ಹುಣಸೂರು ಜನರ ಭಾವನೆಗಳಿಗೆ ಸ್ಪಂದಿಸಿದ್ದೇನೆ: ಪ್ರತಾಪ್‌ ಸಿಂಹ


Team Udayavani, Apr 14, 2019, 3:32 AM IST

hun-jana

ಹುಣಸೂರು: ತಾವು ಸಂಸದರಾದ ಬಳಿಕ ತಂಬಾಕು ಬೆಳೆಗಾರರಿಗೆ ಸಮಾಧಾನಕರ ದರ ಕೊಡಿಸಿ ಬೆಳೆಗಾರರ ಕ್ಷೇಮಾಭಿವೃದ್ಧಿಗೆ ದುಡಿದಿದ್ದೇನೆ. ಅಲ್ಲದೇ ತಾಲೂಕಿನ ಜನರ ಭಾವನೆಗಳಿಗೆ ಸ್ಪಂದಿಸಿದ್ದೇನೆಂದು ಬಿಜೆಪಿ ಅಭ್ಯರ್ಥಿ ಪ್ರತಾಪ್‌ ಸಿಂಹ ಹೇಳಿದರು.

ತಾಲೂಕಿನ ಗಾವಡಗೆರೆ ಹೋಬಳಿಯ ಹರವೆ, ಹಿರಿಕ್ಯಾತನಹಳ್ಳಿ, ಕಟ್ಟೆಮಳಲವಾಡಿ ಗ್ರಾಮದಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಹುಣಸೂರು ಉಪವಿಭಾಗ ವ್ಯಾಪ್ತಿಯ ಪ್ರಮುಖ ವಾಣಿಜ್ಯ ಬೆಳೆ ತಂಬಾಕಿಗೆ ಕಳೆದ 5 ವರ್ಷದಿಂದಲೂ ದರ ಕೊಡಿಸುವ ಪ್ರಾಮಾಣಿಕ ಪ್ರಯತ್ನ ನಡೆಸಿ, ಸರಾಸರಿ ದರ ಹೆಚ್ಚಿಸಿ ರೈತರ ಅರ್ಥಿಕ ಸ್ಥಿತಿ ಸುಧರಿಸುವ ಕೆಲಸ ಮಾಡಿದ್ದೇನೆ.

2017 ರಲ್ಲಿ ತಂಬಾಕು ಸರಾಸರಿ ದರ 134 ರೂ ಇತ್ತು. 2018-19ರ ಮಾರುಕಟ್ಟೆ ಮುಕ್ತಾಯಗೊಂಡು ಈ ಸಾಲಿನ ಸರಾಸರಿ ದರ 183 ರೂ ಸಿಕ್ಕಿದೆ. ಜೊತೆಗೆ ಕನಿಷ್ಠ ದರ 70 ರೂ. ಸಿಕ್ಕಿದ್ದು, ರೈತರ ಮುಖದಲ್ಲಿ ನಗೆ ಕಾಣುವಂತೆ ಮಾಡಲಾಗಿದೆ ಎಂದರು.

ತಂಬಾಕು ಮಂಡಳಿವ‌ತಿಯಿಂದ ಬೆಳೆಗಾರರಿಗೆ ಸರಬರಾಜು ಮಾಡುತ್ತಿದ್ದ ರಸಗೊಬ್ಬರ ವಿತರಣಾ ವ್ಯವಸ್ಥೆಯಲ್ಲಿ ಪರಿಣಾಮಕಾರಿ ಬದಲಾವಣೆ ತಂದು ಪ್ರತಿ ಪ್ಲಾಟ್‌ ಫಾರಂ ರೈತ ಸಮಿತಿಯಿಂದಲೇ ರಸಗೊಬ್ಬರ ನಿರ್ವಹಣೆ ಮಾಡುವ ವ್ಯವಸ್ಥೆಗೆ ಚಾಲನೆ ನೀಡಿ ಮಧ್ಯವರ್ತಿಗಳಿಗೆ ಕಡಿವಾಣ ಹಾಕಲಾಗಿದೆ. ರೈತರಿಗೆ ಕಡಿಮೆ ದರದಲ್ಲಿ ಗೊಬ್ಬರ ಕೊಡಿಸುವ ವ್ಯವಸ್ಥೆ ಕಲ್ಪಿಸಿದ್ದೇನೆ ಎಂದು ತಿಳಿಸಿದರು.

ತಾವು ಸಂಸದರಾದ ಆರಂಭದಲ್ಲಿ ತಂಬಾಕು ವಿಚಾರ ತಿಳಿಯದೇ ಅಲ್ಲಲ್ಲಿ ತಪ್ಪು ಆಗಿದ್ದು, ಇದೀಗ ತ‌ಂಬಾಕು ಬೆಳೆ ಕುರಿತು ಪೂರ್ಣ ಅರಿವು ಹೊಂದಿದ್ದೇನೆ ಎಂದರು. ಕೇಂದ್ರ ಸರ್ಕಾರದಿಂದ‌ 14ನೇ ಹಣಕಾಸು ಯೋಜನೆಯಡಿ ತಾಲೂಕಿನ 41 ಪಂಚಾಯಿತಿಗಳಲ್ಲಿ 26 ಪಂಚಾಯಿತಿ ಕಟ್ಟಡ ನಿರ್ಮಾಣ, ವಿವಿಧ ಕಟ್ಟಡಗಳ ನಿರ್ಮಾಣ, ಶಾಲಾ ಕಾಂಪೌಂಡ್‌ ಸೇರಿದಂತೆ ನರೇಗಾ ಯೋಜನೆಯಡಿ ಮೂಲಭೂತ ಸವಲತ್ತುಗಳನ್ನು ಗ್ರಾಮಗಳಿಗೆ ಕಲ್ಪಿಸಿದ್ದೇನೆ.

ಹುಣಸೂರಿನಲ್ಲಿ ತಾಯಿ ಮತ್ತು ಮಗುವಿನ ಸುಸಜ್ಜಿತ ಆಸ್ಪತ್ರೆ ಮಂಜೂರು ಮಾಡಿಸಿದ್ದೇನೆ. ಮೈಸೂರು ಜಿಲ್ಲಾ ಕೇಂದ್ರವನ್ನು ಅಭಿವೃದ್ಧಿ ಪಡಿಸಿ ಪ್ರವಾಸೋದ್ಯಮವನ್ನಾಗಿ ಉನ್ನತ ಸ್ಥಾನಕ್ಕೆ ತೆಗೆದುಕೊಂಡು ಹೋಗಲು ಬೇಕಾದ ಹೆದ್ದಾರಿ-ರಸ್ತೆಗಳ ಅಭಿವೃದ್ಧಿ, ರೈಲು, ವಿಮಾನ ಹಾರಾಟಕ್ಕೆ ಒತ್ತು ನೀಡಿದ್ದು, ಶೀಘ್ರದಲ್ಲೇ ಮತ್ತೆ ನಾಲ್ಕು ವಿಮಾನಗಳು ಮೈಸೂರಿಗೆ ಬರಲಿವೆ ಎಂದು ಭರವಸೆ ನೀಡಿದರು.

ಪ್ರಚಾರ ಸಭೆಯಲ್ಲಿ ಬಿಜೆಪಿ ತಾಲೂಕು ಅಧ್ಯಕ್ಷ ಯೋಗಾನಂದ ಕುಮಾರ್‌, ಜಿಪಂ ಮಾಜಿ ಸದಸ್ಯ ರಮೆಶ್‌ ಕುಮಾರ್‌, ತಂಬಾಕು ಮಂಡಳಿ ಸದಸ್ಯ ಕಿರಣ್‌ ಕುಮಾರ್‌, ವಿರೇಶ್‌ ರಾವ್‌ ಬೋಬಡೆ, ಮೈ.ವಿ.ರವಿಶಂಕರ್‌ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.