ನಾಳೆಯಿಂದ ಮೈಸೂರಿನಲ್ಲಿ ಇಂಡೋ ಇಂಟರ್‌ ನ್ಯಾಷನಲ್ ಕಬಡ್ಡಿ

ನಾಳೆ ಸಂಜೆ ಪಂದ್ಯಾವಳಿಗೆ ರಾಜವಂಶಸ್ಥ ಯದುವೀರ ಚಾಲನೆ

Team Udayavani, May 23, 2019, 3:52 PM IST

mysuru-tdy-03..

ಮೈಸೂರು: ಇಂಡೋ ಇಂಟರ್‌ ನ್ಯಾಷನಲ್ ಕಬಡ್ಡಿ ಫೆಡರೇಷನ್‌ ಮತ್ತು ಡಿ ಸ್ಫೋರ್ಟ್ಸ್ ಸಹಯೋಗದಲ್ಲಿ ನಡೆಯುತ್ತಿರುವ ಇಂಡೋ ಇಂಟರ್‌ನ್ಯಾಷನಲ್ ಪ್ರೀಮಿಯರ್‌ ಕಬಡ್ಡಿ ಲೀಗ್‌ಗೆ ಎಲ್ಲೆಡೆ ಉತ್ತಮ ಬೆಂಬಲ ವ್ಯಕ್ತವಾಗುತ್ತಿದ್ದು, ಈ ಪಂದ್ಯಾವಳಿ ಜಾಗತಿಕ ಗಮನ ಸೆಳೆದಿದೆ ಎಂದು ನ್ಯೂ ಕಬಡ್ಡಿ ಫೆಡರೇಷನ್‌ ಆಫ್ ಇಂಡಿಯಾದ ಪ್ರಧಾನ ಕಾರ್ಯದರ್ಶಿ ಎಂ.ವಿ.ಪ್ರಸಾದ್‌ ಬಾಬು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅತಿ ಕಡಿಮೆ ಅವಧಿಯಲ್ಲಿ ಇಂಡೋ ಇಂಟರ್‌ ನ್ಯಾಷನಲ್ ಪ್ರೀಮಿಯರ್‌ ಕಬಡ್ಡಿ ಲೀಗ್‌ಗೆ ಅತ್ಯುತ್ತಮ ಬೆಂಬಲ ವ್ಯಕ್ತವಾಗಿದೆ. ಕಬಡ್ಡಿ ಆಟಗಾರರಿಗೆ ಮಾನ್ಯತೆ ಜತೆಗೆ ಅರ್ಥಿಕವಾಗಿಯೂ ಅನುಕೂಲವಾಗುತ್ತಿದೆ.

ಪುಣೆಯ ಛತ್ರಪತಿ ಬಾಲೆವಾಡಿ ಒಳ ಕ್ರೀಡಾಂಗಣ ದಲ್ಲಿ ಪ್ರಾಥಮಿಕ ಹಂತದ ಪಂದ್ಯಗಳು 21ರವರೆಗೆ ನಡೆದಿದ್ದು, ಉತ್ತಮ ಪ್ರದರ್ಶನ ನೀಡುತ್ತಿರುವ ಆಟ ಗಾರರು ಇದೀಗ ಮೈಸೂರು ಮತ್ತು ಬೆಂಗಳೂರಿನಲ್ಲಿ ಎರಡು ಮತ್ತು ಮೂರನೇ ಹಂತದ ಪಂದ್ಯಗಳಲ್ಲಿ ತಮ್ಮ ಸಾಮರ್ಥ್ಯ ಸಾಬೀತುಪಡಿಸಲಿದ್ದಾರೆ.

ಮೈಸೂರಿನ ಚಾಮುಂಡಿ ವಿಹಾರ ಒಳಾಂಗಣ ಕ್ರೀಡಾಂಗಣದಲ್ಲಿ ಎರಡನೇ ಹಂತದ ಪಂದ್ಯಗಳು 24 ರಿಂದ 29ರವರೆಗೆ ನಡೆಯಲಿದೆ. ಶುಕ್ರವಾರ ಸಂಜೆ 6 ಗಂಟೆಗೆ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ಚಾಲನೆ ನೀಡಲಿದ್ದು, ಸಚಿವರಾದ ಜಿ.ಟಿ.ದೇವೇಗೌಡ, ಸಾ.ರಾ.ಮಹೇಶ್‌ ಹಾಗೂ ಶಾಸಕ ಎಸ್‌.ಎ.ರಾಮದಾಸ್‌, ಪಾಲಿಕೆ ಮೇಯರ್‌ ಪುಷ್ಪಲತಾ ಜಗನ್ನಾಥ್‌, ನಗರ ಪೊಲೀಸ್‌ ಆಯುಕ್ತ ಕೆ.ಟಿ. ಬಾಲಕೃಷ್ಣ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಈ ಪಂದ್ಯಗಳು ಡಿಡಿ ನ್ಪೋರ್ಟ್ಸ್, ಡಿ ನ್ಪೋರ್ಟ್ಸ್, ಎಂಟಿವಿ ಸೇರಿದಂತೆ ಅನೇಕ ಪ್ರಾದೇಶಿಕ ವಾಹಿನಿಗಳು ಪಂದ್ಯಾವಳಿಯನ್ನು ನೇರ ಪ್ರಸಾರ ಮಾಡುತ್ತಿವೆ ಎಂದು ಹೇಳಿದರು.

ಮೇ 24 ರಂದು ಮೈಸೂರಿನಲ್ಲಿ ಪುಣೆ ಪ್ರೖಡ್‌-ಪಾಂಡಿಚೇರಿ ಪ್ರಿಡೇಟರ್, ಹರಿಯಾಣ ರೋಸ್‌ – ಬೆಂಗಳೂರು ರಿನೋಸ್‌, ದಿಲ್ಲಾರೆ ದೆಹಲಿ – ತೆಲುಗು ಬುಲ್ಸ್ ನಡುವೆ ಹಣಾಹಣಿ ನಡೆಯಲಿದೆ. 25 ರಂದು ಮಹಿಳೆಯರ ಸಿ ಮತ್ತು ಮಹಿಳೆಯರ ಡಿ ತಂಡಗಳ ನಡುವೆ ಹಣಾಹಣಿ ನಡೆಯಲಿದೆ. ಚೆನ್ನೈ ಚಾಲೆಂಜರ್ ಮತ್ತು ಮುಂಬೈ ಚೆ ರಾಜೆ ಮತ್ತು ಹರಿಯಾಣ ರೋಸ್‌ – ದಿಲ್ಲಾರ್‌ ದಿಲ್ಲಿ ನಡುವೆ ಪಂದ್ಯ ಆಯೋಜನೆಗೊಂಡಿದೆ.

ಮೇ 26ರಂದು ಪುಣೆ ಪ್ರೖಡ್‌ – ಚೆನ್ನೈ ಚಾಲೆಂಜರ್, ಬೆಂಗಳೂರು ರಿನೋಸ್‌ – ತೆಲುಗು ಬುಲ್ಸ್, ಪಾಂಡಿಚೇರಿ ಪ್ರಿಡೇಟರ್-ಮುಂಬೈ ಚೆ ರಾಜೆ ನಡುವೆ ಸ್ಪರ್ಧೆಗೆ ಅಖಾಡ ಅಣಿಯಾಗಿದೆ. ಮೇ 27 ರಂದು ಹರಿಯಾಣ ರೋಸ್‌ – ತೆಲುಗು ಬುಲ್ಸ್, ಬೆಂಗಳೂರು ರಿನೋಸ್‌ – ದಿಲ್ಲಾರ್‌ ದೆಹಲಿ, ಪುಣೆ ಪ್ರೖಡ್‌ – ಮುಂಬೈ ಚೆ ರಾಜೆ ತಂಡಗಳ ನಡುವೆ ಹಣಾ ಹಣಿಗೆ ವೇದಿಕೆ ಸಿದ್ಧವಾಗಿದೆ.

ಮೇ 28 ರಂದು ಪಾಂಡಿಚೇರಿ ಪ್ರಿಡೇಟರ್ – ಚೆನ್ನೀ ಚಾಲೆಂಜರ್, ಬೆಂಗಳೂರು ರಿನೋಸ್‌ – ಮುಂಬೈ ಚೆ ರಾಜ, ಪುಣೆ ಪ್ರೖಡ್‌ ಮತ್ತು ಗೆಲುಗು ಬುಲ್ಸ್, ಕೊನೆಯ ದಿನವಾದ ಮೇ 29 ರಂದು ಹರಿಯಾಣ ರೋಸ್‌ – ಚೆನ್ನೈ ಚಾಲೆಂಜರ್, ಪುಣೆ ಪ್ರೖಡ್‌ – ದಿಲ್ಲಾರ್‌ ದೆಹಲಿ ಹಾಗೂ ಅಂತಿಮ ಪಂದ್ಯ ಪಾಂಡಿಚೇರಿ ಪ್ರಿಡೇಟರ್ – ತೆಲುಗು ಬುಲ್ಸ್ ನಡುವೆ ಏರ್ಪಟ್ಟಿದೆ.

ಮೂರನೇ ಹಾಗೂ ಕೊನೆಯ ಹಂತದ ಪಂದ್ಯ ಗಳು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಜೂನ್‌ 1ರಿಂದ 4ರವರೆಗೆ ನಡೆಯಲಿದೆ. ಸೆಮಿಫೈನಲ್ಸ್ ಮತ್ತು ಫೈನಲ್ ಪಂದ್ಯಗಳನ್ನು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದು, ಈ ಅಂತಿಮ ಹಂತದ ಪಂದ್ಯಗಳಲ್ಲಿ ರಾಜ್ಯಪಾಲ ವಜು ಭಾಯಿ ವಾಲಾ, ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ, ಹಿಮಾಚಲ ಪ್ರದೇಶದ ರಾಜ್ಯಪಾಲರು ಸೇರಿದಂತೆ ಅನೇಕ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಪ್ರಸಾದ್‌ ಬಾಬು ಮಾಹಿತಿ ನೀಡಿದರು.

ಟಾಪ್ ನ್ಯೂಸ್

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.