ಮೈಸೂರು ಪೊಲೀಸ್ ಆಯುಕ್ತರು ಹಾಗೂ ಡಿಸಿಪಿ ಬಳಿ ನಾನೇ ಕ್ಷಮೆ ಕೇಳಿದ್ದೇನೆ: ಪ್ರತಾಪ್ ಸಿಂಹ
Team Udayavani, Oct 9, 2019, 1:48 PM IST
ಮೈಸೂರು: ಚಾಮುಂಡಿ ಬೆಟ್ಟದಲ್ಲಿ ಪುಷ್ಪಾರ್ಚನೆ ಮಾಡುವ ಮುನ್ನ ದಿನ ಆಕೆಗೆ ಬೈಯ್ಯೋದಕ್ಕೆ ಅವಕಾಶ ಕೊಟ್ಟಿದ್ದರು (ಮಹಿಷ ದಸರಾ). ಇದರಿಂದ ಮನಸ್ಸಿಗೆ ನೋವಾಗಿ ನಾನು ಆ ರೀತಿ ಮಾತನಾಡಿದ್ದೆ. ಹೀಗಾಗಿ ನಾನೇ ಖುದ್ದು ಪೊಲೀಸ್ ಆಯುಕ್ತ ಕೆ.ಟಿ. ಬಾಲಕೃಷ್ಣ ಹಾಗೂ ಡಿಸಿಪಿ ಮುತ್ತುರಾಜ್ ಬಳಿ ಕ್ಷಮೆ ಯಾಚಿಸಿದ್ದೇನೆ ಎಂದು ಮೈಸೂರು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ದಸರೆಯಲ್ಲಿ ಪೊಲೀಸರು ಉತ್ತಮವಾಗಿ ಕೆಲಸ ಮಾಡಿದ್ದಾರೆ. ನಾವೆಲ್ಲ ಒಂದೇ ಕುಟುಂಬದವರಂತೆ ಕೆಲಸ ಮಾಡಿದ್ದೇವೆ. ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದರು.
ಮಹಿಷ ದಸರಾ ಕಾರ್ಯಕ್ರಮಕ್ಕಾಗಿ ಹಾಕಿದ್ದ ಪೆಂಡಾಲು ತೆರವುಗೊಳಿಸುವಂತೆ ಪ್ರತಾಪ್ ಸಿಂಹ ತಾಕೀತು ಮಾಡಿದ್ದರು.
ಮುಂದಿನ ಮೂರು ವರ್ಷ ಸೋಮಣ್ಣನವರೇ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಿರುತ್ತಾರೆ. ಈ ಮಾತನ್ನು ಸ್ವತಃ ಸಿಎಂ ಬಿಎಸ್ವೈ ಅವರೇ ಹೇಳಿದ್ದಾರೆ. ದಸರಾ ಯಶಸ್ವಿಯಾಗಿ ಮುಗಿಸಿದ್ದಕ್ಕೆ ಸಿಎಂ ಯಡಿಯೂರಪ್ಪ ಖುಷಿಯಾಗಿದ್ದಾರೆ. ಸೋಮಣ್ಣನವರಿಗೆ ಮುಂದಿನ ದಸರಾವನ್ನು ನೀನೇ ಮಾಡು ಅಂತಾನು ಹೇಳಿದ್ದಾರೆ. ಹಾಗಾಗಿ ಮುಂದಿನ ದಸರಾವನ್ನು ಸೋಮಣ್ಣನವರ ಉಸ್ತುವಾರಿಯಲ್ಲೇ ಮಾಡ್ತೀವಿ ಎಂದರು ಪ್ರತಾಪ್ ಸಿಂಹ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK
Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ
ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ
Lok Sabha Election; ಇಂದಿನಿಂದ 14 ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆ
MUST WATCH
ಹೊಸ ಸೇರ್ಪಡೆ
Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ