ಸ್ಮಶಾನಗಳ ಅಭಿವೃದ್ಧಿ ಆಂದೋಲನಕ್ಕೆ ಚಾಲನೆ


Team Udayavani, Dec 12, 2019, 3:00 AM IST

smashanagala

ಮೈಸೂರು: ಮೈಸೂರು ತಾಲೂಕು ಪಂಚಾಯಿತಿ ವ್ಯಾಪ್ತಿಯಲ್ಲಿ ಒತ್ತುವರಿಯಾಗಿರುವ ಮತ್ತು ಜಮೀನು ಮಂಜೂರಾದರೂ ಅಭಿವೃದ್ಧಿಗೊಳ್ಳದ ಸ್ಮಶಾನಗಳ ಅಭಿವೃದ್ಧಿ ಮತ್ತು ಹದ್ದುಬಸ್ತುನಲ್ಲಿಡುವ ಆಂದೋಲನಕ್ಕೆ ಶಾಸಕ ಜಿ.ಟಿ ದೇವೇಗೌಡ ಚಾಲನೆ ನೀಡಿದರು.

ಬುಧವಾರ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಜಯಪುರ ಗ್ರಾಮದ ಸರ್ವೇ ನಂ 23 ಮತ್ತು 10ರಲ್ಲಿ 0.20 ಗುಂಟೆ ಸ್ಮಶಾನಕ್ಕೆ ಮಂಜುರಾಗಿದ್ದ ಜಮೀನನ್ನು ಅಭಿವೃದ್ಧಿಪಡಿಸುವ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ, ತಾಲೂಕಿನ 30 ಗ್ರಾಮಗಳಲ್ಲಿ ಸ್ಮಶಾನಗಳ ಅಭಿವೃದ್ಧಿಗೆ ಇಂದಿನಿಂದ(ಬುಧವಾರ) ಆಂದೋಲನ ಆರಂಭಗೊಳ್ಳಲಿದ್ದು, ವರುಣಾ ಕ್ಷೇತ್ರದಲ್ಲಿ ಶಾಸಕ ಡಾ.ಯತೀಂದ್ರ ಅವರು ಚಾಲನೆ ನೀಡಲಿದ್ದು, ತಾಪಂ ಕಾರ್ಯನಿರ್ವಹಣಾಧಿಕಾರಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಲೆಕ್ಕಿಗರು ಹಾಗೂ ಭೂಮಾಪಕರು ಉಪಸ್ಥಿತರಿರುವರು ಎಂದರು.

ಎಲ್ಲೆಲ್ಲಿ ಕಾಮಗಾರಿ?: ಚಾಮುಂಡೇಶ್ವರಿ ಕ್ಷೇತ್ರದ ಕಳಸ್ತವಾಡಿ, ಶ್ಯಾದನಹಳ್ಳಿ, ಲಿಂಗದೇವರಕೊಪ್ಪಲು, ಉದೂºರು, ಕಲ್ಲಹಳ್ಳಿ, ಕೆಲ್ಲಹಳ್ಳಿ, ಕಡಕೊಳ, ಜಯಪುರ, ಲಕ್ಷ್ಮೀಪುರ, ರಮ್ಮನಹಳ್ಳಿ, ಕೂರ್ಗಳ್ಳಿ, ಮೇಗಳಾಪುರ, ಮದ್ದೂರು, ಮಾರ್ಬಳ್ಳಿ ಹುಂಡಿ ಗ್ರಾಮಗಳಲ್ಲಿ ಏಕಕಾಲದಲ್ಲಿ ಅಭಿವೃದ್ಧಿ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ತ್ಯಾಜ್ಯ ನಿರ್ವಹಣಾ ಘಟಕ: ಗ್ರಾಮೀಣ ಯೋಜನೆಯಡಿ 11 ಗ್ರಾಮ ಪಂಚಾಯಿತಿಗಳಲ್ಲಿ ಘನತ್ಯಾಜ್ಯ ನಿರ್ವಹಣೆ ಘಟಕ ಪ್ರಾರಂಭಿಸಲು ಪ್ರತಿ ಗ್ರಾಮ ಪಂಚಾಯಿತಿಗೆ 20 ಲಕ್ಷ ರೂ.ಗಳಂತೆ 2.20 ಕೋಟಿ ಅನುದಾನ ಮಂಜೂರು ಮಾಡಲಾಗಿದೆ. ಮೊದಲ ಹಂತದಲ್ಲಿ ರಮ್ಮನಹಳ್ಳಿ, ಗುಂಗ್ರಾಲ್‌ ಛತ್ರ, ಹೊಸಹುಂಡಿ, ಧನಗಳ್ಳಿ, ಜಯಪುರ, ಕಡಕೊಳ, ಮಾರ್ಬಳ್ಳಿ, ಕೂರ್ಗಳ್ಳಿ, ಇಲವಾಲ, ದೊಡ್ಡ ಮಾರಗೌಡನಹಳ್ಳಿ ಗ್ರಾಮ ಪಂಚಾಯಿತಿಗಳಲ್ಲಿ ಘನ ತ್ಯಾಜ್ಯ ನಿರ್ವಹಣೆ ಘಟಕ ಮಂಜೂರಾಗಿದೆ ಎಂದರು.

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಅಭಿವೃದ್ಧಿ ಪಡಿಸಲು ಇರುವಷ್ಟು ಕಾಮಗಾರಿ ಬೇರೆ ಯಾವ ಕ್ಷೇತ್ರದಲ್ಲೂ ಕಾಣಲಾಗುವುದಿಲ್ಲ. ಹಾಗಾಗಿ ಲಿಂಗಾಂಬುಧಿ ಕೆರೆ ಸೇರಿದಂತೆ ಕಾವೇರಿ, ಕಬಿನಿಯಿಂದ ನೀರು ತುಂಬಿಸಲು ಕ್ರಮ ಕೈಗೊಳ್ಳಲು ಚಿಂತಿಸಲಾಗುವುದು ತಿಳಿಸಿದರು. ಟಿ.ಕಾಟೂರು, ಗುಂಗ್ರಾಲ್‌ಛತ್ರ, ಮತ್ತು ಇಲವಾಲ ಗ್ರಾಮಗಳಲ್ಲಿ ತಲಾ 40 ಲಕ್ಷ ರೂ. ವೆಚ್ಚದಲ್ಲಿ ಹೊಸ ಟಿ.ಸಿಗಳನ್ನು ಅಳವಡಿಸಿ,ಹಳೇ ಕಂಬಗಳು ಹಾಗೂ ಹಳೆ ವಿದ್ಯುತ್‌ ತಂತಿಗಳ ಬದಲಾಯಿಸಿ ಹೊಸದಾಗಿ ವಿದ್ಯುತ್‌ ಸಂಪರ್ಕವನ್ನು ಕಲ್ಪಿಸಲಾಗಿದೆ ಎಂದು ಮಾಹಿತಿ ನೀಡಿದರು.

ತಾಪಂ ಇ.ಓ.ಕೃಷ್ಣ ಕುಮಾರ್‌, ತಾಪಂ ಸದಸ್ಯೆ ರಜಿನಿ, ಗ್ರಾಪಂ ಅಧ್ಯಕ್ಷ ಬಸವಣ್ಣ, ಭೂ ದಾಖಲೆಗಳ ಇಲಾಖೆ ಉಪ ನಿರ್ದೇಶಕಿ ರಮ್ಯ, ಭೂ ದಾಖಲೆಗಳ ಸಹಾಯಕ ನಿರ್ದೇಶಕ ಚಿಕ್ಕಣ್ಣ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಅಂಗನವಾಡಿ, ಶಾಲಾ ಕಾಲೇಜುಗಳಿಗೆ ಸೌಲಭ್ಯ: ಸಾರ್ವಜನಿಕರು ಲಕ್ಷ ಲಕ್ಷ ಹಣ ಖರ್ಚು ಮಾಡಿ ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸುತ್ತಾರೆ. ಇದಕ್ಕೆ ಮುಖ್ಯ ಕಾರಣ ಸರ್ಕಾರಿ ಶಾಲೆಗಳಲ್ಲಿ ಮುಲಭೂತ ಸೌಲಭ್ಯಗಳಿಲ್ಲದಿರುವುದು. ಪ್ರಾಥಮಿಕ ಹಂತದಲ್ಲಿ ಸರ್ಕಾರಿ ಶಾಲಾ – ಕಾಲೇಜುಗಳಿಗೆ ಅವಶ್ಯಕವಾದ ಗ್ರಂಥಾಲಯ, ಪೀಠೊಪಕರಣ, ಶೌಚಾಲಯ ವ್ಯವಸ್ಥೆಯನ್ನು ಕಲ್ಪಿಸಲಾಗುವುದು.

ತಾಲೂಕಿನ ಎಲ್ಲಾ ಶಾಲಾ -ಕಾಲೇಜುಗಳಲ್ಲಿ ಸುಮಾರು 7800 ಮೀಟರ್‌ನಷ್ಟು ಉದ್ದದ ಕಾಂಪೌಂಡ್‌ ನಿರ್ಮಾಣ ಮಾಡಲಾಗುವುದು ಎಂದು ಜಿ.ಟಿ.ದೇವೇಗೌಡ ಹೇಳಿದರು. ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಅವಶ್ಯವಿರುವ ಸಮವಸ್ತ್ರ, ಕಲಿಕಾ ಸಾಮಗ್ರಿಗಳು ಹಾಗೂ ಎಲ್ಲಾ ಮೂಲ ಸೌಲಭ್ಯಗಳನ್ನೊಳಗೊಂಡ ಉತ್ತಮ ದರ್ಜೆಯ ಮಾದರಿ ಅಂಗನವಾಡಿಗಳ ಮಾರ್ಪಡಿಸಲು ಯೋಜನೆ ರೂಪಿಸಿದ್ದು, ಈಗಾಗಲೇ ಮಾವಿನಹಳ್ಳಿ, ಗುಂಗ್ರಾಲ್‌ ಛತ್ರ, ಬೆಳವಾಡಿ ಗ್ರಾಮಗಳಲ್ಲಿ ಕಾಮಗಾರಿ ಪ್ರಾರಂಭವಾಗಿದೆ ಎಂದರು.

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.