ಸಿದ್ದರಾಮಯ್ಯ ತಂಟೆಗೆ ಬಂದರೆ ಹುಷಾರ್: ದಿನೇಶ್
Team Udayavani, Oct 19, 2019, 8:05 PM IST
ಮೈಸೂರು: ಕೇಂದ್ರದ ಬಿಜೆಪಿ ಸರಕಾರ ಕಾಂಗ್ರೆಸ್ನವರೆಲ್ಲ ಭ್ರಷ್ಟರು ಎಂಬಂತೆ ಬಿಂಬಿಸಿ ದೇಶದಲ್ಲಿ ಕಾಂಗ್ರೆಸ್ ನಿರ್ನಾಮ ಮಾಡಲು ಹೊರಟಿದೆ.
ಡಿ.ಕೆ.ಶಿವಕುಮಾರ್, ಪರಮೇಶ್ವರ್ ಆಯ್ತು, ಈಗ ಸಿದ್ದರಾಮಯ್ಯ ಅವರನ್ನು ಸಿಲುಕಿಸಲು ನೋಡುತ್ತಿದ್ದಾರೆ. ಅದು ಸಾಧ್ಯವಾಗುವುದಿಲ್ಲ. ಆ ರೀತಿ ಮಾಡಿದರೆ ಕಾಂಗ್ರೆಸ್ ಕಾರ್ಯಕರ್ತರು ಬೀದಿಗಿಳಿಯಬೇಕಾಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಎಚ್ಚರಿಕೆ ನೀಡಿದರು.
ಸಿದ್ದರಾಮಯ್ಯ ಅವರಿಗೆ ಏರ್ಪಡಿಸಿದ್ದ ಅಭಿನಂದನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಮೈತ್ರಿ ಸರಕಾರದಲ್ಲಿ ಕಾಂಗ್ರೆಸ್ಗೆ ಮುಕ್ತ ಅವಕಾಶವಿರಲಿಲ್ಲ. ಮೈತ್ರಿ ಸರಕಾರ ಬೀಳಿಸಲು ಬಿಜೆಪಿಯವರು ನೂರಾರು ಕೋ. ರೂ. ಖರ್ಚು ಮಾಡಿದ್ದಾರೆ.
ಈ ಬಗ್ಗೆ ಯಡಿಯೂರಪ್ಪ ಅವರೇ ಮಾತನಾಡಿರುವ ಆಡಿಯೋ ಟೇಪುಗಳಿವೆ. ಅಧಿಕಾರಕ್ಕೆ ಬಂದು ಮೂರು ತಿಂಗಳುಗಳಾದರೂ ಯಾವುದೇ ಕಾರ್ಯಕ್ರಮ ನೀಡದ ಇಂತಹ ಕೆಟ್ಟ ಸರಕಾರವನ್ನು ನಾನೆಂದೂ ನೋಡಿರಲಿಲ್ಲ. ಖಜಾನೆಯಲ್ಲಿ ದುಡ್ಡಿಲ್ಲ ಎಂದು ಮುಖ್ಯಮಂತ್ರಿಯೇ ಅಸಹಾಯಕರಾಗಿದ್ದಾರೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್