ಹುಲಿ ದಾಳಿ: ವ್ಯಕ್ತಿ ಸಾವು
Team Udayavani, Sep 8, 2021, 9:52 PM IST
ಹುಣಸೂರು:ಕಾಡಿನಲ್ಲಿ ಬಹಿರ್ದೆಸೆಗೆ ತೆರಳಿದ್ದ ಸಂದರ್ಭದಲ್ಲಿ ಹುಲಿಯೊಂದು ದಾಳಿ ನಡೆಸಿ ವ್ಯಕ್ತಿಯೊಬನನ್ನು ಕೊಂದಿರುವ ಘಟನೆ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಹುಣಸೂರು ಅರಣ್ಯ ವಲಯದಲ್ಲಿ ನಡೆದಿದೆ
ಹುಣಸೂರು ತಾಲ್ಲೂಕಿನ ಅಯ್ಯನಕೆರೆ ಹಾಡಿಯ ಗಣೇಶ್(24) ಹುಲಿದಾಳಿಗೆ ಸಿಲುಕಿದ ಮೃತ ದುರ್ದೈವಿ. ಈತ ಅದೇ ಹಾಡಿಯ ಕರಿಯ ಮತ್ತು ಲಕ್ಷ್ಮಿ ದಂಪತಿಗಳ ಒಂಬತ್ತು ಜನ ಮಕ್ಕಳ ಪೈಕಿ ಕಿರಿಯ ಪುತ್ರ. ಈತ ಬುಧವಾರ ಮುಂಜಾನೆ ಅರಣ್ಯದಂಚಿಗೆ ಬಹಿರ್ದೆಸೆಗೆ ಹೋದಂತ ಸಂದರ್ಭದಲ್ಲಿ ಹುಲಿ ದಾಳಿ ನಡೆಸಿ ಆತನನ್ನು ಬಲಿ ಪಡೆದಿದೆ ಎನ್ನಲಾಗಿದೆ. ಎಂದಿನಂತೆ ಆತ ಇಂದು ಬೆಳಗ್ಗೆ ಸುಮಾರು 8 ಗಂಟೆ ಸಮಯದಲ್ಲಿ ಬಹಿರ್ದೆಶೆಗೆ ತೆರಳಿದ್ದು, ಮಧ್ಯಹ್ನ 12 ಗಂಟೆಯಾದರೂ ಹಿಂದಿರುಗದ ಕಾರಣ ಗಾಬರಿಗೊಂಡ ಆತನ ಕುಟುಂಬಸ್ಥರು ಆತನನ್ನು ಹುಡುಕಿ ಅರಣ್ಯಕ್ಕೆ ತೆರಳಿದ್ದಾರೆ. ಈ ವೇಳೆ ಆತ ಬಹಿರ್ದೆಸೆಗೆ ತೆರಳಿದ್ದ ಸ್ಥಳದಿಂದ ಸುಮಾರು 200ಮೀ ದೂರದಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.
ವಿಚಾರ ತಿಳಿದ ಕೂಡಲೇ ಸ್ಥಳಕ್ಕೆ ತರಳಿದ ಹಾಡಿಯ ಜನರು ಹತ್ತಿರ ಹೋಗಿ ನೋಡಿ ಬಳಿಕ ಇದು ಹುಲಿ ದಾಳಿ ಮಾಡಿ ಕೊಂದಿರುವುದು ಎಂದು ಖಚಿತಪಡಿಸಿಕೊಂಡು. ತಕ್ಷಣ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಆಧರಿಸಿ ಸ್ಥಳಕ್ಕೆ ಬಂದ ಹುಣಸೂರು ಎಸಿಎಫ್ ಸತೀಶ್, ಆರ್ಎಫ್ಓ ಹನುಮಂತಪ್ಪ ಮತ್ತು ಸಿಬ್ಬಂದಿವರ್ಗ ಪರಿಶೀಲನೆ ನಡೆಸಿ ಬಳಿಕ ಮೇಲಾಧಿಕಾರಿಗಳ ಗಮನಕ್ಕೆ ತಂದು ಮುಂದಿನ ಕ್ರಮ ತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ.
ಸ್ಥಳೀಯ ಹಾಡಿಗಳಲ್ಲಿ ಈಗಾಗಲೇ ಎರಡು ಪ್ರಾಣಗಳನ್ನು ಹುಲಿ ಬಲಿ ತೆಗೆದುಕೊಂಡಿದೆ. ಈ ಕುರಿತು ಕೂಡಲೇ ಅರಣ್ಯ ಇಲಾಖೆ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕು ಜೆ.ಟಿ.ರಾಜಪ್ಪ ಒತ್ತಾಯಿಸಿದ್ದಾರೆ. ಅಲ್ಲದೇ ಮೃತ ಗಣೇಶನು ಸಹ ಇತ್ತೀಚೆಗಷ್ಟೇ ಮದುವೆಯಾಗಿದ್ದು, ಆತನ ಕುಟುಂಬಕ್ಕೆ ಸೂಕ್ತ ಪರಿಹಾರವನ್ನು ವದಗಿಸಬೇಕು ಹಾಗೂ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಬರುವವರೆಗೂ ಮೃತನ ದೇಹ ತರೆವು ಮಾಡಲು ಅವಕಾಶ ಕೊಡುವುದಿಲ್ಲ ಎಂದು ಹಾಡಿಯ ಗ್ರಾಮಸ್ಥರು ಆಗ್ರಹಿಸಿದರು.
ಇದನ್ನೂ ಓದಿ:ಇ.ಡಿ.ನಿರ್ದೇಶಕರ ಸೇವೆ ವಿಸ್ತರಣೆ : ಅರ್ಜಿ ತಿರಸ್ಕರಿಸಿದ ಸುಪ್ರೀಂ
ಅಲ್ಲದೆ ಹುಲಿಯ ದಾಳಿಯಿಂದಾಗಿ ಹಾಡಿಯ ಜನರು ಭಯಭೀತರಾಗಿದ್ದು ಹುಲಿಯನ್ನು ಹಿಡಿಯಲು ಅರಣ್ಯ ಇಲಾಖೆ ಕಾರ್ಯಪ್ರವೃತ್ತರಾಗಬೇಕು ಎಂದು ಒತ್ತಾಯಿಸಿದರು. ಮೃತ ಗಣೇಶನನ್ನು ಕಳೆದುಕೊಂಡ ಆತನ ಹೆಂಡತಿ ಮತ್ತು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸದ್ಯ ಈ ಪ್ರಕರಣ ಹುಣಸೂರು ಪೋಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಕಳೆದ ಮೇ ತಿಂಗಳಲ್ಲಿ ಇದೇ ವಲಯದಲ್ಲಿ ನೇರಳಕುಪ್ಪೆ ಬಿ.ಹಾಡಿಯ ದನಗಾಯಿ ಜಗದೀಶ್ ಎಂಬುವವರು ಹುಲಿದಾಳಿಗೆ ಸಿಲುಕಿ ಸಾವನ್ನಪ್ಪಿದ್ದ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ