ಕಾಂಗ್ರೆಸ್‌ ಮುಖಂಡ ಕೆಜಿಎಫ್ ಬಾಬು ನಿವಾಸಕ್ಕೆ ಐಟಿ ದಾಳಿ


Team Udayavani, May 28, 2022, 10:43 PM IST

ಡಿ.ಕೆ.ಶಿ  ಆಪ್ತ ಕೆ.ಜಿ.ಎಫ್ ಬಾಬು ಮನೆ ಮೇಲೆ‌ ಆದಾಯ ತೆರಿಗೆ ದಾಳಿ

ಬೆಂಗಳೂರು: ತೆರಿಗೆ ವಂಚನೆ ಆರೋಪದಡಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಉದ್ಯಮಿ ಹಾಗೂ ಕಾಂಗ್ರೆಸ್‌ ಮುಖಂಡ ಯೂಸುಫ್ ಶರೀಫ್ ಅಲಿಯಾಸ್‌ ಕೆಜಿಎಫ್ ಬಾಬು ಅವರ ವಸಂತನಗರ ನಿವಾಸ, ಕಚೇರಿ ಸಹಿತ ಒಟ್ಟು 7 ಕಡೆಗಳಿಗೆ ಶನಿವಾರ ಬೆಳಗ್ಗೆ ದಿಢೀರ್‌ ದಾಳಿ ನಡೆಸಿ ದಾಖಲೆಗಳ ಶೋಧನೆ ನಡೆಸಿದರು.

ಜತೆಗೆ ಅವರ ಸ್ನೇಹಿತರು ಮತ್ತು ಆಪ್ತರ ನಿವಾಸಗಳಲ್ಲೂ ಅಧಿಕಾರಿಗಳು ಶೋಧ ನಡೆಸಿದರು.

ಸಿಆರ್‌ಪಿಎಫ್ ಭದ್ರತಾ ಸಿಬಂದಿ ಜತೆಗೆ ಬೆಳಗ್ಗೆ 7.30ರ ಸುಮಾರಿಗೆ ನಾಲ್ಕು ಇನೋವಾ ಕಾರಿನಲ್ಲಿ ವಸಂತ ನಗರದ ರುಕ್ಸಾನಾ ಪ್ಯಾಲೇಸ್‌ಗೆ ಆಗಮಿಸಿದ ಅಧಿಕಾರಿಗಳು ಸಂಜೆಯವರೆಗೆ ದಾಖಲೆಗಳ ಪರಿಶೋಧನೆ ನಡೆಸಿದರು.

ಬಾಬು ಒಡೆತನದ ರುಕ್ಸಾನಾ ಪ್ಯಾಲೇಸ್‌, ಉಮ್ರಾ ಡೆವಲಪರ್ಸ್‌, ಉಮ್ರಾ ರಿಯಲ್‌ ಎಸ್ಟೇಟ್‌ ಕಂಪೆನಿ ಮುಂತಾದೆಡೆ 30ಕ್ಕೂ ಅಧಿಕ ಅಧಿಕಾರಿಗಳ ತಂಡ ಪರಿಶೀಲನೆ ನಡೆಸಿತು.

ಬ್ಯಾಂಕ್‌ ಖಾತೆಯಲ್ಲಿ 70 ಕೋಟಿ ರೂ.ಪತ್ತೆ?
ಅಧಿಕಾರಿಗಳಿಗೆ ಕೆಲವು ಮಹತ್ವದ ದಾಖಲೆಗಳು ದೊರೆತಿವೆ ಎನ್ನಲಾಗಿದೆ. ಒಟ್ಟು 23 ಬ್ಯಾಂಕ್‌ ಖಾತೆಗಳನ್ನು ಬಾಬು ಕುಟುಂಬಸ್ಥರು ಹೊಂದಿದ್ದು, ಸುಮಾರು 70 ಕೋ.ರೂ. ಠೇವಣಿ ಇರುವುದು ಪತ್ತೆಯಾಗಿದೆ. ಬಾಬು ಅವರ ಪತ್ನಿ ಮತ್ತು ಮಕ್ಕಳ ಹೆಸರಲ್ಲಿ 11 ಖಾತೆಗಳಿವೆ ಎನ್ನಲಾಗಿದೆ.

ಗುಜರಿ ಉದ್ಯಮ
ಕೆಜಿಎಫ್ ಬಾಬು ಗುಜರಿ ಉದ್ಯಮದಲ್ಲಿ ಖ್ಯಾತರಾಗಿದ್ದಾರೆ. ತಿಂಗಳುಗಳ ಹಿಂದೆ ನಡೆದಿದ್ದ ವಿಧಾನ ಪರಿಷತ್ತಿನ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದರು. 2023ರ ವಿಧಾನಸಭಾ ಚುನಾಚಣೆಯಲ್ಲಿ ಕೋಲಾರದಿಂದ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಯಾಗಿದ್ದಾರೆ. ಅವರು ಉಮ್ರಾ ಡೆವಲಪರ್ಸ್‌ ಕಂಪೆನಿಯ ಮಾಲಕರೂ ಆಗಿದ್ದಾರೆ.

ಕೋಟಿಕೋಟಿ ಹೂಡಿಕೆ
ಬಾಂಡ್‌, ಷೇರುಗಳು, ಮ್ಯೂಚುವಲ್‌ ಫಂಡ್‌ಗಳಲ್ಲಿ ಷರೀಫ್‌ 17.62 ಕೋಟಿ ರೂ. ಹೂಡಿಕೆ ಮಾಡಿದ್ದಾರೆ. ಮೊದಲ ಪತ್ನಿ 1.60 ಲಕ್ಷ ರೂ., ಎರಡನೇ ಪತ್ನಿ 75 ಸಾವಿರ ಹೂಡಿಕೆ ಮಾಡಿದ್ದಾರೆ. ಐದು ಕನ್‌ಸ್ಟ್ರಕ್ಷನ್‌ ಕಂಪೆನಿಗಳಲ್ಲಿ ಬಾಬು ಹೂಡಿಕೆ ಮಾಡಿದ್ದು, ಅವರ ಒಟ್ಟು ಹೂಡಿಕೆ ಮೊತ್ತ 17.61 ಕೋಟಿ ರೂ. ಆಗಿದೆ ಎಂದು ತಿಳಿದು ಬಂದಿದೆ. ಕೆಲವರಿಗೆ ಕೋಟ್ಯಂತರ ರೂ. ಸಾಲವನ್ನೂ ನೀಡಿದ್ದಾರೆ.

1,745 ಕೋಟಿ ಆಸ್ತಿ ಒಡೆಯ
ವಿಧಾನ ಪರಿಷತ್‌ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದ ಬಾಬು 97.98 ಕೋಟಿ ರೂ. ಮೌಲ್ಯದ ಚರಾಸ್ತಿ, 1,643.59 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿ ಸಹಿತ ಒಟ್ಟು 1,741.57 ಕೋಟಿ ರೂ.ಆಸ್ತಿ ಘೋಷಿಸಿಕೊಂಡಿದ್ದರು. ಜತೆಗೆ ಪತ್ನಿಯರು, ಅವಲಂಬಿತರ ಆಸ್ತಿಯೂ ಸೇರಿದರೆ 1,745 ಕೋಟಿ ರೂ. ತಲುಪಿತ್ತು.

ರೋಲ್ಸ್‌ ರಾಯಸ್ ಕಾರು
ಷರೀಫ್‌ ಅವರು 2.99 ಕೋಟಿ ರೂ. ಮೌಲ್ಯದ ವಾಹನವನ್ನು ಹೊಂದಿದ್ದಾರೆ. 2.01 ಕೋಟಿ ರೂ. ಬೆಲೆಯ ಒಂದು ರೋಲ್ಸ್‌ ರಾಯಸ್ ಕಾರು, ಎರಡು ಫಾರ್ಚೂನರ್‌ ಕಾರುಗಳು ಅವರಲ್ಲಿವೆ.

ಟಾಪ್ ನ್ಯೂಸ್

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.