ಸರಕು ಸಾಗಣೆ ವಾಹನದಲ್ಲಿ ಪ್ರಯಾಣಿಕರ ತುಂಬಿದರೆ ಕ್ರಮ


Team Udayavani, May 20, 2019, 3:00 AM IST

saraku

ಮೈಸೂರು: ಸರಕು ಸಾಗಣೆ ವಾಹನಗಳಲ್ಲಿ ಪ್ರಯಾಣಿಸುವುದರಿಂದ ಆಗುವ ತೊಂದರೆಗಳು ಮತ್ತು ಕಾನೂನು ಪ್ರಕಾರ ಅಪರಾಧವೆಂದು ಜಿಲ್ಲಾ ಕಾರ್ಮಿಕ ಇಲಾಖೆಯು ಅನೇಕ ಗಾರ್ಮೆಂಟ್ಸ್‌ ಹಾಗೂ ಕಾರ್ಖಾನೆಗಳಲ್ಲಿ ಜಾಗೃತಿ ಮೂಡಿಸುತ್ತಿದೆ. ಅದೇ ರೀತಿ ಸಂಬಂಧಪಟ್ಟ ಎಲ್ಲಾ ಇಲಾಖೆಗಳು ಸಹಾ ಜಾಗೃತಿ ಮೂಡಿಸುವಲ್ಲಿ ಕೈ ಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಅಭಿರಾಮ್‌ ಜಿ.ಶಂಕರ್‌ ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದª ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.

ಬಸ್‌ ಸೌಲಭ್ಯ ಕಲ್ಪಿಸಿ: ಜಿಲ್ಲೆಯಲ್ಲಿ ಕಟ್ಟಡ ಕಾರ್ಮಿಕರು ಹಾಗೂ ಗಾರ್ಮೆಂಟ್ಸ್‌ಗೆ ಹೋಗುವ ಮಹಿಳಾ ಕಾರ್ಮಿಕರು ಯಾವ ಭಾಗಗಳಲ್ಲಿ ಹೆಚ್ಚು ಪ್ರಯಾಣಿಸುತ್ತಾರೋ ಆ ಭಾಗಗಳಲ್ಲಿ ಹೆೆಚ್ಚು ಬಸ್‌ ಸೌಲಭ್ಯ ಒದಗಿಸಬೇಕು ಮತ್ತು ಬೆಂಗಳೂರಿನಲ್ಲಿ ಕಾರ್ಮಿಕರಿಗೆ ಬಸ್‌ ಪಾಸ್‌ ನೀಡಲಾಗುತ್ತಿದ್ದು, ಮೈಸೂರು ಜಿಲ್ಲೆಯಲ್ಲೂ ನೀಡಲು ಕಾರ್ಮಿಕ ಇಲಾಖೆ ಹಾಗೂ ಸಾರಿಗೆ ಇಲಾಖೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಸೂಚಿಸಿದರು.

ಸರಕು ಸಾಗಣೆ ವಾಹನಗಳಲ್ಲಿ ಸಾರ್ವಜನಿಕರು ಪ್ರಯಾಣಿಸುವುದು ಕಾನೂನು ಬಾಹಿರವಾಗಿದ್ದು, ಆದಷ್ಟು ಜಾಗೃತಿ ಮೂಡಿಸಬೇಕು ಮತ್ತು ಅನೇಕ ಸಾರ್ವಜನಿಕ ಸ್ಥಳಗಳಲ್ಲಿ ಜಾಹೀರಾತು ಫ‌ಲಕಗಳ ಮೂಲಕ ಜಾಗೃತಿ ಮೂಡಿಸಲು ರಸ್ತೆ ಸುರಕ್ಷತಾ ಸಮಿತಿಯು ಕ್ರಮ ವಹಿಸಬೇಕು ಎಂದರು.

ಹೆಲ್ಮೆಟ್‌ ಕಡ್ಡಾಯ: ನಗರದ ಅನೇಕ ಕಡೆಗಳಲ್ಲಿ ಅಪಘಾತವಾಗುತ್ತಿದ್ದು ಅದನ್ನು ತಡೆಗಟ್ಟಲು ಪೊಲೀಸ್‌ ಇಲಾಖೆ ಸೂಕ್ತ ಕ್ರಮವಹಿಸಬೇಕು ಹಾಗೂ ಟ್ರಾಫಿಕ್‌ಗಳಲ್ಲಿ ಅಳವಡಿಸಿರುವ ಸಿಸಿ ಕ್ಯಾಮರಾಗಳು ಕಾರ್ಯ ನಿರ್ವಹಿಸುತ್ತಿವೆಯೇ ಎಂಬುದನ್ನು ಪರಿಸೀಲಿಸಬೇಕು ಮತ್ತು ಬೈಕ್‌ ಸವಾರರಿಗೆ ಹೆಲ್ಮೆಟ್‌ ಕಡ್ಡಾಯವಾಗಿರಬೇಕು. ನಗರದ ಹೊರಭಾಗದಲ್ಲಿ ಹೆಲ್ಮೆಟ್‌ ಧರಿಸದೇ ಪ್ರಯಾಣಿಸುವವರು ಅನೇಕರು ಇದ್ದಾರೆ. ಹಾಗಾಗಿ ಪೊಲೀಸ್‌ ಇಲಾಖೆ ಎಲ್ಲಾ ಕಡೆ ಅಧಿಕಾರಿಗಳನ್ನು ನಿಯೋಜಿಸಬೇಕು ಎಂದರು.

ಅರಿವು: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ಪಿ.ದೇವಮಾನೆ ಮಾತನಾಡಿ, ಹಳ್ಳಿಗಳಲ್ಲಿ ಗೂಡ್ಸ್‌ ವಾಹನ ಪ್ರಯಾಣಿಕರು ಹೆಚ್ಚು ಕಂಡುಬರುತ್ತಾರೆ. ಅವರಿಗೆ ಕಾನೂನು ಅರಿವು ಮೂಡಿಸಬೇಕು ಹಾಗೂ ಶಾಲೆ ವಾಹನಗಳಲ್ಲಿ ಮಕ್ಕಳು ಒಂದು ವಾಹನದಲ್ಲಿ ಎಷ್ಟು ಪ್ರಯಾಣಿಸಬೇಕು ಹಾಗೂ ಡ್ರೈವರ್‌ ಎಷ್ಟು ವೇಗದಲ್ಲಿ ಚಲಾಯಿಸಬೇಕು ಮತ್ತು ವಾಹನ ಯಾವ ಹಂತದಲ್ಲಿರಬೇಕು ಎಂಬುದನ್ನು ಎಲ್ಲಾ ಶಾಲೆಗಳಿಗೂ ಮಾಹಿತಿ ನೀಡಿ ಕಟ್ಟುನಿಟ್ಟಿನ ಕ್ರಮ ವಹಿಸುವಂತೆ ಆದೇಶಿಸಿ ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.

ಅಪರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪಿ.ಸ್ನೇಹಾ, ಪ್ರಾದೇಶಿಕ ಸಾರಿಗೆ ಅಧಿಕಾರಿ ಪ್ರಭುಸ್ವಾಮಿ ಹಾಗೂ ಜಿಲ್ಲೆಯ ಇತರೆ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ಟಾಪ್ ನ್ಯೂಸ್

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Shotgun

Shotgun ಶೂಟಿಂಗ್‌ ಅರ್ಹತಾ ಸುತ್ತಿನಲ್ಲಿ ಕರಣ್‌: ವಿವಾದ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.