ವಾಸ್ತವ್ಯ ಹೂಡಿದರೆ ಅಸ್ಪೃಶ್ಯತೆ ತೊಲಗದು
Team Udayavani, Dec 17, 2018, 11:33 AM IST
ಹುಣಸೂರು: ಪರಸ್ಪರ ಪ್ರೀತಿ, ಸೋದರತ್ವ ಬೆಳೆಸಿಕೊಂಡರೆ ಮಾತ್ರ ಅಸ್ಪೃಶ್ಯತೆ ತೊಲಗಿಸಲು ಸಾಧ್ಯ ಎಂದು ಪತ್ರಕರ್ತರ ಅಭ್ಯುದಯ ಸಹಕಾರ ಸಂಘದ ಅಧ್ಯಕ್ಷ, ಲೇಖಕ ಕೆ.ದೀಪಕ್ ತಿಳಿಸಿದರು. ತಾಲೂಕಿನ ಹನಗೋಡು ಗ್ರಾಮದಲ್ಲಿ ತಾಲೂಕು ಆಡಳಿತ ಶನಿವಾರ ಆಯೋಜಿ ಸಿದ್ದ ಅಸ್ಪೃಶ್ಯತೆ ನಿವಾರಣೆ ಜಾಗೃತಿ ಕಮ್ಮಟದಲ್ಲಿ ಮಾತನಾಡಿದರು.
ದೇಶಕ್ಕೆ ಸ್ವಾತಂತ್ರ್ಯ ಬಂದು 70 ವರ್ಷ ಕಳೆದರೂ ಅಸ್ಪೃಶ್ಯತೆ ಜೀವಂತವಾಗಿದೆ. ಇದು ಜನರ ಮನೋರೋಗವೇ ಹೊರೆತು ಬೇರೇನೂ ಅಲ್ಲ. ಈ ರೋಗಕ್ಕೆ ಸಂವಿ ಧಾನದ ಆಶಯ ಮತ್ತು ಅಂಬೇಡ್ಕರ್ ಚಿಂತನೆಯೇ ಮದ್ದು. ರಾಜಕಾರಣಿಗಳು ದಲಿತರ ಮನೆಗಳಲ್ಲಿ ವಾಸ್ತವ್ಯ ಹೂಡಿದ ಮಾತ್ರಕ್ಕೆ ಅಸ್ಪೃಶ್ಯತೆ ತೊಲಗದು.
ಬದಲಿಗೆ ವೈಜ್ಞಾನಿಕ ಚಿಂತನೆ ಅಳವಡಿಸಿಕೊಂಡರೆ ಮಾತ್ರ ಇದರ ನಿವಾರಣೆ ಸಾಧ್ಯ ಎಂದರು. ಸಮಾಜ ಕಲ್ಯಾಣಾಧಿಕಾರಿ ಮೋಹನ್ ಕುಮಾರ್ ಮಾತನಾಡಿ, ಅಸ್ಪೃಶ್ಯತೆ ಕುರಿತು ಜಾಗೃತಿ ಮೂಡಿಸಲು ಜಿಲ್ಲೆಯಲ್ಲಿ ಇದೇ ಪ್ರಥಮ ಬಾರಿಗೆ ಅಸ್ಪೃಶ್ಯತೆ ನಿವಾರಣೆ ಕಮ್ಮಟ ಹಮ್ಮಿಕೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ತಾಲೂಕಿನ ಗಾವಡಗೆರೆ, ಬಿಳಿಕೆರೆ ಯಲ್ಲೂ ಕಾರ್ಯಕ್ರಮ ಆಯೋಜಿಸಲಾಗು ವುದು ಎಂದು ತಿಳಿಸಿದರು.
ತಾಪಂ ಸದಸ್ಯೆ ರೂಪಾ ಮಾತನಾಡಿ, ಜನರಲ್ಲಿ ಅಸ್ಪೃಶ್ಯತೆ ಮನೋಭಾವ ಬದಲಾಗಬೇಕು. ಮಾನವೀಯ ನೆಲೆಯಲ್ಲಿ ಯೋಚಿಸಬೇಕು ಎಂದು ಸಲಹೆ ನೀಡಿದರು. ದಲಿತ ಮುಖಂಡ ನಿಂಗರಾಜ್ ಮಲ್ಲಾಡಿ ಮಾತನಾಡಿ, ಕೇವಲ ಪೊಲೀಸ್ ಠಾಣೆಗಳಲ್ಲಿ ದೂರು ನೀಡಿ, ಒಬ್ಬರ ಮೇಲೊಬ್ಬರು ಕೇಸು ಹಾಕಿಕೊಂಡು ಊರಿನಲ್ಲಿ ನೆಮ್ಮದಿ ಹಾಳು ಮಾಡಿ ಕೊಳ್ಳುವುದರ ಬದಲಿಗೆ ಪರಸ್ಪರ ಪ್ರೀತಿ, ಸ್ನೇಹದಿಂದ ಬಾಳ್ವೆ ನಡೆಸಬೇಕು ಎಂದು ಸಲಹೆ ನೀಡಿದರು.
ವೇದಿಕೆಯಲ್ಲಿ ತಾಪಂ ಸದಸ್ಯ ಟಿ.ಆರ್. ಶ್ರೀನಿವಾಸ್, ಮಾಜಿ ಸದಸ್ಯ ಗಣಪತಿ, ದಲಿತ ಮುಖಂಡರಾದ ರತ್ನಪುರಿ ಪುಟ್ಟಸ್ವಾಮಿ, ಬಲ್ಲೇನಹಳ್ಳಿ ಕೆಂಪರಾಜು, ಸ್ವಾಮಿ, ಸೋಮಯ್ಯ, ರಾಜಪ್ಪ, ಎಎಸ್ಐ ಚಿನ್ನಸ್ವಾಮಿ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಮಂಜುಳಾ, ರಾಜೇಶ್, ಮಲ್ಲಿಕಾರ್ಜುನ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್ ಮೆಂಟ್ ಮಾಡಿಕೊಂಡ ಜೋಡಿ
RC 17: ಮತ್ತೆ ಒಂದಾದ ರಂಗಸ್ಥಳಂ ತಂಡ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ