Hunsur:ಆಡಳಿತ ಸೌಧದ ಸೀಲಿಂಗ್ ಕಳಚಿಬಿದ್ದು ಮಹಿಳೆ ಕಾಲ್ಬೆರಳು ತುಂಡು!

ಅಭದ್ರ ಕಟ್ಟಡದಲ್ಲಿ ಕಚೇರಿ ನಡೆಯುತ್ತಿರುವುದಕ್ಕೆ ಸಾರ್ವಜನಿಕರ ವ್ಯಾಪಕ ಆಕ್ರೋಶ

Team Udayavani, Mar 18, 2024, 9:56 PM IST

1-asasa

ಹುಣಸೂರು: ಹುಣಸೂರು ತಾಲೂಕು ಆಡಳಿತ ಸೌಧದ ಮೇಲ್ಚಾವಣಿ ಸೀಲಿಂಗ್ ಕಳಚಿಬಿದ್ದು, ಮಹಿಳೆಯೊಬ್ಬರ ಕಾಲು ಬೆರಳು ಕಟ್ಟಾಗಿದ್ದರೆ, ಮತ್ತೆರಡು ಬೆರಳಿನ ಮೂಳೆ ಮುರಿದಿದ್ದು, ಅಪಾಯದಿಂದ ಪಾರಾಗಿದ್ದಾರೆ.

ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿಯ ಕಳ್ಳಿಕೊಪ್ಪಲಿನ ಮಹದೇವರ ಪತ್ನಿ ನಾಗಮ್ಮ(66) ಮದ್ಯದ ಬೆರಳು ಕಳೆದುಕೊಂಡು, ಇದೀಗ ನಗರದ ಖಾಸಗಿ ಆಸ್ಪತ್ರೆಯಲ್ಲಿ ಎರಡು ಬೆರಳಿನ ಶ ಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ.

ಇವರು ಕಾರ್ಯ ನಿಮಿತ್ತ ಪುತ್ರ ಗಿರಿಧರ್‌ರೊಂದಿಗೆ ಮಿನಿ ವಿಧಾನಸೌಧದಲ್ಲಿರುವ ಸಬ್‌ರಿಜಿಸ್ಟ್ರಾರ್ ಕಚೇರಿಗೆ ಆಗಮಿಸಿದ್ದರು. ಕಾರಿಡಾರ್‌ನ ಮೆಟ್ಟಲುಗಳ ಮೇಲೆ ಮಧ್ಯಾಹ್ನ ಕುಳಿತಿದ್ದ ವೇಳೆ ಆರ್.ಸಿ.ಸಿ.ಯ ದಪ್ಪದಾದ ಸೀಲಿಂಗ್‌ನ ಒಮ್ಮೆಲೆ ಕಳಚಿ ಕಾಲಿನ ಮೇಲೆ ಬಿದ್ದ ಪರಿಣಾಮ ಮದ್ಯದ ಬೆರಳು ತುಂಡಾಗಿದೆ ಆದರೆ, ಮತ್ತೆರಡು ಬೆರಳಿನ ಮೂಳೆ ಮುರಿದು ಅಪಾರ ರಕ್ತ ಸುರಿಯಿತು. ಚುನಾವಣಾ ಕಾರ್ಯದಿಂದಾಗಿ ಕಚೇರಿಯಲ್ಲಿ ಯಾವ ಅಧಿಕಾರಿಗಳು ಇರಲಿಲ್ಲ, ಇದರಿಂದ ಸ್ಥಳದಲ್ಲಿ ಬಿಗುವಿನ ವಾತವರಣ ಸೃಷ್ಟಿಯಾಯಿತು. ಅಷ್ಟರಲ್ಲಿ ಸ್ಥಳಕ್ಕಾಗಮಿಸಿದ ಗಾವಡಗೆರೆ ಉಪ ತಹಶೀಲ್ದಾರ್ ಅರುಣ್‌ಕುಮಾರ್ ಮತ್ತು ಸಿಬಂದಿ ತತ್ ಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿ, ಸಂಜೆ ಶಸ್ತ್ರಚಿಕಿತ್ಸೆ ನಡೆಸಲಾಯಿತು.

ಘಟನೆಯಿಂದ ಆಕ್ರೋಶಗೊಂಡ ನಾಗಮ್ಮರ ಪುತ್ರ ಗಿರಿಧರ್ ಹಾಗೂ ಸಾರ್ವಜನಿಕರು ಸರಕಾರಕ್ಕೆ ಕನಿಷ್ಠ ಕಟ್ಟಡ ದುರಸ್ತಿ ಮಾಡದಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿ, ಸ್ಥಳಕ್ಕೆ ಶಾಸಕರು, ಹಿರಿಯ ಅಧಿಕಾರಿಗಳು ಆಗಮಿಸಬೇಕೆಂದು ಆಗ್ರಹಿಸಿದರು. ಇದರಿಂದ ಕೆಲ ಹೊತ್ತು ಆತಂಕ ಸೃಷ್ಟಿಯಾಗಿತ್ತು.

ಎಸಿ-ತಹಶೀಲ್ದಾರ್ ಭೇಟಿ
ಆಸ್ಪತ್ರೆಗೆ ಉಪವಿಬಾಗಾಧಿಕಾರಿ ಮಹಮ್ಮದ್ ಹ್ಯಾರಿಸ್ ಸುಮೇರಾ, ತಹಶೀಲ್ದಾರ್ ನಯನಕುಮಾರಿ ದೌಡಾಯಿಸಿ ಗಾಯಾಳು ಹಾಗೂ ಅವರ ಪುತ್ರನನ್ನು ಸಮಾಧಾನಿಸಿ ಆಸ್ಪತ್ರೆಯ ವೆಚ್ಚವನ್ನು ಭರಿಸುವ ಹಾಗೂ ಸರಕಾರದಿಂದ ಪರಿಹಾರ ಕೊಡಿಸಲಾಗುವುದೆಂದು ಭರವಸೆ ಇತ್ತರು.

ಅಭದ್ರ ಕಟ್ಟಡದ ಬಗ್ಗೆ ವರ್ಷದ ಹಿಂದೆಯೇ ಪತ್ರಿಕೆಗಳಲ್ಲಿ ವರದಿಯಾಗಿತ್ತು. 2019 ರಿಂದಲೂ ಹೊಸ ಸೌಧ ನಿರ್ಮಿಸುವ ಬಗ್ಗೆ ಪ್ರಸ್ತಾಪವಾಗುತ್ತಿದೆಯೇ ಹೊರತು ಈವರೆಗೆ ಯಾವ ಕ್ರಮವು ಆಗಿಲ್ಲಾ, ಕನಿಷ್ಟ ದುರಸ್ತಿಯು ಆಗಲಿಲ್ಲ.

ದಸಂಸ ಒತ್ತಾಯ
ಮಿನಿ ವಿಧಾನಸೌಧ ಕಟ್ಟಡವು ಸಂಪೂರ್ಣ ಶಿಥಿಲಗೊಂಡಿದ್ದು, ಹಲವಾರು ಬಾರಿ ಮನವಿ ಮಾಡಿದ್ದರೂ ಸರಕಾರ ಗಮನ ಹರಿಸಿಲ್ಲ, ಈಗಲಾದರೂ ದೊಡ್ಡ ಅನಾಹುತವಾಗುವ ಮೊದಲೇ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ಈ ಬಗ್ಗೆ ಗಮನಹರಿಸಿ ತಕ್ಷಣವೇ ದುರಸ್ತಿಗೆ ಮುಂದಾಗ ಬೇಕೆಂದು ದಸಂಸದ ಜಿಲ್ಲಾ ಸಂಚಾಲಕ ನಿಂಗರಾಜ ಮಲ್ಲಾಡಿ ಅವರು ಎಸಿ ಮಹಮ್ಮದ್ ಹ್ಯಾರಿಸ್‌ಸುಮೇರರಿಗೆ ಮನವಿ ಸಲ್ಲಿಸಿದರು. ಸಾರ್ವಜನಿಕರು ಹಾಗೂ ಆಡಳಿತ ಸೌಧದ ಸಿಬಂದಿ ಸಹ ಹೊಸದಾಗಿ ಪ್ಲಾಸ್ಟಿಂಗ್ ಮಾಡುವಂತೆ ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

15

UV Fusion: ಜೀವನವನ್ನು ಪ್ರೀತಿಸೋಣ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.