ಅಂತರ್ಜಾತಿ ವಿವಾಹ ಹೆಚ್ಚಾಗಬೇಕು: ಶ್ರೀನಿವಾಸಪ್ರಸಾದ್‌


Team Udayavani, Aug 11, 2017, 12:07 PM IST

mys4.jpg

ನಂಜನಗೂಡು: ಸಮಾಜದಲ್ಲಿನ ತಾರತಮ್ಯತೆ ಹಾಗೂ ಅಸಮಾನತೆ ಕೊನೆಗಾಣಿಸಲು ಅಂತರ್ಜಾತಿ ವಿವಾಹಗಳು ಹೆಚ್ಚಾಗಬೇಕು ಎಂದು  ಮಾಜಿ ಸಚಿವ  ವಿ.ಶ್ರೀನಿವಾಸಪ್ರಸಾದ್‌ ಹೇಳಿದರು.

ತುಮಕೂರಿನ ಸಿದ್ದಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿಗಳ 110ನೇ ವರ್ಷದ ಜನ್ಮದಿನಾಚರಣೆ ಅಂಗವಾಗಿ ನಂಜನಗೂಡಿನ ಶ್ರೀಕ್ರಾಂತಿಕಾರಿ ವೀರಶೈವ ಬಳಗ ಪಟ್ಟಣದ ಶ್ರೀಕಂಠೇಶ್ವರಸ್ವಾಮಿ ಕಲಾಮಂದಿರದಲ್ಲಿ ಗುರುವಾರ ಏರ್ಪಡಿಸಿದ್ದ ಉಚಿತ ಸಾಮೂಹಿಕ ವಿವಾಹ ಮಹೋತ್ಸವದಲ್ಲಿ ಮಾತನಾಡಿದರು.

ಜಾತಿ-ಜಾತಿಗಳಿಂದ ತುಂಬಿ ಕೊಂಡಿರುವ  ಸಮಾಜದ ಪುನರ್‌ ನಿರ್ಮಾಣದ ಕನಸು ಹೊತ್ತ ಬಸವಣ್ಣ  12ನೇ ಶತಮಾನದಲ್ಲಿ ಅಂತರ್ಜಾತಿ ವಿವಾಹವನ್ನು ಪ್ರೋತ್ಸಾಹಿಸಿದರು. ಇಂತಹ ವಿವಾಹಗಳು ಹೆಚ್ಚಾದಂತೆ ಸಮಾಜದಲ್ಲಿ ವೈಚಾರಿಕತೆ ಬೆಳೆಯುತ್ತದೆ ಎಂದರು.

ಸಮಾಜದಲ್ಲಿರುವ ಅಸಮಾನತೆ, ಅಸ್ಪಶ್ಯತೆ ಹೋಗಲಾಡಿಸಿ ಮಾನವೀಯ ಮೌಲ್ಯವನ್ನು ಭಿತ್ತಿ ಹೊಸ ಸಮಾಜ ನಿರ್ಮಿಸಲು ಬಸವಣ್ಣ ಶ್ರಮಿಸಿದ್ದರು. ಇಂತಹ ಸಾಮಾಜಿಕ ಮೌಲ್ಯಗಳ ಕಾರ್ಯವನ್ನು ಮುಂದುವರೆಸುವ ನಿಟ್ಟಿನಲ್ಲಿ ಇಲ್ಲಿನ ಕ್ರಾಂತಿಕಾರಿ ವೀರಶೈವ ಬಳಗ ಮುಂದಾಗಿರುವುದು ಅತ್ಯಂತ ಶ್ಲಾಘನೀಯವಾಗಿದ್ದು ಇಂತಹ ಸಾಮೂಹಿಕ ಹಾಗೂ ಅಂತರ್ಜಾತಿ ಮದುವೆಗಳು ಹೆಚ್ಚಾದಷ್ಟು ನಮ್ಮಲ್ಲಿನ  ಅಸ್ಪೃಶ್ಯತೆ, ಜಾತೀಯತೆ ನಿರ್ಮೂಲನೆ  ಸಾಧ್ಯ ಎಂದು ತಿಳಿಸಿದರು.

ಸುತ್ತೂರು ವೀರಸಿಂಹಾಸನ ಮಠದ ಜಗದ್ಗುರು ಶ್ರೀ ಶಿವರಾತ್ರಿದೇಶಿಕೇಂದ್ರ ಶ್ರೀಗಳು ಮಾತನಾಡಿ, ದಾಂಪತ್ಯ ಜೀವನಕ್ಕೆ ತನ್ನದೇ ಆದ ಪಾವಿತ್ರವಿದೆ  ಸಾಮೂಹಿಕ ವಿವಾಹದಲ್ಲಿ ದಾಂಪತ್ಯಕ್ಕೆ ಕಾಲಿರಿಸಿದ ಎಲ್ಲರೂ ತಮ್ಮ ದಾಂಪತ್ಯ ಜೀವನದಲ್ಲಿ ನಿಷ್ಠರಾಗಿ, ಅನ್ನೋನ್ಯರಾಗಿ  ಜೀವನ ಪರ್ಯಂತ ಇರಬೇಕು ಎಂದರು.

94 ಜೋಡಿಗಳು ವೈವಾಹಿಕ ಜೀವನಕ್ಕೆ ಪಾದಾರ್ಪಣೆ ಮಾಡಿದರು. ವಧುವಿಗೆ ಸೀರೆ, ಬಾಸಿಂಗ, ಮಾಂಗಲ್ಯ ಹಾಗೂ ವರನಿಗೆ ಶ್ವೇತವಸ್ತ್ರ, ಪೇಟ, ಬಾಸಿಂಗವನ್ನು ಕ್ರಾಂತಿಕಾರಿ ಬಳಗ ಬಳಗದ ವತಿಯಿಂದ ಉಚಿತವಾಗಿ ನೀಡಲಾಯಿತು.

ತುಮಕೂರು ಸಿದ್ಧಗಂಗಾ ಮಠದ ಅಧ್ಯಕ್ಷ ಶ್ರೀ ಸಿದ್ಧಲಿಂಗ ಮಹಾಸ್ವಾಮೀಜಿ, ಕಾಗಿನೆಲೆ ಕನಕಗುರು ಪೀಠದ ಶ್ರೀ ಶಿವಾನಂದಪುರಿ ಸ್ವಾಮೀಜಿ, ಆದಿಚುಂಚನಗಿರಿ ಶಾಖಾ ಮಠದ ಸೋಮೇಶ್ವರನಾಥಸ್ವಾಮೀಜಿ, ದೇವನೂರು ಮಠದ ಮಹಾಂತಸ್ವಾಮೀಜಿ, ಮಲ್ಲನಮೂಲೆ ಮಠದ ಚನ್ನಬಸವಸ್ವಾಮೀಜಿ, ಶಾಸಕ ಕಳಲೆ ಕೇಶವಮೂರ್ತಿ, ಬಳಗದ ಅಧ್ಯಕ್ಷ ಸಿ.ಜಗದೀಶ್‌, ಸಂಚಾಲಕರಾದ ಕೆ.ಕೆ.ಜಯದೇವ್‌, ಎನ್‌.ಸಿ.ಬಸವಣ್ಣ, ಎನ್‌.ವಿ.ವಿನಯಕುಮಾರ್‌, ಜಿ.ಮಹದೇವಪ್ರಸಾದ್‌ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ವಿಶೇಷ ಜೋಡಿಗಳು
ಹುಟ್ಟು ಕುರುಡರಾಗಿರುವ ಗುಂಡ್ಲುಪೇಟೆ ತಾಲೂಕಿನ ಗೋಪಾಲಸ್ವಾಮಿ ಬೆಟ್ಟದವಾಸಿ ಸೋಮಶೇಖರ್‌ ಹಾಗೂ ಗುಂಡ್ಲುಪೇಟೆ ತಾಲೂಕಿನ ಚಿಕ್ಕತಪ್ಪೂರು ಗ್ರಾಮದ ರೇಣುಕಾ ಅಂತರ್ಜಾತಿ ವಿವಾಹವಾದರು. ಎಚ್‌.ಡಿ.ಕೋಟೆ ತಾಲೂಕಿನ ಬಾವಿಕೊರೆಹುಂಡಿಯ ಹಿಂದೂ ಧರ್ಮದ ಸೀನಾನಾಯಕ್‌, ತಮಿಳುನಾಡಿನ ತಾಂಜಾವೂರ್‌ ಮೂಲದ ಮುಸ್ಲಿಂ ಯುವತಿ ಬತಾನಿಸಾಳನ್ನು ವರಿಸಿದರು.

ಎಚ್‌.ಡಿ.ಕೋಟೆಯ ವಡಕನಹಳ್ಳಿ ಕ್ರಿಶ್ಚಿಯನ್‌ ಧರ್ಮ ಸಂಜಾತ ಅಜಿತ್‌, ಎಚ್‌.ಡಿ.ಕೋಟೆಯ ಹಿಂದೂ ಯುವತಿ ಸಾವಿತ್ರಿ ವಿವಾಹವಾಗುವುದರ ಮೂಲಕ ಸಮಾಜಕ್ಕೆ ಮಾದರಿಯಾದರು. ರಾಜಸ್ಥಾನದ ಗೀತಾಂಜಲಿ ಮೆಡಿಸಿಟಿ ವಿಶ್ವವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿರುವ ಮೈಸೂರಿನ ದಟ್ಟಗಳ್ಳಿಯ ಶರತ್‌ ಹಾಗೂ ರಾಜಸ್ಥಾನದ ಚಿತ್ತಡ್ಕದ ದಿವ್ಯಾಸಿಂಗ್‌ ವಿವಾಹವಾದರು.

ಟಾಪ್ ನ್ಯೂಸ್

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.