ರಾಜಕಾರಣಿಗಳು ಪತ್ರಿಕೆ ಮಾಲೀಕತ್ವ ಪಡೆದ್ರೆ ಕಷ್ಟ; ಮುಖ್ಯಮಂತ್ರಿ ಬೊಮ್ಮಾಯಿ

ಕೆಲವು ಮಾಧ್ಯಮಗಳು ರೋಚಕ ಸುದ್ದಿಗಳಿಗೆ ಹೆಚ್ಚಿನ ಆದ್ಯತೆ ಕೊಡುತ್ತಿವೆ.

Team Udayavani, Jul 7, 2022, 5:54 PM IST

ರಾಜಕಾರಣಿಗಳು ಪತ್ರಿಕೆ ಮಾಲೀಕತ್ವ ಪಡೆದ್ರೆ ಕಷ್ಟ; ಮುಖ್ಯಮಂತ್ರಿ ಬೊಮ್ಮಾಯಿ

ಮೈಸೂರು:ರಾಜಕಾರಣಿಗಳು ಪತ್ರಿಕೆಗಳ ಮಾಲೀಕತ್ವ ಪಡೆದರೆ ಬಹಳ ಕಷ್ಟವಾಗುತ್ತದೆ. ರಾಜಕಾರಣಿಗಳು ಬಿಸಿನೆಸ್‌ ಮೆನ್‌ ಆಗುವುದು ಬಿಸಿನೆಸ್‌ಮೆನ್‌ ರಾಜಕಾರಣಿಯಾಗುವುದಕ್ಕಿಂತ ಹೆಚ್ಚು ಅಪಾಯಕಾರಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಇಲ್ಲಿನ ಆಂದೋಲನ ದಿನಪತ್ರಿಕೆಯ 50ನೇ ವರ್ಷದ ಪಯಣದ ಅಂಗವಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಘಟಿಕೋತ್ಸವ ಭವನದಲ್ಲಿ ಬುಧವಾರ ನಡೆದ ಸಮಾರಂಭ  ಉದ್ಘಾಟಿಸಿ ಮಾತನಾಡಿ, ಈ ಹಿಂದೆ ರಾಜ್ಯದಲ್ಲಿ ಕೆಲವು ರಾಜಕಾರಣಿಗಳು ಪತ್ರಿಕೆ ನಡೆಸುವ ಪ್ರಯತ್ನ ಮಾಡಿದರು. ವೀರೇಂದ್ರ ಪಾಟೀಲ್‌, ಆರ್‌.ಗುಂಡೂರಾವ್‌ ಪತ್ರಿಕೆಗಳನ್ನು ನಡೆಸಲು ಪ್ರಯತ್ನಪಟ್ಟರು. ಆದರೆ, ಯಶಸ್ವಿಯಾಗಲಿಲ್ಲ ಎಂದರು.

ಉದ್ಯಮಿಗಳು ರಾಜಕೀಯಕ್ಕೆ ಬಂದರೆ ಅಪಾಯ ಎಂದು ಹೇಳಲಾಗುತ್ತಿತ್ತು. ಆದರೀಗ ರಾಜಕಾರಣಿಗಳೇ ಉದ್ಯಮಿಗಳಾಗುತ್ತಿದ್ದಾರೆ. ಇದು ಮತ್ತಷ್ಟು ಅಪಾಯಕಾರಿ ಬೆಳವಣಿಗೆಯಾಗಿದೆ ಎಂದರು. ಜಾಗತೀಕರಣ, ಉದಾರೀಕರಣದ ನಡುವೆ ಅಂತಃ ಕರಣ ಕಡಿಮೆಯಾಗಿದೆ. ಅಂತ ಕ ರಣ ಇಟ್ಟುಕೊಂಡು ನಾವು ಮುಂದೆ ಹೋಗುವುದು ಅವಶ್ಯಕತೆ ಇದೆ. ಇವತ್ತಿನ ಸವಾಲುಗಳಿಗೆ, ಇವತ್ತಿನ ಪರಿಸ್ಥಿತಿಗೆ ಜನರ ಆಶೋತ್ತರಗಳಿಗೆ ನಾವು ಸ್ಪಂದಿಸಬೇಕಿದೆ. ಎಲ್ಲವನ್ನು
ಪೂರ್ವಗ್ರಹ ಪೀಡಿತವಾಗಿ ನೋಡಬಾರದು.

ವಸ್ತು ನಿಷ್ಠವಾಗಿಯೂ ನೋಡುವ ಅವಶ್ಯಕತೆ ಇದೆ. ಹೊಸದು ಬಂದಾಗ ಟೀಕೆ ಬೇಡ. ಖಾಸಗೀ ಕರಣ ಬಂದಾಗ ಟೀಕಿಸಿದರು. ಆದ್ದರಿಂದ ವಸ್ತು ನಿಷ್ಠವಾಗಿ ನೋಡುವ ಅವಶ್ಯಕತೆ ಇದೆ ಎಂದರು. ಪತ್ರಿಕೋದ್ಯಮದಲ್ಲಿ ತಾಂತ್ರಿಕವಾಗಿ ಭಾರೀ ಬದಲಾವಣೆಯಾಗಿದೆ. ರಾಜಶೇಖರ ಕೋಟಿ ಅವರು ಕೇವಲ ಪತ್ರಕರ್ತರು ಮಾತ್ರ ಆಗಿರಲಿಲ್ಲ. ಜನಪರ ಧ್ವನಿಯಾಗಿದ್ದರು. ಜನ ಕಲ್ಯಾಣದ ಬಗ್ಗೆ ನಿರಂತರ ಚಿಂತನೆ ಮಾಡುತ್ತಿದ್ದರು. ಚಳವಳಿ ಜೊತೆಗೆ ಕೋಟಿ ಜೋಡಿಸಿಕೊಂಡಿದ್ದರು ಎಂದರು.

ನಿರೀಕ್ಷಿತ ಮಟ್ಟದಲ್ಲಿ ಕೆಲಸ ಮಾಡುತ್ತಿಲ್ಲ: ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಕೆಲವು ಮಾಧ್ಯಮಗಳು ನಿರೀಕ್ಷಿತ ಮಟ್ಟದಲ್ಲಿ ಕೆಲಸ ಮಾಡುತ್ತಿಲ್ಲ. ಕೆಲವು ಮಾಧ್ಯಮಗಳು ರೋಚಕ ಸುದ್ದಿಗಳಿಗೆ ಹೆಚ್ಚಿನ ಆದ್ಯತೆ ಕೊಡುತ್ತಿವೆ. ಗಂಡ-ಹೆಂಡತಿ ಜಗಳವನ್ನೇ ಇಡೀ ದಿನ ಬಿತ್ತರಿಸುತ್ತಿವೆ. ಮೌಢ್ಯವನ್ನು ಬಿತ್ತುತ್ತಿವೆ. ಇದರಿಂದ ಸಮಾಜಕ್ಕೆ ಯಾವುದೇ ಪ್ರಯೋಜನವಾಗುತ್ತಿಲ್ಲ ಎಂದು ವಿಷಾದಿಸಿದರು.

ನಾನು ಮುಖ್ಯಮಂತ್ರಿ ಆಗಿದ್ದಾಗ ನನ್ನ ಕಾರಿನ ಮೇಲೆ ಕಾಗೆ ಕುಳಿತದ್ದನ್ನೇ ಪುಂಖಾನು ಪುಂಕವಾಗಿ ವರದಿ ಮಾಡಲಾಯಿತು. ಚಾಮರಾಜನಗರಕ್ಕೆ ಭೇಟಿ ನೀಡಿದರೆ ಅಧಿಕಾರ ಹೋಗುತ್ತದೆ ಎಂದೆಲ್ಲಾ ಹೇಳಿದರು. ಆದರೆ, ನಾನು 12 ಬಾರಿ ಚಾಮರಾಜ ನಗರಕ್ಕೆ ಭೇಟಿ ನೀಡಿದರೂ 5 ವರ್ಷ ಅಧಿಕಾರ ಅವಧಿ ಪೂರ್ಣಗೊಳಿಸಿದೆ ಎಂದರು.

ರಾಜಶೇಖರ ಕೋಟಿಯವರು ಎಂದೂ ಕೂಡ ರಾಜಿ ಮಾಡಿಕೊಳ್ಳಲಿಲ್ಲ. ತುಳಿತಕ್ಕೆ, ಶೋಷಣೆಗೆ ಒಳಗಾದವರ ಧ್ವನಿಯಾಗಿದ್ದರು. ಅವರು ಸ್ನೇಹ ಜೀವಿಯಾಗಿದ್ದರು ಎಂದು ಸಿದ್ದರಾಮಯ್ಯ ಹೇಳಿ ದರು. ಚಲನಚಿತ್ರ ನಟ ಶಿವರಾಜಕುಮಾರ್‌ ಮಾತನಾಡಿ, ಸಿನಿಮಾ ರಂಗಕ್ಕೂ, ಪತ್ರಿಕಾ ರಂಗಕ್ಕೂ ಹೆಚ್ಚಿನ ಒಡನಾಟವಿದೆ ಎಂದರು. ಹಿರಿಯ ಪತ್ರಕರ್ತ ಪಿ.ಸಾಯಿನಾಥ್‌, ನಿರ್ಮಲ ಕೋಟಿ, ರಶ್ಮಿ ಕೋಟಿ , ರವಿ ಕೋಟಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.