ಹುಣಸೂರು: ದೊಡ್ಡ ಹೆಜ್ಜೂರು ವೀರಾಂಜನೇಯ ಸ್ವಾಮಿ ಜಾತ್ರೆ ಸಂಪನ್ನ

15 ಸಾವಿರಕ್ಕೂ ಹೆಚ್ಚು ಭಕ್ತರ ಭಾಗಿ

Team Udayavani, Jan 17, 2023, 11:38 AM IST

7–hunsur

ಹುಣಸೂರು: ಹನಗೋಡು ಹೋಬಳಿಯ ದೊಡ್ಡಹೆಜ್ಜೂರಿನಲ್ಲಿ ಸೋಮವಾರ ನಡೆದ ಶ್ರೀ ವೀರಾಂಜನೇಯಸ್ವಾಮಿಯ ರಥ ಉತ್ಸವವು ವಿಜೃಂಭಣೆಯಿಂದ ಜರುಗಿತು.

ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಂಚಿನಲ್ಲಿರುವ ದೇವಸ್ಥಾನದಿಂದ ರಥೋತ್ಸವಕ್ಕೂ ಮುನ್ನ ಶ್ರೀ ವೀರಾಂಜನೇಯ ಉತ್ಸವ ಮೂರ್ತಿಯನ್ನು ಮಂಗಳವಾದ್ಯದೊಂದಿಗೆ ಹೊತ್ತು ತಂದು ದೇವಾಲಯದ ಸುತ್ತ ಪ್ರದಕ್ಷಿಣೆ ಹಾಕಿದ ನಂತರ ಮದ್ಯಾಹ್ನ 12.30ಕ್ಕೆ ಸಿಂಗರಿಸಲಾಗಿದ್ದ ರಥಕ್ಕೆ ಉತ್ಸವ ಮೂರ್ತಿಯನ್ನು ಏರಿಸಿದರು. ಭಕ್ತರು ರಾಮಾಂಜನೇಯ ದೇವರು, ಹೆಜ್ಜೂರಯ್ಯನಿಗೆ ಜೈಕಾರ ಹಾಕುತ್ತಾ, ಹಣ್ಣು-ಜವನ ಎಸೆಯುತ್ತಾ ಸಂಭ್ರಮಿಸಿದರು.

ಪೂಜೆಯ ನಂತರ ಸಾವಿರಾರು ಭಕ್ತರು ಜೈಕಾರ ಹಾಕುತ್ತಾ, ಮಂಗಳ ವಾದ್ಯ ದೊಂದಿಗೆ ನಡುವೆ ರಥವನ್ನು ಎಳೆದರು. ದೇವಾಲಯದ ಸುತ್ತ ರಥವನ್ನು ಎಳೆದು ತಂದು ಸ್ವಸ್ಥಾನಕ್ಕೆ ನಿಲ್ಲಿಸಿದರು. ರಥೋತ್ಸವದ ವೇಳೆ ನವ ದಂಪತಿಗಳು ಸೇರಿದಂತೆ ಆಂಜನೇಯಸ್ವಾಮಿಯ ಆರಾಧಕರು ಹಣ್ಣು ಜವನ ಎಸೆದು ಪುನೀತರಾದರು.

ರಥೋತ್ಸವದ ವೇಳೆಗೆ ಇಡೀ ಜಾತ್ರಾಮಾಳ ಜನರು, ಯುವಪಡೆಯಿಂದ ತುಂಬಿ ತುಳುಕಿತ್ತು, ಮುಂಜಾನೆಯಿಂದಲೇ ದೇವಾಲಯದ ಅರ್ಚಕರು ಸ್ವಾಮಿಗೆ ವಿಶೇಷ ಪೂಜಾ ಕೈಂಕರ್ಯ, ಅಭಿಷೇಕ ನಡೆಸಿದರು.

ರಥೋತ್ಸವಕ್ಕೂ ಮುನ್ನಾ, ನಂತರ ನೂತನ ದೇವಾಲಯದ ಹೊರಗೆ ನಿರ್ಮಿಸಿರುವ ಚಿಕ್ಕ ಗುಡಿಯಲ್ಲಿ ದೇವರ ದರ್ಶನ ಪಡೆಯಲು ಸಾವಿರಾರು ಮಂದಿ ಸರತಿ ಸಾಲಿನಲ್ಲಿ ನಿಂತು ಪೂಜೆ ಸಲ್ಲಿಸಿದರು. ಹೊಸ ಬಟ್ಟೆ ತೊಟ್ಟಿದ್ದ ನೂರಾರು ಕಾಡುಕುಡಿಗಳು, ಆದಿವಾಸಿ ಸಮುದಾಯದ ಮಂದಿ ದೇವರ ದರ್ಶನ ಪಡೆದು ಧನ್ಯತಾ ಭಾವ ಮೆರೆದರು.

ಹರಕೆ ಸಲ್ಲಿಸಿದರು: ದೇವರಿಗೆ ಹರಕೆ ಹೊತ್ತ ಅನೇಕ ಮಂದಿ ಹಿಂದಿನ ದಿನವೇ ಜಾತ್ರಾಮಾಳದಲ್ಲಿ ಬೀಡುಬಿಟ್ಟಿದ್ದರು.  ಲಕ್ಷö್ಮಣತೀರ್ಥ ನದಿ ದಂಡೆಯಲ್ಲಿ ತಲೆ ಮುಡಿಕೊಟ್ಟು, ಬಾಯಿಬೀಗ ಹಾಕಿಕೊಂಡು ದೇವಾಲಯ ಸುತ್ತ ಉರುಳು ಸೇವೆ ಸಲ್ಲಿಸಿದರು. ನದಿ ದಂಡೆಯಲ್ಲೇ ಅಡಿಗೆ ತಯಾರಿಸಿ ಪ್ರಸಾದ ಸೇವಿಸಿದರು. ಹಲವರು ಲಕ್ಷö್ಮಣತೀರ್ಥ ನದಿ ತಟದ ಜಮೀನುಗಳಲ್ಲಿ ಮನೆಗಳಿಂದ ತಂದಿದ್ದ ಬುತ್ತಿಯನ್ನು ಸಾಮೂಹಿಕವಾಗಿ ಹಂಚಿ ಊಟ ಮಾಡಿದರು.

ಈ ಬಾರಿ ಜಾತ್ರೆಗೆ ಬರುವ ವಾಹನಗಳಿಗೆ ಪೋಲೀಸರು ಕೆರೆ ಪಕ್ಕದ ವಿಶಾಲ ಪ್ರದೇಶದಲ್ಲಿ ನಿಲುಗಡೆಗೆ ಅವಕಾಶ ಕಲ್ಪಿಸಿದ್ದರಿಂದ ಟ್ರಾಫಿಕ್ ಜಾಮ್ ತಪ್ಪಿತು. ಗ್ರಾಮಾಂತರ ಠಾಣೆಯ ಇನ್ಸ್ಪೆಕ್ಟರ್ ರವಿ ನೇತೃತ್ವದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು.

ಜಾತ್ರಾ ಮಹೋತ್ಸವದಲ್ಲಿ ಶಾಸಕ ಹೆಚ್.ಪಿ. ಮಂಜುನಾಥ್, ಎಂಡಿಸಿಸಿ ಬ್ಯಾಂಕ್ ಅಧ್ಯಕ್ಷ ಜೆಡಿಎಸ್‌ನ ನಿಯೋಜಿತ ಅಭ್ಯರ್ಥಿ ಜಿ.ಡಿ.ಹರೀಶ್‌ಗೌಡ, ದೊಡ್ಡಹೆಜ್ಜೂರು ಗ್ರಾ.ಪಂ. ಅಧ್ಯಕ್ಷ ಮುದಗನೂರು ಸುಭಾಷ್, ಮಾಜಿ ಅಧ್ಯಕ್ಷ ಶಿವಶಂಕರ್, ದಾ.ರಾ.ಮಹೇಶ್, ಎಪಿಎಂಸಿ ಮಾಜಿ ಅಧ್ಯಕ್ಷ ಕಿರಂಗೂರು ಬಸವರಾಜು ಸೇರಿದಂತೆ ಅನೇಕ ಮುಖಂಡರು ಭಾಗವಹಿಸಿದ್ದರು.

ಜಾತ್ರಾ ಮಹೋತ್ಸವ ಸಮಿತಿ ಅಧ್ಯಕ್ಷ ಶೇಖರೇಗೌಡ, ಕಾರ್ಯದರ್ಶಿ ನಟರಾಜ್ ಸೇರಿದಂತೆ ಸುತ್ತ ಮುತ್ತಲ ಹಳ್ಳಿಗಳವರು ಜಾತ್ರಾ ಯಶಸ್ವಿಗೆ ಶ್ರಮಿಸಿದರು.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.