ನನಗೆ ರೌಡಿಗಳ ಅವಶ್ಯಕತೆ ಇಲ್ಲ: ಸಂಸದ ಪ್ರತಾಪ್ ಸಿಂಹ
ಆಯಿಲ್ ಕುಮಾರ್, ಕೊತ್ವಾಲ್, ಜಯರಾಜ್ ನ ಇಟ್ಟುಕೊಂಡು ರಾಜಕಾರಣ ಮಾಡಿದವರು ಯಾರು?
Team Udayavani, Dec 3, 2022, 8:01 PM IST
ಮೈಸೂರು: ”ಬೆತ್ತನಗೆರೆ ಶಂಕರ್ ನ ಬಗ್ಗೆ ನನಗೆ ಗೊತ್ತಿಲ್ಲ.ಪಕ್ಣ ಸೇರ್ಪಡೆಗೆ ಸಾವಿರಾರು ಜನರು ಬರುತ್ತಾರೆ.ಅವರ ಕುಂಡಲಿ, ಜಾತಕ ತೆಗೆದುಕೊಂಡು ನಾನು ಪರೀಕ್ಷೆ ಮಾಡಲು ಸಾಧ್ಯವಿಲ್ಲ” ಎಂದು ಸಂಸದ ಪ್ರತಾಪ್ ಸಿಂಹ ಕಾಂಗ್ರೆಸ್ ಟೀಕೆಯ ಕುರಿತು ಶನಿವಾರ ತಿರುಗೇಟು ನೀಡಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಪ್ರತಾಪ್ ಸಿಂಹ,”ಬಿಜೆಪಿ ನಾಯಕ ಅಪ್ಪಣ್ಣ ಅವರು ಎಚ್.ಡಿಕೋಟೆ ಭಾಗದಲ್ಲಿ ಕೆಲವರನ್ನು ಪಕ್ಷಕ್ಕೆ ಸೇರಿಸಿಕೊಂಡರು. ಮೈಸೂರಿನ ಬಿಜೆಪಿ ಕಚೇರಿಯಲ್ಲಿ ನಡೆದ ಆ ಕಾರ್ಯಕ್ರಮದಲ್ಲಿ ಶಾಲು ಹಾಕಿ ಕೆಲವರನ್ನು ಸ್ವಾಗತ ಮಾಡಿದೆ”ಎಂದರು.
”ನಾನು ಕೆಲಸಕ್ಕೆ ತೆಗೆದುಕೊಳ್ಳುವ ಕೆಲಸ ಮಾಡುತ್ತಿಲ್ಲ. ರೌಡಿಗಳನ್ನು ಮುಂದಿಟ್ಟುಕೊಂಡು ರಾಜಕಾರಣ ಮಾಡುವ ಕಾಲ ಹೋಗಿದೆ.ಪಾರ್ಟಿ ಹೇಳಿದ ಮೇಲೆ ಪಕ್ಷಕ್ಕೆ ಶಾಲು ಹಾಕಿ ಕರೆದುಕೊಂಡಿದ್ದೇನೆ” ಎಂದರು.
”ನನಗೆ ರೌಡಿಗಳ ಅವಶ್ಯಕತೆ ಇಲ್ಲ.ಆಯಿಲ್ ಕುಮಾರ್, ಕೊತ್ವಾಲ್, ಜಯರಾಜ್ ನ ಇಟ್ಟುಕೊಂಡು ರಾಜಕಾರಣ ಮಾಡಿದವರು ಯಾರು” ಎಂದು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!