ವಿದೇಶಿಯರಿಗಿರುವ ಸಂಸ್ಕೃತ ಭಾಷೆ ಆಸಕ್ತಿ ಸ್ವದೇಶಿಗರಲ್ಲಿ ಇಲ್ಲ


Team Udayavani, Jul 24, 2019, 3:00 AM IST

videshi

ಮೈಸೂರು: ಕನ್ನಡ ಪತ್ರಿಕೆಗಳೇ ಕಷ್ಟದ ಪರಿಸ್ಥಿತಿಯಲ್ಲಿರುವಾಗ ಸಂಸ್ಕೃತ ಪತ್ರಿಕೆಯೊಂದು 50 ವರ್ಷಗಳ ಕಾಲ ಬೆಳೆದು ಬಂದಿರುವುದು ಸಂತಸ ತಂದಿದೆ ಎಂದು ಸುಧರ್ಮಾ ಸಂಸ್ಕೃತ ದಿನಪತ್ರಿಕೆ ಸಂಪಾದಕ ಸಂಪತ್‌ಕುಮಾರ್‌ ಹೇಳಿದರು. ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ಏರ್ಪಡಿಸಿದ್ದ ಶ್ರೀ ಶಿವರಾತ್ರೀಶ್ವರ ಮಾಧ್ಯಮ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದರು.

1970ರಲ್ಲಿ ನನ್ನ ತಂದೆಯವರು ಸಂಸ್ಕೃತ ದಿನಪತ್ರಿಕೆಯನ್ನು ಆರಂಭಿಸಿ 20 ವರ್ಷಗಳ ಕಾಲ ಮುನ್ನಡೆಸಿದರು. ತಂದೆಯವರಿಗೆ ಕೊಟ್ಟ ಮಾತಿನಂತೆ ಅವರ ನಿಧನಾನಂತರ ಕಳೆದ 30 ವರ್ಷಗಳಿಂದ ಎಷ್ಟೇ ಕಷ್ಟವಾದರೂ ಪತ್ರಿಕೆ ಹೊರತರುತ್ತಿದ್ದೇನೆ ಎಂದರು.

ಸಂಸ್ಕೃತ ಕಲಿತರೆ ದೇಶದೆಲ್ಲೆಡೆ ಮಾನ್ಯತೆ ಸಿಗುತ್ತೆ. ಸಂಸ್ಕೃತವನ್ನು ಭಾರತೀಯರು ಮರೆಯುತ್ತಿದ್ದರೂ ವಿದೇಶಿಯರು ಸಂಸ್ಕೃತವನ್ನು ಪೂಜ್ಯಭಾವನೆಯಿಂದ ಕಲಿಯುತ್ತಿದ್ದಾರೆ. ನಮ್ಮಲ್ಲಿ ಅಂಕಗಳಿಕೆಗೆ ಮಾತ್ರ ಸಂಸ್ಕೃತವನ್ನು ಒಂದು ವಿಷಯವಾಗಿ ಕಲಿಯಲಾಗುತ್ತಿದೆ. ಅಂಕಗಳಿಕೆಗೆ ಮಾತ್ರ ಸಂಸ್ಕೃತವನ್ನು ಆಯ್ಕೆ ಮಾಡಿಕೊಳ್ಳುತ್ತಿರುವುದು ಬೇಸರದ ಸಂಗತಿ. ಸಂಸ್ಕೃತ ಕಲಿತ ಮೇಲೆ ಅದನ್ನು ಬೆಳೆಸುವ ಕೆಲಸ ಮಾಡಬೇಕಿದೆ ಎಂದು ಹೇಳಿದರು.

ಸಂಸ್ಕೃತದಲ್ಲಿ ಪ್ರಮಾಣ: 17ನೇ ಲೋಕಸಭೆಯಲ್ಲಿ ಸುಮಾರು 50 ಜನ ಸಂಸದರು ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿರುವುದು ಸಂತಸದ ಸಂಗತಿ. ಆದೆ, ಸಂಸ್ಕೃತವನ್ನು ಕೇವಲ ತಮ್ಮ ಪ್ರಮಾಣ ವಚನಕ್ಕೆ ಸೀಮಿತಗೊಳಿಸದೆ, ಭಾಷೆಯ ಬೆಳವಣಿಗೆಗೆ ಪ್ರೋತ್ಸಾಹ ನೀಡಬೇಕು ಎಂದರು.

ಭಾರತೀಯ ವಿಜ್ಞಾನ ಕಾಂಗ್ರೆಸ್‌ ಅಧ್ಯಕ್ಷ ಪ್ರೊ.ಕೆ.ಎಸ್‌.ರಂಗಪ್ಪ ಮಾತನಾಡಿ, ಇಂದು ಅಂತರ್ಜಾಲದಲ್ಲಿ ಎಷ್ಟೇ ವಿಚಾರಗಳು ವಿನಿಮಯವಾದರೂ ಬೆಳಗ್ಗೆ ಎದ್ದು ಪತ್ರಿಕೆ ಓದಿದಾಗಲೇ ಸಮಾಧಾನ. ಮಾಧ್ಯಮಗಳು ದೇಶದ ಪ್ರಗತಿಗೆ ಮೂಲ ಕಾರಣ. ಪತ್ರಕರ್ತರು ನ್ಯಾಯಾಧೀಶರಿದ್ದಂತೆ ಎಲ್ಲವನ್ನೂ ವಿಮರ್ಶೆ ಮಾಡಿ ಉತ್ತಮ ತೀರ್ಪು ಕೊಡಬೇಕು ಎಂದರು.

ಶಿವರಾತ್ರೀಶ್ವರ ಮಾಧ್ಯಮ ಪ್ರಶಸ್ತಿಯನ್ನು ವರ್ಷಕ್ಕೆ ಒಬ್ಬರ ಬದಲಿಗೆ, ಐದು ಜನರಿಗೆ ಕೊಡುವಂತಾದರೆ ಪತ್ರಿಕೋದ್ಯಮ ಬೆಳೆದು, ಶುದ್ಧಿಯಾಗುತ್ತೆ ಎಂದು ಅಭಿಪ್ರಾಯಪಟ್ಟರು. ಜೆಎಸ್‌ಎಸ್‌ ಮಹಾ ವಿದ್ಯಾಪೀಠದ ಕಾರ್ಯದರ್ಶಿ ಪ್ರೊ.ಎಸ್‌.ಪಿ.ಮಂಜುನಾಥ್‌ ಪ್ರಶಸ್ತಿ ಪ್ರದಾನ ಮಾಡಿದರು. ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಸಿ.ಕೆ.ಮಹೇಂದ್ರ, ಪ್ರಧಾನ ಕಾರ್ಯದರ್ಶಿ ಕೆ.ಜೆ.ಲೋಕೇಶ್‌ಬಾಬು ಉಪಸ್ಥಿತರಿದ್ದರು.

ಸಂಸ್ಕೃತ ಪತ್ರಿಕೆಗೆ ನೆರವು ನೀಡದ ವಿವಿ, ಅಕಾಡೆಮಿ: ಅಮೆರಿಕದ ವಿವಿಯೊಂದು ಸುಧರ್ಮಾ ಪತ್ರಿಕೆಯನ್ನು ತರಿಸಿಕೊಳ್ಳುತ್ತಿತ್ತು. ಇಡೀ ತಿಂಗಳ ಪತ್ರಿಕೆಯನ್ನು ಒಂದು ಬಾರಿಗೆ ಕಳುಹಿಸಿ, ತಲುಪುವುದು ತಡವಾಗುತ್ತಿದ್ದರಿಂದ ಅಂತರ್ಜಾಲ ಆವೃತ್ತಿಯನ್ನು ಆರಂಭಿಸಲಾಯಿತು.

ಇನ್ನು ಶ್ರೀಲಂಕಾದ ವಿಶ್ವವಿದ್ಯಾನಿಲಯವೊಂದು ಸುಧರ್ಮಾ ಪತ್ರಿಕೆಯನ್ನು ತರಿಸಿಕೊಳ್ಳುತ್ತಿದ್ದು, ತಮ್ಮ ವಿದ್ಯಾರ್ಥಿಗಳಿಂದ ಸಂಸ್ಕೃತ ಪತ್ರಿಕೆಯನ್ನು ಓದಿಸುತ್ತಿದ್ದಾರೆ. ಆದರೆ, ಭಾರತದಲ್ಲಿ ಸಂಸ್ಕೃತ ವಿಶ್ವವಿದ್ಯಾನಿಲಯಗಳು, ಸಂಸ್ಕೃತ ಅಭಿವೃದ್ಧಿ ಅಕಾಡೆಮಿಗಳಿದ್ದರೂ ಸಂಸ್ಕೃತ ದಿನಪತ್ರಿಕೆಯೊಂದರ ಬೆಳವಣಿಗೆಗೆ ಪ್ರೋತ್ಸಾಹ ಸಿಗುತ್ತಿಲ್ಲ.

ಈ ಬಗ್ಗೆ ಪ್ರಧಾನಮಂತ್ರಿ, ಕೇಂದ್ರ ಗೃಹ ಸಚಿವರು, ಎಲ್ಲ ವಿಶ್ವವಿದ್ಯಾನಿಲಯಗಳ ಕುಲ ಸಚಿವರಿಗೂ ಪತ್ರ ಬರೆದಿದ್ದೆ, ಯಾರಿಂದಲೂ ಪ್ರೋತ್ಸಾಹ ಸಿಗಲಿಲ್ಲ. ಸಂಸ್ಕೃತ ದಿನಪತ್ರಿಕೆಯೊಂದು ಸುವರ್ಣ ಮಹೋತ್ಸವ ಆಚರಿಸಿಕೊಳ್ಳುತ್ತಿದೆ ಎಂಬುದನ್ನು ಬಿಟ್ಟರೆ, ಪತ್ರಿಕೆಯ ಬೆಳವಣಿಗೆಗೆ ಬೇರ್ಯಾವ ಪ್ರೋತ್ಸಾಹವೂ ಸಿಗುತ್ತಿಲ್ಲ ಎಂದು ಸುಧರ್ಮಾ ಸಂಸ್ಕೃತ ದಿನಪತ್ರಿಕೆ ಸಂಪಾದಕ ಸಂಪತ್‌ಕುಮಾರ್‌ ಬೇಸರ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.