ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು
Team Udayavani, Mar 27, 2024, 7:23 PM IST
ಮೈಸೂರು: ಕಾಂಗ್ರೆಸ್ ಟಿಕೆಟ್ ಸಂಬಂಧ ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ. ದಲಿತ ಎಡಗೈ ಬದಲು ಬಲಗೈ ಸಮುದಾಯಕ್ಕೆ ಟಿಕೆಟ್ ಕೊಡಬೇಕೆಂಬ ಒತ್ತಾಯವಿದೆ. ಈ ಬಗ್ಗೆ ನಾನು ಅವರ ಜತೆ ಮಾತನಾಡಿದ್ದು, ಸಮಾಧಾನದಿಂದ ಇರುವಂತೆ ಹೇಳಿದ್ದೇನೆ. ಆ ಕ್ಷೇತ್ರಕ್ಕೆ ಇನ್ನೂ ಟಿಕೆಟ್ ಘೋಷಣೆ ಆಗಿಲ್ಲ. ಆದರೂ ಎಡಗೈ ಅವರಿಗೆ ಸಿಗುತ್ತೆ ಅಂತ ಭಯಪಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಸುದ್ದಿಗಾರರಿಗೆ ತಿಳಿಸಿದರು.
ಫೋನ್ನಲ್ಲಿ ಬ್ಯುಸಿಯಾದ ಸಿಎಂ: ಎಚ್.ಡಿ.ಕೋಟೆ ರೆಸಾರ್ಟ್ನಿಂದ ಮೈಸೂರಿಗೆ ಆಗಮಿಸಿದ ಮುಖ್ಯಮಂತ್ರಿಗಳು ನಗರದ ಹೋಟೆಲ್ ಒಂದಕ್ಕೆ ಕಾಫಿಗೆ ತೆರಳಿದರು. ಈ ಸಂದರ್ಭ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಕರೆ ಮಾಡಿದರು. ಈ ವೇಳೆ ಪೋನ್ ಸ್ವೀಕರಿಸಿದ ಮುಖ್ಯಮಂತ್ರಿಗಳು, ಹೇಳು ಹೊರಟ್ಟಿ ಎಂದು ಮಾತು ಆರಂಭಿಸಿ ಬೇಡ ಬೇಡ ಯಾವುದನ್ನೂ ತಗೋಬೇಡ ಎಂದು ಸೂಚಿಸಿದರು.