ಜೈಲು ಪಾಲಾದ ದಂಪತಿ: ಮಕ್ಕಳು ಪರಿತಾಪ


Team Udayavani, Dec 21, 2018, 4:04 PM IST

mys-1.jpg

ಚಾಮರಾಜನಗರ: ಜಿಲ್ಲೆಯ ಸುಳ್ವಾಡಿ ಗ್ರಾಮದ ಕಿಚ್ಚುಗುತ್ತಿ ಮಾರಮ್ಮ ದೇವಾಲಯದಲ್ಲಿ ನಡೆದ ವಿಷ ಪ್ರಸಾದ ಪ್ರಕರಣದ ಪ್ರಮುಖ ಆರೋಪಿಗಳಾದ ಅಂಬಿಕಾ ಮತ್ತು ಮಾದೇಶ್‌ ದಂಪತಿ ಜೈಲು ಪಾಲಾಗಿದ್ದು, ತಂದೆ ತಾಯಿ ಮಾಡಿದ ತಪ್ಪಿಗೆ ಅವರ ಅಮಾಯಕ ಮಕ್ಕಳು ಪರಿತಾಪ ಅನುಭವಿಸಬೇಕಾಗಿದೆ.
 
ದೇವಾಲಯದ ವ್ಯವಸ್ಥಾಪಕನಾಗಿದ್ದ ಮಾದೇಶ ಅಲಿಯಾಸ್‌ ಮಹದೇವಸ್ವಾಮಿ (46) ಕೊಳ್ಳೇಗಾಲದ ಶಾಗ್ಯ ಗ್ರಾಮದವನು. ಆತನ ಪತ್ನಿ ಅಂಬಿಕಾ (35) ಗೃಹಿಣಿಯಾಗಿದ್ದು ಪತಿ ಪತ್ನಿ ಶಾಗ್ಯದಲ್ಲೇ ಇದ್ದರು. ಮಾರಮ್ಮ ದೇವಸ್ಥಾನದ ವ್ಯವಹಾರದಲ್ಲಿ ತೊಡಗಿಕೊಂಡ ನಂತರ ಪತಿ ಪತ್ನಿ ಇಬ್ಬರೂ ಸುಳ್ವಾಡಿ ಗ್ರಾಮದ ಸಮೀಪದಲ್ಲಿರುವ ಮಾರ್ಟಳ್ಳಿಯಲ್ಲಿ ಕೆಲವು ವರ್ಷಗಳಿಂದ ಮನೆ ಮಾಡಿಕೊಂಡು ವಾಸವಿದ್ದರು.
 
ಪ್ರಕರಣದ ಸೂತ್ರಧಾರ ಇಮ್ಮಡಿ ಸ್ವಾಮೀಜಿ ಆರೋಪಿ ನಂ. 1 ಆಗಿದ್ದು, ಅಂಬಿಕಾ ಪ್ರಕರಣದಲ್ಲಿ ಆರೋಪಿ ನಂ. 2 ಆಗಿದ್ದಾಳೆ, ಮಾದೇಶ ಆರೋಪಿ ನಂ. 3, ದೊಡ್ಡಯ್ಯ ಆರೋಪಿ ನಂ. 4 ಆಗಿದ್ದಾನೆ. ಬುಧವಾರ ಬಂಧಿತರಾದ ಈ ನಾಲ್ವರನ್ನೂ ಕೊಳ್ಳೇಗಾಲ ನ್ಯಾಯಾಲಯಕ್ಕೆ ಹಾಜರುಪಡಿಸಿ, ಡಿ. 22ರವರೆಗೂ ಪೊಲೀಸ್‌ ಕಸ್ಟಡಿಗೆ ನೀಡಲಾಗಿದೆ. 15 ಜನರು ಮೃತರಾಗಿರುವ ಈ ಪ್ರಕರಣದ ಗಂಭೀರತೆ ಗಮನಿಸಿದರೆ ನಾಲ್ವರು ಆರೋಪಿ ಗಳಿಗೂ ಜಾಮೀನು ಸಿಗುವ ಸಾಧ್ಯತೆಗಳು ಕ್ಷೀಣವಾಗಿವೆ.
 
ಮಗಳು ಎಂಜಿನಿಯರಿಂಗ್‌ ವಿದ್ಯಾರ್ಥಿನಿ, ಮಗ 7ನೇ ಕ್ಲಾಸ್‌: ಅಂಬಿಕಾ ಮತ್ತು ಮಾದೇಶ್‌ ದಂಪತಿಗೆ ಇಬ್ಬರು ಮಕ್ಕಳಿದ್ದು, ಮಗಳು ಎಂಜಿ ನಿಯರಿಂಗ್‌ ಕಾಲೇಜಿನಲ್ಲಿ ಮೊದಲ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದಾಳೆ. ಮಗ 7ನೇ ತರಗತಿಯಲ್ಲಿ ಓದುತ್ತಿದ್ದಾನೆ. 

ತಂದೆ ತಾಯಿ ಇಬ್ಬರೂ ಸೇರಿ ನಡೆಸಿರುವ ನೀಚ ಕೃತ್ಯದಿಂದ ಅಮಾಯಕರಾದ ಮಕ್ಕಳು ಮಾನಸಿಕ ಕ್ಷೋಭೆ ಅನುಭವಿಸಬೇಕಾಗಿದೆ. ಮುಖ್ಯವಾಗಿ ತಂದೆ-ತಾಯಿ ಜೊತೆಗಿರದ ಅನಾಥ ಭಾವ. ಅವರ ವಿದ್ಯಾಭ್ಯಾಸ, ಅವರು ಬೇಕು ಬೇಡಗಳನ್ನು ಪೂರೈಸುವ, ಪ್ರೀತಿ ತೋರುವ ಅಪ್ಪ ಅಮ್ಮ ಜೊತೆಗಿಲ್ಲದ ಅಸುರಕ್ಷಿತ ವಾತಾವರಣ. ಇನ್ನೊಂದೆಡೆ
ಸಾಮಾಜಿಕವಾಗಿ ಪಡಬೇಕಾದ ಕಷ್ಟಗಳು.

ಇರುವಷ್ಟರಲ್ಲಿ ಜೀವನವನ್ನು ಸುಂದರವಾಗಿ ಕಳೆಯಬಹುದಾಗಿದ್ದ ದಂಪತಿ, ಸ್ವಾರ್ಥಕ್ಕೆ ಬಿದ್ದು ಘೋರ ದುರಂತಕ್ಕೆ ಕಾರಣರಾಗಿ, ಜೈಲು ಪಾಲಾಗಿದ್ದಾರೆ. ಏನೂ ಅರಿಯದ ಮಕ್ಕಳು ತಮ್ಮದಲ್ಲದ ತಪ್ಪಿಗೆ ಶಿಕ್ಷೆ ಅನುಭವಿಸಬೇಕಾಗಿದೆ. ಮಗಳು ಇಂಜಿನಿಯರಿಂಗ್‌ ವ್ಯಾಸಂಗ ಪೂರೈಸಬೇಕಾಗಿದೆ. ಪುತ್ರ ಈಗಿನ್ನೂ 7ನೇ ತರಗತಿಯಲ್ಲಿ ಓದುತ್ತಿದ್ದು ತಂದೆ ತಾಯಿಯ ಸಾಂಗತ್ಯದಲ್ಲಿರಬೇಕಾದ ಬಾಲಕ ಕಿರಿಯ ವಯಸ್ಸಿನಲ್ಲೇ ತೀವ್ರ ಯಾತನೆ ಅನುಭವಿಸಬೇಕಾಗಿದೆ. 

ಟಾಪ್ ನ್ಯೂಸ್

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.