ಜೆಡಿಎಸ್‌ನಲ್ಲಿ ನನಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ


Team Udayavani, Jun 2, 2019, 3:00 AM IST

nanage

ಮೈಸೂರು: ರಾಜ್ಯಾಧ್ಯಕ್ಷನಾಗಿದ್ದರೂ ಪಕ್ಷದೊಳಗೆ ತಮಗೆ ಕವಡೆ ಕಾಸಿನ ಕಿಮ್ಮತ್ತು ಸಿಗುತ್ತಿಲ್ಲ. ಕೆ.ಆರ್‌.ನಗರ ಪುರಸಭೆ ಚುನಾವಣೆಯಲ್ಲಿ ಜೆಡಿಎಸ್‌ ಸೋಲಿಗೆ ನಮ್ಮ ದುರಂಹಕಾರವೇ ಕಾರಣ ಎಂದು ಕ್ಷೇತ್ರದ ಶಾಸಕರೂ ಆದ ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್‌ ವಿರುದ್ಧ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ವಿಶ್ವನಾಥ್‌ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ್ದಾರೆ. ಪುರಸಭೆ ಚುನಾವಣೆಯಲ್ಲಿ ಸೋಲುಂಟಾದ ಹಿನ್ನೆಲೆಯಲ್ಲಿ ಶನಿವಾರ ಕೆ.ಆರ್‌.ನಗರದ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಜೆಡಿಎಸ್‌ ರಾಜ್ಯಾಧ್ಯಕ್ಷನಾಗಿ ನಮ್ಮದೇ ವಾರ್ಡ್‌ನಲ್ಲಿ ತಾನು ಶಿಫಾರಸು ಮಾಡಿದ ವ್ಯಕ್ತಿಗೆ ಟಿಕೆಟ್‌ ನೀಡಲಿಲ್ಲ. ಜೆಡಿಎಸ್‌ ನಾಯಕರಿಗೆ ಹಣ ಬಲವೇ ಮುಖ್ಯವಾಗಿದ್ದು, ಹಣದಿಂದಲೇ ಗೆಲ್ಲಬಹುದು ಎಂಬ ನಮ್ಮ ಅಹಂಕಾರಕ್ಕೆ ಜನತೆ ಸೋಲಿನ ಪಾಠ ಕಲಿಸಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.
ಪಕ್ಷದ ರಾಜ್ಯಾಧ್ಯಕ್ಷನಾಗಿ ತಾನು ಹೇಳಿದ ಒಬ್ಬರಿಗೆ ಟಿಕೆಟ್‌ ನೀಡಲಿಲ್ಲ ಎಂದರೆ ಹೇಗೆ. ಚುನಾವಣೆ ಗೆಲ್ಲಲು ಹಣ ಬಲವೇ ಮುಖ್ಯ ಎನ್ನುವ ನಿಮ್ಮ ದುರಂಹಕಾರದ ಮನೋಭಾವವನ್ನು ಇನ್ನಾದರೂ ಬಿಡಿ, ಇದು ತನ್ನ ಆಗ್ರಹವಲ್ಲ ವಿನಂತಿ ಎಂದಿದ್ದಾರೆ.

ಚುನಾವಣೆಯಲ್ಲಿ ಎಲ್ಲ ಜಾತಿ-ಜನಾಂಗಗಳಿಗೆ ಪ್ರಾತಿನಿಧ್ಯ ಸಿಗಬೇಕು. ಆದರೆ, ಕೆ.ಆರ್‌.ನಗರ ಪುರಸಭೆ ಚುನಾವಣೆ ಹೊಣೆ ಹೊತ್ತಿದ್ದ ಸಾ.ರಾ.ಮಹೇಶ್‌, ಕುರುಬ ಸಮಾಜಕ್ಕೆ ಒಂದೇ ಒಂದು ಟಿಕೆಟ್‌ ಕೊಡಿ ಎಂಬ ತಮ್ಮ ಮಾತನ್ನು ಧಿಕ್ಕರಿಸಿದ್ದಾರೆ. ಕೆ.ಆರ್‌.ನಗರದಲ್ಲಿ ಒಂದೇ ಸಮುದಾಯದವರಿಲ್ಲ. ಇಲ್ಲಿ ಕುರುಬರು, ಕುಂಬಾರರು, ಉಪ್ಪಾರರು ಸೇರಿದಂತೆ ಎಲ್ಲಾ ಜಾತಿ-ಜನಾಂಗದವರೂ ಇದ್ದಾರೆ. ಈ ಕ್ಷೇತ್ರವನ್ನು ಹಲವು ಬಾರಿ ಪ್ರತಿನಿಧಿಸಿ, ಕಳೆದ 40 ವರ್ಷಗಳಿಂದ ರಾಜ್ಯದ ರಾಜಕಾರಣ ನೋಡುತ್ತಿದ್ದೇನೆ. ಪುರಸಭೆಯ ಹಲವು ಚುನಾವಣೆಗಳನ್ನು ನೋಡಿದ್ದೇನೆ.

ಕ್ಷೇತ್ರದಲ್ಲಿ ನಿಮ್ಮ ಗೆಲುವಿನಲ್ಲಿ ಕುರುಬ ಸಮಾಜದ ಪಾತ್ರವೂ ಇದೆ. ಅದು 10, 20, ನೂರು ಮತಗಳು ನಿಮಗೆ ಬಿದ್ದಿದೆಯೋ ಅದು ಬೇರೆ ಮಾತು. ನಿಮಗೆ ಕುರುಬ ಸಮಾಜವೂ ಮತ ನೀಡಿದೆ ಎಂಬುದನ್ನು ತಿಳಿದುಕೊಳ್ಳಿ ಎಂದು ಸಾ.ರಾ.ಮಹೇಶ್‌ರಿಗೆ ಮಾತಿನ ಮೂಲಕ ತಿವಿದರು.
ತನ್ನ ಜೊತೆಗೆ ಜೆಡಿಎಸ್‌ ಸೇರಿದವರು ನಿಮ್ಮ ಗೆಲುವಿಗೆ ರೂವಾರಿಗಳಾಗಲಿಲ್ಲವೇ? ಈ ದ್ವೇಷ ರಾಜಕಾರಣ ಬಿಡಿ, ದ್ವೇಷ ರಾಜಕಾರಣ ಒಳ್ಳೆಯದಲ್ಲ. ಅದರಿಂದ ಅಧಿಕಾರ ಪಡೆಯಲಾಗಲ್ಲ.

ಜನತಂತ್ರ ವ್ಯವಸ್ಥೆಯ ಭಾರತದಲ್ಲಿ ಯಾವುದೇ ಜಾತಿ, ಜನಾಂಗ, ಧರ್ಮ, ಭಾಷಿಕರ ಭವಿಷ್ಯದ ಬೀಗದ ಕೈ ಯಾವುದೆಂದರೆ ರಾಜಕೀಯ ಅಧಿಕಾರ, ದೇವರಾಜ ಅರಸರು ಅದನ್ನು ಅಕ್ಷರಶಃ ಪಾಲಿಸಿದವರು ಎಂದು ನೆನೆದ ವಿಶ್ವನಾಥ್‌, ನಿಮ್ಮ ನಡವಳಿಕೆಯಿಂದಲೇ ಪುರಸಭೆ ಚುನಾವಣೆಯಲ್ಲಿ ಸೋತಿದ್ದೇವೆ.

ಇನ್ನಾದರೂ ದ್ವೇಷ ರಾಜಕಾರಣ ಬಿಡಿ ಎಂದು ಸಚಿವ ಸಾ.ರಾ.ಮಹೇಶ್‌ಗೆ ಕಿವಿಮಾತು ಹೇಳಿದರು. ಕೆ.ಆರ್‌.ನಗರ ಪುರಸಭೆ ಚುನಾವಣೆಯಲ್ಲಿ ಕುರುಬ ಸಮಾಜಕ್ಕೆ ಸೇರಿದ ಒಬ್ಬರೇ ಒಬ್ಬರಿಗೆ ಜೆಡಿಎಸ್‌ ಟಿಕೆಟ್‌ ನೀಡಲಿಲ್ಲ. ನಮ್ಮ ಸಮಾಜವನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ ಎಂದು ದೂರಿದ್ದಾರೆ.

ಸ್ಪಷ್ಟನೆ: ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ವಿಶ್ವನಾಥ್‌ ಪಕ್ಷದ ವಿರುದ್ಧವೇ ತಿರುಗಿ ಬಿದ್ದಿದ್ದಾರೆ ಎಂದು ಮಾಧ್ಯಮಗಳಲ್ಲಿ ಸುದ್ದಿ ಬಿತ್ತರವಾದ ಹಿನ್ನೆಲೆಯಲ್ಲಿ ಈ ಬಗ್ಗೆ ಸ್ಪಷ್ಟನೆ ನೀಡಿರುವ ವಿಶ್ವನಾಥ್‌, ಸಚಿವ ಸಾ.ರಾ.ಮಹೇಶ್‌ ದೌಲತ್ತು, ಹಣ ಬಲದಿಂದ ಏನು ಮಾಡಲು ಆಗಲ್ಲ ಎಂದು ಹೇಳಿದ್ದು ನಿಜ. ತಾನು ಮಾತನಾಡಿದ್ದು ಸಚಿವ ಸಾ.ರಾ. ಮಹೇಶ್‌ ವಿರುದ್ಧವೇ ವಿನಹಃ, ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ, ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ವಿರುದ್ಧ ಅಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ನೋವು ಚುನಾವಣೆಯಲ್ಲಿ ತೋರಿಸಿದ್ದಾರೆ…: ಒಳ್ಳೆಯ ಮನಸ್ಸಿನಲ್ಲಿ ರಾಜಕಾರಣ ಮಾಡಿ, ಲೋಕಸಭೆ ಚುನಾವಣೆಯಲ್ಲಿ ಸುಮಲತಾ ಗೆದ್ದಿದ್ಯಾಕೆ? ಅವರಲ್ಲಿರುವ ಒಳ್ಳೆಯ ಮನಸ್ಸಿನಿಂದ ಎಂಬುದನ್ನು ಇನ್ನಾದರೂ ತಿಳಿದುಕೊಳ್ಳಿ. ಕೆ.ಆರ್‌.ನಗರದಲ್ಲಿ ಮಂತ್ರಿಗಳಿದ್ದೂ ಲೋಕಸಭೆ ಚುನಾವಣೆ, ಪುರಸಭೆ ಚುನಾವಣೆಯಲ್ಲಿ ಪಕ್ಷ ಹಿನ್ನಡೆ ಅನುಭವಿಸಿದೆ. ಕೆಲವು ಜಾತಿಗಳನ್ನು ನೇರವಾಗಿ ಧಿಕ್ಕರಿಸಿದ್ದರಿಂದ ಅವರ ಮನಸ್ಸಿಗೆ ನೋವಾಗಿದೆ. ಅದನ್ನು ಚುನಾವಣೆಯಲ್ಲಿ ತೋರಿಸಿದ್ದಾರೆಂದು ಸಚಿವ ಸಾ.ರಾ.ಮಹೇಶ್‌ ವಿರುದ್ಧ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ವಿಶ್ವನಾಥ್‌ ಕಿಡಿಕಾರಿದರು.

ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ವಿಶ್ವನಾಥ್‌ ತಮ್ಮ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಿರಿಯರಾದ ಎಚ್‌.ವಿಶ್ವನಾಥ್‌ರಿಗೆ ರಾಜಕಾರಣದಲ್ಲಿ 40 ವರ್ಷಗಳ ಅನುಭವವಿದೆ. ನಮ್ಮಂತವರಿಗೆ ಸಲಹೆ-ಸೂಚನೆ ನೀಡುವ ಸಂಪೂರ್ಣ ಹಕ್ಕು ಅವರಿಗಿದೆ. ಅವರ ಸಲಹೆ-ಸೂಚನೆಗಳಲ್ಲಿ ಸತ್ಯಾಂಶಗಳಿದ್ದರೆ ಸರಿಪಡಿಸಿಕೊಳ್ಳುತ್ತೇನೆ.
-ಸಾ.ರಾ.ಮಹೇಶ್‌, ಸಚಿವ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.