ಬಹುತ್ವದ ಭಾರತಕ್ಕೆ ಆಕ್ರಮಕಾರಿ ಸಂಸ್ಕೃತಿ ಆವರಿಸಿಕೊಂಡಿದೆ


Team Udayavani, Dec 15, 2019, 3:00 AM IST

bahutvada

ಮೈಸೂರು: ಬಹುತ್ವದ ಭಾರತಕ್ಕೆ ಆಕ್ರಮಕಾರಿ ಸಂಸ್ಕೃತಿ ಆವರಿಸಿಕೊಂಡು ಜಾನಪದ ಸೊಗಡನ್ನು ನಾಶದತ್ತ ಕೊಂಡೊಯ್ಯುತ್ತಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಪ್ರೊ.ಎಸ್‌.ಜಿ.ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದರು.

ಭೂಮಿ ಬಳಗ ಹಾಗೂ ಎಸ್‌ಬಿಆರ್‌ಆರ್‌ ಮಹಾಜನ ಪ್ರಥಮ ದರ್ಜೆ ಕಾಲೇಜು ಸಂಯುಕ್ತಾಶ್ರಯದಲ್ಲಿ ಶನಿವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಜಾನಪದ ವಿದ್ವಾಂಸ ಡಾ.ಹಿ.ಶಿ.ರಾಮಚಂದ್ರಗೌಡ ಅವರ ಭೂಮಿ ಮತ್ತು ಬೀಜ ಕೃತಿ ಬಿಡುಗಡೆಗೊಳಿಸಿ ಮಾತನಾಡಿದರು. ಭೂಮಿ ಪ್ರಕೃತಿ-ಬೀಜ ಸಂಸ್ಕೃತಿ ಇದ್ದಂತೆ. ನಾವು ಬಿತ್ತಿದಂತೆ ಬೀಜ ಬೆಳೆಯುತ್ತದೆ. ನಿಸರ್ಗಕ್ಕೆ ಪೂರಕವಾಗುವ ರೀತಿಯಲ್ಲಿ ಕಲ್ಪಿಸಿಕೊಡುವ ಬಿತ್ತನೆಯ ಬೀಜವೇ ಸಂಸ್ಕೃತಿ ಎಂದರು.

ಲೇಖನಗಳು ನಿರ್ದಿಷ್ಟವಾದ ಕಾಲಕ್ಕೆ ಸೀಮಿತವಾಗಿಲ್ಲ: ಡಾ.ಹಿ.ಶಿ.ರಾಮಚಂದ್ರಗೌಡ ಅವರು ಜಾಗತಿಕ ವಿದ್ಯಮಾನಗಳ ನೆಲೆಯಲ್ಲಿ ತಮ್ಮ ಕೃತಿಯಲ್ಲಿ ಇಂದಿನ ಯುವ ಪೀಳಿಗೆಗೆ ಮನವರಿಕೆ ಮಾಡಿಕೊಟ್ಟಿದ್ದಾರೆ. ಒಟ್ಟು 26 ಲೇಖನಗಳನ್ನು ಒಳಗೊಂಡಿರುವ ಈ ಕೃತಿಯ ಎಲ್ಲಾ ಲೇಖನಗಳು ಜಾನಪದ ಬದುಕನ್ನು ಪರಿಭಾವಿಸಿ, ನಿಸರ್ಗಕ್ಕೆ ಹತ್ತಿರವಾಗುವಂತೆ ಇದೆ. ಇಂದು ಯುವ ಪೀಳಿಕೆಯ ಮನದಲ್ಲಿ ಆವರಿಸುತ್ತಿರುವ ಅಕ್ರಮ ಸಂಸ್ಕೃತಿಯ ಬಗ್ಗೆ ಈ ಕೃತಿಯಲ್ಲಿ ವ್ಯಾಖ್ಯಾನಿಸಿದ್ದಾರೆ. ಇಲ್ಲಿನ ಲೇಖನಗಳು ಯಾವುದೇ ನಿರ್ದಿಷ್ಟವಾದ ಕಾಲಕ್ಕೆ ಸೀಮಿತವಾಗಿಲ್ಲ. ಬದಲಿಗೆ ಎಲ್ಲ ಕಾಲಕ್ಕೂ ಅನ್ವಯವಾಗುತ್ತವೆ ಎಂದು ಹೇಳಿದರು.

ಇದೊಂದು ಮಹತ್ವದ ಕೃತಿ: ಜನಪದ ಒಂದು ಜೀವಂತ ಬದುಕು. ಜೀವ ಪರ ಸಂಸ್ಕೃತಿಯು ಈ ಪುಸ್ತಕದ ಧಾತುದ್ರವ್ಯವಾಗಿದೆ. ಜಾನಪದ ಚಿಂತನೆಗೆ ಕಾಲದ ಮಿತಿಇಲ್ಲ. ಜನಪದಕ್ಕೆ ಸಿದ್ಧ ಹಾಗೂ ಪಠ್ಯವಸ್ತುಗಳಿಲ್ಲ. ಇಲ್ಲಿ ಯಾವುದೇ ಹೇಳಿಕೆಗಳಿಲ್ಲ. ಹೇಳಿಕೆ ಎಂಬುದು ಗರ್ವದಿಂದ ಬಂದ ಅಭಿಪ್ರಾಯಗಳಾಗುತ್ತವೆ. ಆದರೆ ತಿಳುವಳಿಕೆ ಮತ್ತು ವಿಶ್ಲೇಷಣೆಗಳು ಅನ್ವೇಷಣೆಗೆ ನಾಂದಿಯಾಗುತ್ತವೆ.

ಇಲ್ಲಿನ ಲೇಖನಗಳು ಕಾಲೋಚಿತ ಪ್ರಜ್ಞೆಯನ್ನು ಬಿಂಬಿಸುತ್ತವೆ. ಇಂದಿನ ಜಾಗತಿಕರಣದ ವೇಗ ಮತ್ತು ಒತ್ತಡವನ್ನು ಮನಗಂಡು ನಿಖರವಾಗಿ ಯುವಜನತೆಗೆ ಹೇಳಬೇಕಾದ ಗುಣಗಳಾದ ಭಯ, ಆತಂಕ, ಸಂಕಟ,ನೋವು, ರೈತ ಚಳವಳಿ ಮಾರ್ಗ, ಸಂಬಂಧಾತ್ಮಕ ಮೌಲ್ಯಗಳನ್ನು ಈ ಪುಸ್ತಕದಲ್ಲಿ ನಾವು ಕಾಣಬಹುದಾಗಿದ್ದು, ಇದೊಂದು ಮಹತ್ವದ ಕೃತಿಯಾಗಿದೆ ಎಂದು ಅಭಿಪ್ರಾಯಪಟ್ಟರು.

ಅವಕಾಶಗಳು ಹೆಚ್ಚಿದೆ: ಕೃತಿಯ ಲೇಖಕ ಡಾ.ಹಿ.ಶಿ.ರಾಮಚಂದ್ರಗೌಡ ಮಾತನಾಡಿ, ಇಂದಿನ ಜಾಗತೀಕರಣ ಯುಗದಲ್ಲಿ ಸೌಲಭ್ಯಗಳು ಹಾಗೂ ಅವಕಾಶಗಳು ಹೆಚ್ಚಿದೆ. ಬಡತನ ಕಡಿಮೆಯಾಗುತ್ತಿದೆ. ಸಿಗುವ ಅನುಕೂಲಗಳನ್ನು ಸದುಪಯೋಗಪಡಿಸಿಕೊಳ್ಳಿ ಎಂದು ಕಿವಿಮಾತು ಹೇಳಿದರು.

ನೈಪುಣ್ಯತೆಯ ಜ್ಞಾನಕ್ಕೆ ಪ್ರಾಮುಖ್ಯತೆ: ಭೂಮಿ, ಸ್ತ್ರೀ ಮತ್ತು ನಮ್ಮತನವನ್ನು ಬಿಟ್ಟುಕೊಡಬೇಡಿ. ವಿದ್ಯಾರ್ಥಿಗಳು ಪಠ್ಯವನ್ನಷ್ಟೇ ಓದದೆ, ಪಠ್ಯೇತರ ಚಟುವಟಿಕೆಗಳಲ್ಲೂ ತೊಡಗಿಸಿಕೊಳ್ಳಬೇಕು. ಕೌಶಲ್ಯ ಮತ್ತು ನೈಪುಣ್ಯತೆಯ ಜ್ಞಾನಕ್ಕೆ ಪ್ರಾಮುಖ್ಯತೆ ನೀಡಿ, ಇದು ನಿಮ್ಮ ಮುಂದಿನ ಬೆಳವಣಿಗೆಗೆ ನಾಂದಿಯಾಗುತ್ತದೆ ಎಂದರು.

ಚಿಂತಕಿ ಡಾ.ಧರಣಿದೇವಿ ಮಾಲಗತ್ತಿ ಮಾತನಾಡಿ, ನಮ್ಮ ಇಂದಿನ ಯುವ ಪೀಳಿಗೆಗೆ ಐಕ್ಯತೆ ಬೇಕು. ಏಕಾಧಿಪತ್ಯ ಬೇಡ. ಬಹುತ್ವ ಬೇಕು. ಬೇದ ಬೇಡ, ಜಾತಿವಾದ ಸಲ್ಲದು ಎಂದರು. ವಾದಿ, ವಿಚಾರವಾದಿ, ಸಂಪ್ರದಾಯವಾದಿ, ಸ್ತ್ರೀವಾದಿ ಯಾರಿಗೂ ಇಷ್ಟವಾಗುವುದಿಲ್ಲ.

ಈ ನಿಟ್ಟಿನಲ್ಲಿ ಈ ಕೃತಿಯ ಲೇಖನಗಳು ಎಲ್ಲರ ಮನಸ್ಸನ್ನೂ ಗೆಲ್ಲುತ್ತವೆ ಹಾಗೂ ಸಂಶೋಧನಾ ಪ್ರಬಂಧಕ್ಕೆ ಅನುಕೂಲವಾಗಿದೆ ಎಂದು ಹೇಳಿದರು. ಕಾಲೇಜಿನ ಪ್ರಭಾರ ಪ್ರಾಂಶುಪಾಲರಾದ ಬಿ.ಆರ್‌.ಜಯಕುಮಾರಿ ಮಾತನಾಡಿದರು. ಮಹಾಜನ ಕಾಲೇಜಿನ ಸಿಇಒ ಡಾ.ಎಸ್‌.ಆರ್‌.ರಮೇಶ್‌, ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಎಚ್‌.ಆರ್‌.ತಿಮ್ಮೇಗೌಡ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.