿನಿಂದ ಮನೆಯಲ್ಲಿದ್ದ ಕ್ರಿಮಿ ನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮನೆ ಬಾಗಿಲು ತೆಗೆದಿರುವುದನ್ನು ಕಂಡು ಪಕ್ಕದ ಮನೆಯವರು ಕೂಗಿದರಾದರೂ ಹೊರಬರದಿದ್ದಾಗ ಒಳಗೆ ಹೋಗಿ ನೋಡಿದಾಗ ದಂಪತಿಗಳು ಸಾವನ್ನಪ್ಪಿರುವುದನ್ನು ಕಂಡು ಅಕ್ಕಪಕ್ಕದವರಿಗೆ ಮಾಹಿತಿ ನೀಡಿದ್ದಾರೆ.
ಮೃತರಿಗೆಒರ್ವ ಮಗ ಒರ್ವಪುತ್ರಿಯರಿದ್ದುಇಬ್ಬರು ಮದುವೆಯಾಗಿ ಬೇರೆ ಬೇರೆಕಡೆ ವಾಸವಾಗಿದ್ದು ಈ ಮೃತ ದಂಪತಿಗಳು ಮಾತ್ರ ಈ ಮನೆಯಲ್ಲಿದ್ದರು. ಈ ಸಂಬಂಧ ಹುಣಸೂರುಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣದಾಖಲಾಗಿದ್ದು ಪೋಲಿಸರು ಮುಂದಿನ ಕ್ರಮಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ
Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್ ಪಂತ್