ಎಪ್ರಿಲ್ ಫೂಲ್ ಎಂದು ನೆರವಿಗೆ ಬಾರದ ಗ್ರಾಮಸ್ಥರು: ವಿಷ ಸೇವಿಸಿದ್ದ ಬಾಲಕಿ ಸಾವು
Team Udayavani, Apr 1, 2021, 11:02 PM IST
ಸಾಂದರ್ಭಿಕ ಚಿತ್ರ
ಎಚ್.ಡಿ.ಕೋಟೆ: ಬಾಲಕಿಯೊಬ್ಬಳು ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಸಾವು ಬದುಕಿನೊಡನೆ ಸೆಣಸಾಡುತ್ತಿದ್ದರೂ ಎಪ್ರಿಲ್ ಫೂಲ್ ಎಂದು ಭಾವಿಸಿ ಸಕಾಲದಲ್ಲಿ ಗ್ರಾಮಸ್ಥರು ಸಹಾಯಕ್ಕೆ ಬಾರದ ಕಾರಣ ಆಕೆ ಮೃತಪಟ್ಟ ಘಟನೆ ತಾಲೂಕಿನ ಹೊಸಳ್ಳಿಯಲ್ಲಿ ನಡೆದಿದೆ.
ಎಚ್.ಡಿ. ಕೋಟೆ ತಾಲೂಕಿನ ಎನ್. ಬೇಗೂರು ಹೊಸಳ್ಳಿ ಗ್ರಾಮದ ನಾಗರಾಜು ಎಂಬವರ ಪುತ್ರಿ ಜ್ಯೋತಿ (17) ಸಹೋದರ ಬೈದಿದ್ದಾನೆ ಎಂಬ ಕಾರಣಕ್ಕಾಗಿ ಕ್ರಿಮಿನಾಶಕ ಸೇವಿಸಿದ್ದಳು. ಆಕೆ ಅಸ್ವಸ್ಥಳಾಗುತ್ತಿದ್ದಂತೆ ಮನೆಯವರು ಗ್ರಾಮಸ್ಥರಲ್ಲಿ ಸಹಾಯ ಯಾಚಿಸಿದ್ದರು. ಎಪ್ರಿಲ್ ಫೂಲ್ ಮಾಡುತ್ತಿರಬೇಕು ಎಂದು ಭಾವಿಸಿ ಯಾರೂ ಬಂದಿರಲಿಲ್ಲ. ಕೊನೆಗೆ ಮನೆಯವರೇ ಕಷ್ಟಪಟ್ಟು ಎಚ್.ಡಿ.ಕೋಟೆಯ ಸಾರ್ವಜನಿಕ ಆಸ್ಪತ್ರೆಗೆ ಕೊಂಡೊಯ್ಯುತ್ತಿದ್ದಾಗ ಆಕೆ ದಾರಿ ಮಧ್ಯೆ ಕೊನೆಯುಸಿರೆಳೆದಳು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್