ಸ್ವಾತಂತ್ರ್ಯಕ್ಕಾಗಿ ಮಹನೀಯರ ತ್ಯಾಗ, ಬಲಿದಾನ
Team Udayavani, Aug 16, 2020, 1:07 PM IST
ಮೈಸೂರು: ಹಲವು ಮಹನೀಯರ ತ್ಯಾಗ, ಬಲಿದಾನದಿಂದ ನಮಗೆ ಸ್ವಾತಂತ್ರ್ಯ ಸಿಕ್ಕಿದೆ. ಅದನ್ನು ವ್ಯರ್ಥ ಮಾಡಬಾರದು ಎಂದು ಮೈವಿವಿ ಕುಲಪತಿ ಪ್ರೊ.ಜಿ. ಹೇಮಂತ್ ಕುಮಾರ್ ತಿಳಿಸಿದರು.
ಮೈವಿವಿಯ ಕ್ರಾಫರ್ಡ್ ಹಾಲ್ ಮುಂಭಾಗ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಭಾರತ ಸಂಪನ್ಮೂಲಭರಿತ ರಾಷ್ಟ್ರ. ಹೀಗಾಗಿ ಬ್ರಿಟಿಷರು, ಡಚ್ಚರು, ಫ್ರೆಂಚರು ನಮ್ಮನ್ನುಆಳಿದ್ದಾರೆ. ಆದರೆ, ಹಲವಾರು ಸ್ವಾತಂತ್ರ್ಯ ಹೋರಾಟಗಾರರ ಹೋರಾಟದ ಫಲವಾಗಿ ಇಂದು ನಮಗೆ ಸ್ವಾತಂತ್ರ್ಯ ಸಿಕ್ಕಿದೆ. ರಾಷ್ಟ್ರದ ಪ್ರಗತಿಗೆ ಹಲ ವಾರು ಮಹನೀಯರು ಕೊಡುಗೆ ನೀಡಿದ್ದಾರೆ. ಅವರೆನ್ನೆಲ್ಲಾ ಇಂದು ನೆನಪು ಮಾಡಿಕೊಳ್ಳಬೇಕಿದೆ. ಶತಮಾನ ಪೂರೈಸಿ ರುವ ಮೈಸೂರು ವಿವಿ ಉನ್ನತ ಶಿಕ್ಷಣಕ್ಕೆ ಅಪಾರ ಕೊಡುಗೆ ನೀಡಿದೆ ಎಂದರು.
ಕೌಶಲ್ಯ ರೂಢಿಸಿಕೊಳ್ಳಿ: ಕೌಶಲ್ಯಗಳನ್ನು ಯುವಶಕ್ತಿ ರೂಢಿಸಿಕೊಳ್ಳಬೇಕು. ಉದ್ಯೋಗವನ್ನು ಬೇಡುವ ಬದಲು ಅದನ್ನು ನೀಡಲು ಸಿದ್ಧರಿರಬೇಕು. ಕೋವಿಡ್ ಕಾಲಘಟ್ಟದಲ್ಲೂ ನಾವೆಲ್ಲ ಒಂದಾಗಿ ಮುಂದಡಿ ಇಡುತ್ತಿದ್ದೇವೆ. ಆತ್ಮನಿರ್ಭರ ಪ್ರಧಾನಿಯವರ ಕನಸಿನ ಕೂಸು. ಅದರಂತೆ ಭಾರತ ಸ್ವಾವಲಂಬನೆ ಕಡೆ ಹೆಜ್ಜೆ ಹಾಕಬೇಕಿದೆ. ನಮಗೆ ಸಿಕ್ಕಿರುವ ಸ್ವಾತಂತ್ರ್ಯ ಸುಲಭವಾಗಿ ಸಿಕ್ಕಿಲ್ಲ. ಇದಕ್ಕೆ ಹಲವಾರು ಜನ ತ್ಯಾಗ, ಬಲಿದಾನ ನೀಡಿದ್ದಾರೆ. ಹಾಗಾಗಿ ಅದನ್ನು ವ್ಯರ್ಥ ಮಾಡಿಕೊಳ್ಳದೆ ಮುಂದೆ ಸಾಗೋಣ ಎಂದು ಸಲಹೆ ನೀಡಿದರು. ಮೈಸೂರು ವಿವಿ ಪರೀಕ್ಷಾಂಗ ಕುಲಸಚಿವ ಪ್ರೊ.ಮಹದೇವ, ಮಹಾರಾಜ ಕಾಲೇಜಿನ ಪ್ರಾಂಶುಪಾಲರಾದ ಡಾ.ಅನಿಟ ವಿಮಲಾ ಬ್ರಾಗ್ಸ್ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ