ಸ್ಥಳದಲ್ಲೇ 102 ಮಂದಿಗೆ ಪಿಂಚಣಿ ಆದೇಶ ಪತ್ರ ವಿತರಣೆ


Team Udayavani, Oct 9, 2021, 12:55 PM IST

ಸ್ಥಳದಲ್ಲೇ 102 ಮಂದಿಗೆ ಪಿಂಚಣಿ ಆದೇಶ ಪತ್ರ ವಿತರಣೆ

ಹುಣಸೂರು: ತಾಲೂಕಿನ ಹನಗೋಡಿನಲ್ಲಿ ನಡೆದ ಪಿಂಚಣಿ ಮತ್ತು ಕಂದಾಯ ಅದಾಲತ್‌ನಲ್ಲಿ ಸ್ಥಳದಲ್ಲಿಯೇ 102 ಮಂದಿಗೆ ವಿವಿಧ ಯೋಜನೆಯಡಿ ಪಿಂಚಣಿ ಆದೇಶ ಪತ್ರವನ್ನು ಗ್ರೇಡ್-2 ತಹಸೀಲ್ದಾರ್ ನರಸಿಂಹಯ್ಯ ವಿತರಿಸಿದರು.

ಹನಗೋಡಿನ ನಾಡಕಛೇರಿ ಆವರಣದಲ್ಲಿ ಶುಕ್ರವಾರ ನಡೆದ ಅದಾಲತ್‌ಗೆ ಒಟ್ಟು 179ಮಂದಿ ವಿವಿಧ ಪಿಂಚಣಿ ಯೋಜನೆಗಳಿಗೆ ಅರ್ಜಿ ಸಲ್ಲಿಸಿದ್ದರು. ದಾಖಲೆ ಪರಿಶೀಲಿಸಿ ಸ್ಥಳದಲ್ಲೇ 102 ಮಂದಿಗೆ ಆದೇಶ ಪತ್ರ ವಿತರಿಸಲಾಯಿತು. ನಂತರ ಮಾತನಾಡಿದ ಗ್ರೇಡ್-2 ತಹಸೀಲ್ದಾರ್ ನರಸಿಂಹಯ್ಯ ಸರಕಾರದ ಸೂಚನೆ ಮೇರೆಗೆ ಒಂದೇ ಸೂರಿನಡಿ ವಿವಿಧ ಸಲತ್ತುಗಳನ್ನು ನೀಡಲು ಪಿಂಚಣಿ ಅದಾಲತ್ ಆಯೋಜಿಸಲಾಗಿದೆ. ವೃದ್ದಾಪ್ಯ ಹಾಗೂ ಅಂಗವಿಕಲರ ವೇತನ ಮಂಜೂರಾತಿ ಮಾಡುವ ವೇಳೆ ವೈದ್ಯಕೀಯ ದೃಡೀಕರಣ ಪತ್ರ ನೀಡಲೇಬೇಕು. ಅಲ್ಲದೆ ವಿಧವಾ ವೇತನ ಪಡೆಯಲು ಮಕ್ಕಳು ಸೇರಿದಂತೆ ಎಲ್ಲಾ ಸವಲತ್ತು ಹೊಂದಿರುವವರಿಗೆ ಪಿಂಚಣಿ ನೀಡುವಾಗುವುದಿಲ್ಲಾ, ಗ್ರಾಮಲೆಕ್ಕಿಗರು ನೀಡುವ ಧೃಡಿಕರಣ ಪತ್ರವೇ ಅಂತಿಮವಾಗಿರುವುರಿಂದ ಅರ್ಜಿದಾರರು ನಾಡಕಛೇರಿಗೆ ಅರ್ಜಿ ಸಲ್ಲಿಸಿದರೆ ಉಳಿದ ದಾಖತಿಗಳನ್ನು ಒದಗಿಸಿಕೊಂಡು ಪಿಂಚಣಿ ಆದೇಶ ಪತ್ರವಿತರಿಸಬೇಕೆಂಬ ಸರಕಾರದ ಸೂಚನೆ ಇದ್ದು ಕಂದಾಯ ಇಲಾಖೆ ಅಧಿಕಾರಿಗಳು ಆದೇಶವನ್ನು ಪಾಲಿಸಬೇಕೆಂದು ಗ್ರಾಮ ಲೆಕ್ಕಿಗರಿಗೆ ಸೂಚನೆ ನೀಡಲಾಗಿದೆ ಎಂದರು.

ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಮುದಗನೂರು ಸುಭಾಷ್ ಮಾತನಾಡಿ ಈ ಬಾರಿ ಅತಿವೃಷ್ಟಿ-ಅನಾವೃಷ್ಟಿಯಿಂದಾಗಿ ರೈತರು ಸಂಕಷ್ಟದಲ್ಲಿದ್ದು, ಕೃಷಿಗಾಗಿ ಮಾಡಿರುವ ಸಾಲಕ್ಕೆ ಧೃತಿಗೆಡಬೇಡಿ. ಅತ್ಮಹತ್ಯೆ ದಾರಿ ಹಿಡಿಯಬೇಡಿ. ಅತ್ಮಹತ್ಯೆಯಿಂದ ನಿಮ್ಮ ಕುಟುಂಬದವರು ಬೀದಿ ಪಾಲಾಗುತ್ತಾರೆ. ಬಿತ್ತಿದ ಬೆಳೆ ಕೈ ಸೇರದೆ ಸಂಕಷ್ಟದಲ್ಲಿರುವ ರೈತರಿಗೆ ನೆರವಾಗಲು ಸರ್ಕಾರ ಅಗತ್ಯ ಕ್ರಮಕೈಗೊಳ್ಳಲು ಕೃಷಿ-ಕಂದಾಯ ಇಲಾಖೆ ಅಧಿಕಾರಿಗಳು ಸಮಗ್ರ ವರದಿ ಸಲ್ಲಿಸಬೇಕೆಂದರು.

ಕಾರ್ಯಕ್ರಮದಲ್ಲಿ ಹನಗೋಡು ಗ್ರಾಮ ಪಂಚಾಯಿತಿ ಅಧ್ಯಕ್ಷೆ ನೂರ್‌ಜಾನ್, ತಾ.ಪಂ.ಮಾಜಿ ಸದಸ್ಯ ಗಣಪತಿ ಮಾತನಾಡಿದರು. ಹನಗೋಡು ನಾಡಕಚೇರಿಯ ಉಪತಹಸಿಲ್ದಾರ್ ಚಲುವರಾಜ್, ಆರ್.ಐ.ಪ್ರಶಾಂತ್‌ರಾಜೇ ಅರಸ್, ಗ್ರಾಮ ಲೆಕ್ಕಿಗರಾದ ಮಹದೇವ್ , ಸುಮಂತ್, ಶಿವಕುಮಾರ್, ಮೂರ್ತಿ, ಸೀಮಾಭಾನು ಸೇರಿದಂತೆ ವಿವಿಧ ಗ್ರಾಮ ಪಂಚಾಯಿತಿ ಸದಸ್ಯರು, ರೈತ ಮುಖಂಡರು ಹಾಗೂ ವಿವಿಧ ಪಿಂಚಿಣಿ ಫಲಾನುಭವಿಗಳು ಹಾಜರಿದ್ದರು.

 

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.