ಕಾಂಗ್ರೆಸ್ ಪಕ್ಷದ ಆಂತರಿಕ ಕಚ್ಚಾಟದಿಂದ ಬೆಂಗಳೂರು ಗಲಭೆ ನಡೆದಿದೆ: ಬಿ. ವೈ. ವಿಜಯೇಂದ್ರ
Team Udayavani, Aug 17, 2020, 3:19 PM IST
ಮೈಸೂರು: ಬೆಂಗಳೂರಿನ ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಗಲಭೆಗಳು ಕಾಂಗ್ರೆಸ್ ಪಕ್ಷದ ಆಂತರಿಕ ಕಚ್ಚಾಟದಿಂದ ನಡೆದಿದೆ. ಕಾಂಗ್ರೆಸ್ ಪಕ್ಷ ನಾವಿಕನಿಲ್ಲದ ದೋಣಿಯಂತಾಗಿದೆ. ಹೀಗಾಗಿ ಬಿಜೆಪಿಯ ಬಗ್ಗೆ ಮಾತನಾಡಲು ಕಾಂಗ್ರೆಸ್ ಗೆ ಯಾವುದೇ ನೈತಿಕತೆಯಿಲ್ಲ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ. ವೈ. ವಿಜಯೇಂದ್ರ ಹೇಳಿದರು.
ಮೈಸೂರಿನಲ್ಲಿ ಮಾತನಾಡಿದ ಅವರು, ಬೆಂಗಳೂರಿನ ಡಿ ಜೆ. ಹಳ್ಳಿ ಮತ್ತು ಕೆ ಜಿ. ಹಳ್ಳಿಯ ಗಲಭೆಯ ಹಿಂದೆ ಕಾಂಗ್ರೆಸ್ ಪಕ್ಷದ ಪಿತೂರಿಯಿದೆ. ಎಸ್ ಡಿಪಿಐ ಸಂಘಟನೆಯು ಕಾಂಗ್ರೆಸ್ ಪಕ್ಷದ ಪಾಪದ ಕೂಸು. ಅವರು ಬಿತ್ತಿದ ಬೀಜ ಈಗ ಹೆಮ್ಮರವಾಗಿ ಬೆಳೆದಿದೆ ಎಂದರು.
ಬೆಂಗಳೂರಿನ ಗಲಭೆ ವಿಚಾರದಲ್ಲಿ ಕಾಂಗ್ರೆಸ್ ಪಕ್ಷ ತನ್ನ ಶಾಸಕನ ಪರ ನಿಲ್ಲಬೇಕೋ ಅಥವಾ ಎಸ್ ಡಿಪಿಐ ಪರ ನಿಲ್ಲಬೇಕೊ ಎಂಬ ಗೊಂದಲದಲ್ಲಿ ಮುಳುಗಿದೆ. ಎಸ್ ಡಿಪಿಐಯನ್ನು ಕಾಂಗ್ರೆಸ್ ಅಸ್ತ್ರವಾಗಿ ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿದರು.
ಎಸ್ ಡಿಪಿಐ ಕಚೇರಿಗೆ ಪೊಲೀಸರು ಭೇಟಿ ನೀಡಿದಾಗ ಮಾರಕಾಸ್ತ್ರಗಳು ಪತ್ತೆಯಾಗಿವೆ. ಅಲ್ಲಿಯೇ ಗಲಭೆ ನಡೆಸಲು ಸಭೆ ನಡೆಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮುಂದಿನ ದಿನಗಳಲ್ಲಿ ಈ ಬಗ್ಗೆ ಇನ್ನಷ್ಟು ತನಿಖೆಯಾಗಬೇಕಿದೆ ಎಂದರು.
ಇದನ್ನೂ ಓದಿ: ಗಲಭೆಕೋರರಿಂದ ಆಸ್ತಿ ಮುಟ್ಟುಗೋಲು ವಿಚಾರ: ಕೋರ್ಟ್ ಗೆ ಮನವಿ ಸಲ್ಲಿಸಲು ಸರ್ಕಾರ ನಿರ್ಧಾರ
ಮೈಸೂರಿನ ಜಯಲಕ್ಷ್ಮಿಪುರಂನಲ್ಲಿರುವ ಸಂಸದ ಶ್ರೀನಿವಾಸ್ ಪ್ರಸಾದ್ ನಿವಾಸಕ್ಕೆ ಬಿ.ವೈ.ವಿಜಯೇಂದ್ರ ಭೇಟಿ ನೀಡಿದರು. ನಂತರ ಮಾತನಾಡಿದ ಅವರು, ವಿ. ಶ್ರೀನಿವಾಸಪ್ರಸಾದ್ ಹಿರಿಯ ನಾಯಕರಾಗಿದ್ದಾರೆ. ನಾನು ಅವರ ಮಾರ್ಗದರ್ಶನ ಪಡೆದುಕೊಳ್ಳುತ್ತೇನೆ. ಹಾಗಾಗಿ ಅವರ ಭೇಟಿಮಾಡಿ ಆಶೀರ್ವಾದ ಪಡೆದುಕೊಂಡಿದ್ದೇನೆ. ಅವರನ್ನು ಭೇಟಿ ಮಾಡಿದ ವೇಳೆ ಯಾವುದೇ ರಾಜಕೀಯ ವಿಚಾರ ಚರ್ಚೆ ನಡೆದಿಲ್ಲ ಎಂದರು.
ಬಿಎಸ್ ವೈ ಸರ್ಕಾರಕ್ಕೆ ಒಂದು ವರ್ಷವಾದರೂ ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕಾತಿ ಆಗದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಪಕ್ಷದ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ. ಶೀಘ್ರದಲ್ಲೇ ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕಾತಿ ಆಗಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ