ಆನ್‌ಲೈನ್‌ ಕಂದಾಯ ಪಾವತಿ ಅನುಷ್ಠಾನಗೊಳಿಸಿ


Team Udayavani, Jun 8, 2019, 3:00 AM IST

online

ಮೈಸೂರು: ನಗರಪಾಲಿಕೆ ವ್ಯಾಪ್ತಿಯಲ್ಲಿ ಸೋಮವಾರದಿಂದಲೇ ಕುಡಿಯುವ ನೀರಿಗೆ ಆನ್‌ಲೈನ್‌ ಮೂಲಕ ಬಿಲ್‌ ಪಾವತಿ ಮಾಡುವ ವ್ಯವಸ್ಥೆ ಜಾರಿಯಾಗಲಿದ್ದು, ಕಂದಾಯವನ್ನೂ ಆನ್‌ಲೈನ್‌ನಲ್ಲಿ ಕಟ್ಟಿಸಿಕೊಳ್ಳುವ ಪ್ರಕ್ರಿಯೆಯೂ ಶೀಘ್ರ ಅನುಷ್ಠಾನಗೊಳಿಸುವುದರ ಬಗ್ಗೆ ಕೌನ್ಸಿಲ್‌ನಲ್ಲಿ ತೀರ್ಮಾನಿಸಲಾಯಿತು.

ಶುಕ್ರವಾರ ನಗರಪಾಲಿಕೆಯ ನಾಲ್ವಡಿ ಸಭಾಂಗಣದಲ್ಲಿ ನಡೆದ ಕೌನ್ಸಿಲ್‌ ಸಾಮಾನ್ಯ ಸಭೆಯಲ್ಲಿ ಈ ಬಗ್ಗೆ ವಿಸ್ತತ ಚರ್ಚೆ ನಡೆಯಿತು. ಕುಡಿಯುವ ನೀರಿನ ಬಿಲ್ಲನ್ನು ಆನ್‌ಲೈನ್‌ನಲ್ಲಿ ಕಟ್ಟಿಸಿಕೊಳ್ಳುವ ಮಾದರಿಯಲ್ಲೇ ಕಂದಾಯ ಕಟ್ಟಿಸಿಕೊಳ್ಳುವ ವ್ಯವಸ್ಥೆ ಜಾರಿಗೊಳಿಸಬೇಕು ಎಂದು ಪಾಲಿಕೆ ಸರ್ವ ಸದಸ್ಯರು ಒತ್ತಾಯಿಸಿದರು. ಈಗಾಗಲೇ ಬೆಂಗಳೂರು, ಮಂಗಳೂರು, ಶಿವಮೊಗ್ಗ ಹುಬ್ಬಳ್ಳಿ-ಧಾರವಾಡ ಸೇರಿ ಮೊದಲಾದ ಕಡೆ ಆನ್‌ಲೈನ್‌ನಲ್ಲಿ ಕಂದಾಯ ಪಾವತಿ ಮಾಡಿಸಿಕೊಳ್ಳಲಾಗುತ್ತಿದೆ. ಹೀಗಾಗಿ ನಗರಪಾಲಿಕೆಯಲ್ಲೂ ಜಾರಿಗೊಳಿಸಲು ಕ್ರಮವಹಿಸುವಂತೆ ಒತ್ತಾಯಿಸಿದರು.

ಅಗತ್ಯ ಕ್ರಮ: ಮೇಯರ್‌ ಪುಷ್ಪಲತಾ ಜಗನ್ನಾಥ್‌ ಮಾತನಾಡಿ, ಸೋಮವಾರ ಆನ್‌ಲೈನ್‌ನಲ್ಲಿ ನೀರಿನ ಬಿಲ್‌ ಪಾವತಿಗೆ ಚಾಲನೆ ನೀಡಲಾಗುವುದು. ಕಂದಾಯ ಪಾವತಿ ಆನ್‌ಲೈನ್‌ ಮಾಡುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಕ್ರಮ ವಹಿಸಲಾಗುವುದು ಎಂದರು. ಆಯುಕ್ತೆ ಶಿಲ್ಪನಾಗ್‌ ಮಾತನಾಡಿ, ಇದಕ್ಕೆ ಒಂದೂವರೆ ವರ್ಷ ಸಮಯಾವಕಾಶ ಹಿಡಿಯಲಿದ್ದು, ಅದಾದ ಬಳಿಕ ಮಾಡುವ ನಿಟ್ಟಿನಲ್ಲಿ ಕ್ರಮವಹಿಸಲಾಗುವುದು ಎಂದು ಹೇಳಿದರು.

ಬೈಲಾದಂತೆ ಜಾಹೀರಾತು: ಸರ್ಕಾರಕ್ಕೆ ಕಳುಹಿಸಿರುವ ಬೈಲಾ ನಿಯಮದಂತೆಯೇ ನಗರಪಾಲಿಕೆ ಜಾಹೀರಾತು ಪಡೆದುಕೊಳ್ಳಲು ಅನುಮತಿ ನೀಡುವ ಮೂಲಕ ಪಾಲಿಕೆಗೆ ಬರುವ 25 ಕೋಟಿ ರೂ. ಆದಾಯದ ಕುರಿತು ನಿರ್ಧಾರ ಕೈಗೊಳ್ಳಬೇಕು ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತು.

ಸದಸ್ಯರಿಂದ ಸಲಹೆ: ಒಂದೂವರೆ ವರ್ಷದ ಹಿಂದೆ ಜಾಹೀರಾತು ಸ್ವೀಕರಿಸಲು ಹೊಸ ಬೈಲಾ ಒಂದನ್ನು ಸಿದ್ಧಪಡಿಸಿ ಸರ್ಕಾರದ ಅನುಮತಿಗೆ ಕಳುಹಿಸಿಕೊಡಲಾಗಿದೆ. ಆದರೆ, ಇದುವರೆಗೂ ಅನುಮತಿ ಸಿಗದ ಹಿನ್ನೆಲೆಯಲ್ಲಿ ಜಾಹೀರಾತನ್ನೇ ಸ್ವೀಕರಿಸಲು ಆಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಬೈಲಾ ಅನುಗುಣವಾಗಿ ಜಾಹೀರಾತು ಸ್ವೀಕರಿಸಿದರೆ ವಾರ್ಷಿಕ ನಗರಪಾಲಿಕೆ ಸಾಕಷ್ಟು ಕೋಟಿ ಹಣ ಸಂದಾಯವಾಗಲಿದೆ ಸದಸ್ಯರು ಸಲಹೆ ನೀಡಿದರು.

ಪಕ್ಕಾ ಮನೆ ನಿರ್ಮಿಸಿ: ಕಂದಾಯ ಬಡಾವಣೆಗಳಲ್ಲಿ ಬಡವರಿಗೆ ಪಕ್ಕಾ ಮನೆಯನ್ನು ಪಾಲಿಕೆ ವತಿಯಿಂದ ನಿರ್ಮಿಸಿಕೊಡಬೇಕು. ಈ ಬಗ್ಗೆ ಸಭೆಯಲ್ಲಿ ನಿರ್ಣಯ ಕೈಗೊಳ್ಳುವಂತೆ ಸದಸ್ಯರೊಬ್ಬರು ಆಗ್ರಹಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಮೇಯರ್‌ ಪುಷ್ಪಲತಾ, ಕಂದಾಯ ಭೂಮಿಗಳಲ್ಲಿ ಪಕ್ಕಾ ಮನೆಗಳನ್ನು ಹೇಗೆ, ಯಾವ ರೀತಿ ಕಟ್ಟಬಹುದು ಹಾಗೂ ಸರ್ಕಾರದ ನಿರ್ದೇಶನ ಏನಿದೆ ಎಂಬುದನ್ನು ನೋಡಿ, ಒಂದು ಸಮಿತಿ ರಚಿಸಲಾಗುವುದು ಎಂದು ತಿಳಿಸಿದರು.

ಪಾಲಿಕೆ ಆಯುಕ್ತೆ ಶಿಲ್ಪಾನಾಗ್‌ ಪ್ರತಿಕ್ರಿಯಿಸಿ, ಸರ್ಕಾರದ ನಿರ್ದೇಶನ ಪ್ರಕಾರವೇ ಪಕ್ಕಾ ಮನೆ ನಿರ್ಮಾಣ ಯೋಜನೆಯನ್ನು ಅನುಷ್ಠಾನ ಮಾಡಲಾಗುವುದು ಎಂದು ತಿಳಿಸಿದರು. ನಗರಪಾಲಿಕೆ ವತಿಯಿಂದ ಬಿಪಿಎಲ್‌ ಕಾರ್ಡುದಾರರಿಗೆ ನೀಡುವ ವೈದ್ಯಕೀಯ ಪ್ರೋತ್ಸಾಹ ಧನಕ್ಕೆ ಜಾತಿ ದೃಢೀಕರಣವನ್ನು ಅಧಿಕಾರಿಗಳು ಕೇಳುತ್ತಿದ್ದಾರೆ. ಈ ಬಗ್ಗೆ ಅಧಿಕಾರಿಗಳಿಗೆ ಜಾತಿ ದೃಢೀಕರಣ ಕೇಳದಂತೆ ಸಭೆಯಲ್ಲಿ ನಿರ್ಣಯ ಮಾಡುವಂತೆ ಮನವಿ ಮಾಡಿದರು.

ತುಂಡು ಭೂಮಿ ಮಾರಾಟ ಮಾಡಿ: ಪಾಲಿಕೆ ವ್ಯಾಪ್ತಿಯಲ್ಲಿ ಸಾಕಷ್ಟು ತುಂಡು ಭೂಮಿಗಳಿವೆ. ಆ ತುಂಡು ಭೂಮಿಯನ್ನು ಅಕ್ಕಪಕ್ಕದ ಮನೆಯವರಿಗೆ, ಈಗಿರುವ ದರದಲ್ಲಿ ಮಾರಾಟ ಮಾಡಿದರೆ ಪಾಲಿಕೆ ಆದಾಯ ವೃದ್ಧಿಸಲಿದೆ ಎಂದು ಸದಸ್ಯರೊಬ್ಬರು ಸಲಹೆ ನೀಡಿದರು. ಸಭೆಯಲ್ಲಿ ಉಪಮೇಯರ್‌ ಶಫಿ ಆಹಮದ್‌ ಸೇರಿದಂತೆ ಸದಸ್ಯರು ಇದ್ದರು.

ಎಲ್‌ಇಡಿ ನಗರ ಕುರಿತು ಚರ್ಚೆ: ಮೈಸೂರನ್ನು ಎಲ್‌ಇಡಿ ನಗರವನ್ನಾಗಿಸಲು ಸರ್ಕಾರ ಸರ್ವೆ ನಡೆಸಿ ಅಂದಾಜು 24960 ಬಲ್ಬ್ಗಳ ಬದಲಾವಣೆಗೆ ಹಣ ಬಿಡುಗಡೆಗೊಳಿಸಿದ್ದು, ಈ ಸಂಬಂಧ ಸಭೆ ಅನುಮತಿ ಮೇರೆಗೆ ಟೆಂಡರ್‌ ಕರೆಯಲಾಗುವುದು ಎಂದು ಆಯುಕ್ತೆ ಶಿಲ್ಪಾನಾಗ್‌ ಹೇಳಿದರು.

ಪಾಲಿಕೆ ಸದಸ್ಯ ಆರೀಫ್ ಹುಸೇನ್‌ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿ ನಗರದಲ್ಲಿ ಅಂದಾಜಿಸಿರುವ ಬಲ್ಬ್ಗಳ ಪಟ್ಟಿಯಲ್ಲಿ ವ್ಯತ್ಯಾಸವಿವೆ. ಈ ಸಂಬಂಧ ಮರು ಪರಿಶೀಲನೆಗೆ ಮನವಿ ಸಲ್ಲಿಸುವಂತೆ ಆಗ್ರಹಿಸಿದರು. ಇದಕ್ಕೆ ದನಿಗೂಡಿಸಿದ ರಾಮಪ್ರಸಾದ್‌, ಶಿವಕುಮಾರ್‌, ಸರ್ಕಾರ ಸಂಪೂರ್ಣವಾಗಿ ಎಲ್‌ಇಡಿ ಬಲ್ಬ್ ಅಳವಡಿಸುವುದು ಯಾವಾಗ ಎಂದು ಪ್ರಶ್ನಿಸಿದರು.

ಅಲ್ಲದೆ ಬಲ್ಬ್ ನೆಪದಲ್ಲಿ ದಸರಾ ವೇಳೆಗೆ ನಗರವನ್ನು ಕತ್ತಲು ಗೊಳಿಸುವ ಬದಲಿಗೆ ದಸರೆಗೂ ಮುನ್ನವೇ ಕಾರ್ಯಗತಗೊಳಿಸುವಂತೆ ಸಭೆ ಮೂಲಕ ಆಗ್ರಹಿಸಿದರು. ಸಭೆ ಮೂಲಕ ಮತ್ತೂಮ್ಮೆ ಸರ್ವೆ ನಡೆಸಿ ಮತ್ತಷ್ಟು ಬಲ್ಬ್ಗಳನ್ನು ಅಳವಡಿಸುವಂತೆ ಮನವಿ ಸಲ್ಲಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ ಬದಲಾವಣೆಗೆ ಟೆಂಡರ್‌ ಪ್ರಕ್ರಿಯೆಯನ್ನು ದಸರೆ ಒಳಗೆ ಮುಗಿಸಲು ಕ್ರಮ ವಹಿಸುವ ಭರವಸೆಯನ್ನು ಆಯುಕ್ತರು ನೀಡಿದರು.

ಟಾಪ್ ನ್ಯೂಸ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.