ಹೆಚ್ಚಿದ ಮಳೆ: ಕಬಿನಿ ಜಲಾಶಯದ ನೀರಿನ ಮಟ್ಟ ಏರಿಕೆ


Team Udayavani, Aug 29, 2017, 12:13 PM IST

mys4.jpg

ಎಚ್‌.ಡಿ.ಕೋಟೆ: ರಾಜ್ಯದ ಜೀವನಾಡಿಗಳಲ್ಲೊಂದಾದ ತಾಲೂಕಿನ ಬೀಚನಹಳ್ಳಿ ಗ್ರಾಮದಲ್ಲಿರುವ ಕಬಿನಿ ಜಲಾಶಯದ ಒಳ ಹರಿವಿನ ಪ್ರಮಾಣ 7200 ಕ್ಯೂಸೆಕ್‌ನಷ್ಟು ಹೆಚ್ಚಿದ್ದು, ಜಲಾಶಯದ ಮಟ್ಟ 2271.227 ಅಡಿಗೆ ಏರಿಕೆ ಕಂಡಿದೆ.

ಕೇರಳದ ವೈನಾಡು ಪ್ರದೇಶ ಸೇರಿದಂತೆ ತಾಲೂಕು ಮತ್ತು ಕಬಿನಿ ಹಿನ್ನಿರು ಪ್ರದೇಶದಲ್ಲಿ ಕಳೆದ 3-4 ದಿನಗಳಿಂದ ಹೆಚ್ಚಿನ ಮಳೆಯಾಗುತ್ತಿದ್ದು, ಜಲಾಶಯಕ್ಕೆ ಹರಿದು ಬರುತ್ತಿರುವ ಒಳ ಹರಿವಿನ ಪ್ರಮಾಣ ಹೆಚ್ಚುತ್ತಿದೆ. ಕಳೆದ ಶುಕ್ರವಾರ 3 ರಿಂದ 4 ಸಾವಿರ ಕ್ಯೂಸೆಕ್‌ ಇದ್ದ ಒಳ ಹರಿವು, ಶನಿವಾರ 3.85 ಕ್ಯೂಸೆಕ್‌ ತನಕ ಏರಿತ್ತು. ದಿನಲೂ ಉತ್ತಮ ಮಳೆಯಾದ ಪರಿಣಾಮ ಭಾನುವಾರ ಅದು 7200 ಕ್ಯೂಸೆಕ್‌ ಏರಿಕೆ ಕಂಡಿದೆ.

ಜಲಾಶಯದ ಗರಿಷ್ಠ ಮಟ್ಟ 2284 ಅಡಿ ಆಗಿದ್ದು, ಜಲಾಶಯದಲ್ಲಿ ಸದ್ಯಕ್ಕೆ 12.0 ಟಿಎಂಸಿ ನೀರು ಸಂಗ್ರಹವಾಗಿದೆ. ಕಳೆದ ವರ್ಷ ಇದೆ ದಿನಕ್ಕೆ ಜಲಾಶಯದಲ್ಲಿ 2276 ಅಡಿಗಳಷ್ಟು ನೀರು ಸಂಗ್ರಹಣವಾಗಿತ್ತು. ಆಗ ಜಲಾಶಯಕ್ಕೆ 3 ಸಾವಿರ ಕ್ಯೂಸೆಕ್‌ ನೀರು ಮಾತ್ರ ಹರಿದು ಬರುತ್ತಿತ್ತು.

ಜಲಾಶಯದಿಂದ ಈಗ ಮುಂಭಾಗದ ನದಿಗೆ ಪಕ್ಕದ ಸುಭಾಷ್‌ ವಿದ್ಯುತ್‌ ಘಟಕದ ಮೂಲಕ 2 ಸಾವಿರ ಕ್ಯೂಸೆಕ್‌ ನೀರು, ಜಲಾಶಯದ ಬಲದಂಡೆ ಮತ್ತು ಎಡದಂಡೆ ನಾಲೆ ಸೇರಿ 1850 ಕ್ಯೂಸೆಕ್‌ ನೀರನ್ನು ಹೊರ ಬಿಡಲಾಗುತ್ತಿದೆ ಜಲಾಶಯದ ಅಧಿಕಾರಿಗಳು “ಉದಯವಾಣಿ’ಗೆ ತಿಳಿಸಿದ್ದಾರೆ.

ಜಲಾಶಯದ ಇತಿಹಾಸದಲ್ಲೇ ಅತ್ಯಂತ ಕನಿಷ್ಟ ಮಟ್ಟಕ್ಕೆ ಇಳಿಮುಖ ಕಂಡಿತ್ತು. ಹೀಗಾಗಿ ಜಲಾಶಯದ ಅಭಿವೃದ್ಧಿಗೆ ನಬಾರ್ಡ್‌ ಬ್ಯಾಂಕ್‌ನಿಂದ ಬಿಡುಗಡೆಯಾಗಿದ್ದ ಸುಮಾರು 12 ಕೋಟಿ ಅನುದಾನದಲ್ಲಿ ನೀರನ್ನುಹೊರ ಬಿಟ್ಟು ಕ್ರಸ್ಟ್‌ ಗೇಟ್‌, ಗೋಡೆಗಳ ಸೋರಿಕೆ, ನೀರಿನ ರಭಸ ತಡೆಯಲು ಮುಂಭಾಗ ಇರುವ ದಿಮ್ಮಿಗಳ ದುರಸ್ತಿ ಕಾರ್ಯ ನಡೆಸಿದ್ದರು. 

ಬತ್ತಿದ ಕೆರೆ ಕಟ್ಟೆ ಬೋರಲ್ಲೂ ನೀರು ಇಲ್ಲ: ಕಳೆದ 3 ವರ್ಷಗಳಲ್ಲಿ ಆವರಿಸಿದ್ದ ಬರದ ಛಾಯೆಯಿಂದ ಮೊದಲೇ ಬೆಳೆ ನಷ್ಟ ಕಂಡಿದ್ದ ರೈತರು ಈ ಬಾರಿಯೂ ಮುಂಗಾರು ಮಳೆ ಕೈಕೊಟ್ಟು, ಹಿಂಗಾರು ಮಳೆ ಪ್ರಾರಂಭ ಆಗದೆ ಸಂಕಷ್ಟಕ್ಕೀಡಾಗಿದ್ದರು. 

ಉತ್ತಮ ಮಳೆ, ಮತ್ತೇ ಚಿಗುರಿದ ಕನಸು: ಜಲಾಶಯಕ್ಕೆ 7 ಸಾವಿರ ಕ್ಯೂಸೆಕ್‌ಗೂ ಹೆಚ್ಚಿನ ನೀರು ಹರಿದು ಬರುತ್ತಿದೆ. ಇನ್ನೂ ಸೋಮವಾರ ಕೂಡ ಮಳೆ ಹೆಚ್ಚಿದ್ದು ಜಲಾಶಯದ ಒಳ ಹರಿವು ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ ಜಲಾಶಯ ಶೀಘ್ರ ಭರ್ತಿಗೊಳ್ಳುವ ಸಾಧ್ಯತೆ ತಳ್ಳಿ ಹಾಕುವಂತಿಲ್ಲ.

ಈ ಹಿಂದೆ ಜಲಾಶಯದ ನೀರಿನ ಮಟ್ಟ ಕುಸಿದಿತ್ತು 
ನೆರೆ ರಾಜ್ಯ ಕೇರಳದ ವೈನಾಡು ಪ್ರದೇಶದಲ್ಲಿ ಕಳೆದ ತಿಂಗಳು ಹಾಗೂ ಅದಕ್ಕೂ ಮುನ್ನ ಪೂರ್ವ ಮುಂಗಾರು ವೇಳೆ ಕೆಲ ದಿನಗಳು ಮಳೆ ಅಬ್ಬರಿಸಿದ ಪರಿಣಾಮ ಜಲಾಶಯಕ್ಕೆ ಸುಮಾರು 17 ಸಾವಿರ ಕ್ಯೂಸೆಕ್‌ ನಷ್ಟು ನೀರು ಹರಿದು ಬಂದ ಪರಿಣಾಮ ಜಲಾಶಯದಲ್ಲಿ 74 ಅಡಿಗಳಷ್ಟು ನೀರು ಸಂಗ್ರಹಣಗೊಂಡಿತ್ತು.

ಆದರೆ, ಜಲಾಶಯ ಇನ್ನೇನು ತುಂಬಿ ಬಾಗಿನಕ್ಕೆ ಭಾಜನವಾಗಬಹುದು ಎಂದು ತಾಲೂಕಿನ ಜನರು ಕನಸು ಕಂಡಿದ್ದರೂ ಅಷ್ಟರಲ್ಲೇ ಸರ್ಕಾರ ಸಂಕಷ್ಟ ಸೂತ್ರ ನೆಪವೊಡ್ಡಿ ದಿನಲೂ ಕಬಿನಿ ಜಲಾಶಯದಿಂದ 10 ಸಾವಿರಕ್ಕೂ ಹೆಚ್ಚು ನೀರನ್ನು ಹೊರ ಬಿಟ್ಟ ಕಾರಣ ಮತ್ತು ಇತ್ತೀಚಿಗೆ ಕೆರೆ ಕಟ್ಟೆ ತುಂಬಿಸಲು ಹಾಗೂ ಜಾನುವಾರುಗಳಿಗೆ ನೀರುಣಿಸಲು ಎಡ ಮತ್ತು ಬಲದಂಡೆ ನಾಲೆಗಳಿಗೆ ನದಿ ಸೇರಿ ದಿನಾಲೂ 4 ಸಾವಿರ ನೀರು ಹರಿಸಿದ್ದರಿಂದ ತುಂಬುವ ಹಂತದಲ್ಲಿದ್ದ ಜಲಾಶಯ 68 ಅಡಿಗೆ ಕುಸಿದಿತ್ತು.

ಕೇರಳದ ವೈನಾಡು ಹಾಗೂ ಜಲಾಶಯದ ಹಿನ್ನೀರು ವ್ಯಾಪ್ತಿಯಲ್ಲಿ ಉತ್ತಮ ಮಳೆ ಆದ ಪರಿಣಾಮ ಹೆಚ್ಚಿನ ನೀರು ಹರಿದು ಬಂದಿದೆ. ದಿನಾಲೂ ಒಳ ಹರಿವಿನ ಪ್ರಮಾಣ ಹೆಚ್ಚಾಗುತ್ತಿದ್ದು, ಇದೇ ರೀತಿ ಇನ್ನಷ್ಟು ದಿನ ಮಳೆ ಮುಂದುವರಿದರೆ ಜಲಾಶಯ ಭರ್ತಿಯಾಗುವ ಸಾಧ್ಯತೆ ಇದೆ.
-ಕೃಷ್ಣಯ್ಯ, ಎಇಇ

* ಬಿ.ನಿಂಗಣ್ಣಕೋಟೆ

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.