ಜನೌಷಧ ನಂಬಿ ಬಂದರೆ ಜೀವ ಉಳಿಯದು!

ಕೋಟೆಯಲ್ಲಿ ಇದ್ದೂ ಇಲ್ಲದಂತಿರುವ ಜನೌಷಧಿ ಕೇಂದ್ರ ; ರೋಗಿಗಳಿಗೆ ಬೇಕಾದ ಔಷಧ

Team Udayavani, Sep 2, 2021, 3:47 PM IST

jan-aushadhi-kendra

ಎಚ್‌.ಡಿ.ಕೋಟೆ: ಪಟ್ಟಣದಲ್ಲಿ ರಿಯಾಯಿತಿ ದರದಲ್ಲಿ ಮಾತ್ರೆ, ಟಾನಿಕ್‌ ಪೂರೈಸಲು ಜನೌಷಧಿ (ಜನರಿಕ್‌ ಮಳಿಗೆ) ಕೇಂದ್ರವನ್ನು
ತೆರೆಯಲಾಗಿದ್ದು, ನೆಪ ಮಾತ್ರಕ್ಕೆ ಕಾರ್ಯನಿರ್ವಹಿಸುತ್ತಿದೆ. ಸಕಾಲದಲ್ಲಿ ಮಳಿಗೆ ಬಾಗಿಲು ಕೂಡ ತೆರೆಯುವುದಿಲ್ಲ. ಜನರಿಗೆ ಅಗತ್ಯವಿರುವ ಔಷಧಗಳು ಕೂಡ ಸಿಗುತ್ತಿಲ್ಲ. ಕೆಲವೇ ಕೆಲವು ಮಾತ್ರೆಗಳ ದಾಸ್ತಾನು ಇರುವುದರಿಂದ ಜನರಿಗೆ ಅಷ್ಟೇನು ಉಪಯೋಗ ಆಗುತ್ತಿಲ್ಲ. ಜನೌಷಧಿ ಕೇಂದ್ರದ ಆಶಯವೇ ಈಡೇರುತ್ತಿಲ್ಲ.

ನಿಯಮಾನುಸಾರು ಜನೌಷಧ ಮಳಿಗೆಯಲ್ಲಿ 1,500 ಔಷಧಗಳನ್ನು ಮಾರಾಟ ಮಾಡಲು ಅವಕಾಶವಿದೆ. ಆದರೆ, ಈ ಮಳಿಗೆಯಲ್ಲಿ ಅರ್ಧದಷ್ಟು ಔಷಧಗಳು ಕೂಡ ಸಿಗುವುದಿಲ್ಲ. ರಿಯಾಯಿತಿ ದರದಲ್ಲಿ ಔಷಧ ಸಿಗುತ್ತದೆ ಎಂದು ನಂಬಿ ಬಂದರೆ ಬರಿಗೈನಲ್ಲಿ ನಿರಾಸೆಯಿಂದ ಹೋಗಬೇಕಾದ ಪರಿಸ್ಥಿತಿ ಇದೆ. ಮಳಿಗೆ ಆರಂಭಿಸಿ ಮೂರ್‍ನಾಲ್ಕು ವರ್ಷಗಳು ಕಳೆದಿದ್ದರೂ ಇಂದಿಗೂನಾಮಫ‌ಲಕಅಳವಡಿಸಿಲ್ಲ.ಔಷಧ ಕೇಂದ್ರಇದೆಎಂಬುದೇ ಜನ ಸಾಮಾನ್ಯರಿಗೆ ತಿಳಿಯುತ್ತಿಲ್ಲ. ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆ ತನಕ ಕಾರ್ಯನಿರ್ವಹಿಸಬೇಕು ಎಂಬ ನಿಯಮವಿದ್ದರೂ ಇದ್ಯಾವುದೂ ಇಲ್ಲಿ ಪಾಲನೆಯಾಗುತ್ತಿಲ್ಲ. ಈ ನಡುವೆ ಬೆರಳೆಣಿಕೆ ಯಷ್ಟು ಔಷಧಗಳು ಮಾತ್ರ ಲಭ್ಯವಿದ್ದು, ಜನರಿಗೆ ತುರ್ತು ಬೇಕಾದ ಮಾತ್ರೆಗಳೇ ಸಿಗುತ್ತಿಲ್ಲ.

ತಾಲೂಕಿನಲ್ಲಿ ಹಿಂದುಳಿದ ವರ್ಗದವರು ಹೆಚ್ಚಿನ ಸಂಖ್ಯೆಯಲ್ಲಿದ್ದು, ರಕ್ತದೊತ್ತಡ, ಮಧುಮೇಹ ಮತ್ತಿತರ ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಕೂಲಿ ಕಾರ್ಮಿಕರೇ ತಾಲೂಕಿನಲ್ಲಿ ಬಹುಸಂಖ್ಯೆಯಲ್ಲಿದ್ದು, ದುಬಾರಿ ಹಣ ಕೊಟ್ಟು ಮೆಡಿಕಲ್‌ ಸ್ಟೋರ್‌ಗಳಲ್ಲಿ ಔಷಧ ಖರೀದಿಸು ವಷ್ಟಆರ್ಥಿಕವಾಗಿ ಶಕ್ತರಲ್ಲ. ಜನೌಷಧಕೇಂದ್ರ ತೆರೆದಾಗಖುಷಿಪಟ್ಟಿದ್ದ ಜನರು ಇದೀಗ ತಮಗೆ ಬೇಕಾದ ಔಷಧ ಲಭಿಸದಕಾರಣ ಹಿಡಿಶಾಪ ಹಾಕುತ್ತಿರುವುದು ಸಾಮಾನ್ಯವಾಗಿದೆ.

ಇದನ್ನೂ ಓದಿ:‘ಹ್ಯಾಪಿಲಿ ಮ್ಯಾರೀಡ್‌’ ಸ್ಟೋರಿ: ಪೃಥ್ವಿ ಅಂಬಾರ್‌-ಮಾನ್ವಿತಾ ಕಾಮತ್‌ ಜೋಡಿಯ ಹೊಸ ಚಿತ್ರ

ಜನೌಷಧ ಕೇಂದ್ರದ ಮುಂದೆ ಬೆಳಗ್ಗೆ 10 ಗಂಟೆಯಿಂದ ಕಾಯುತ್ತಿದ್ದೇನೆ. ಮಧ್ಯಾಹ್ನ ಕಳೆದರೂ ಬಾಗಿಲು ತೆರೆದಿಲ್ಲ. ಈ ದಿನ ರಜಾ ಎಂಬ ಮಾಹಿತಿ ಕೂಡ ಇರುವುದಿಲ್ಲ. ಸಮಯ ಪಾಲನೆಯೂ ಇರುವುದಿಲ್ಲ. ಬೇಕಾದ ಔಷಧಗಳು ಸಿಗುವುದಿಲ್ಲ. ಹೀಗೆ ಬೇಕಾಬಿಟ್ಟಿ ಸೇವೆ
ನೀಡುವುದಾದರೆ ಜನೌಷಧಕೇಂದ್ರವನ್ನಾದರೂ ಏಕೆ ತೆರೆಯಬೇಕಿತ್ತು ಎಂದು ಸ್ಥಳೀಯರಾದ ಉಮೇಶ್‌ ಜೀವಕ ಮತ್ತಿತರರು ಪ್ರಶ್ನಿಸಿದ್ದಾರೆ.
ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಈ ಬಗ್ಗೆ ಗಮನ ಹರಿಸಿ ಜನರಿಗೆ ಉತ್ತಮ ಸೇವೆ ಸಿಗುಂತೆ ಜನೌಷಧ ಮಳಿಗೆ
ಕಾರ್ಯನಿರ್ವಹಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಜನೌಷಧ ಕೇಂದ್ರದ
ಆಶಯ ಈಡೇರಲಿ
ಜನರಿಗೆ ರಿಯಾಯಿತಿ ದರಲ್ಲಿ ಮಾತ್ರೆಗಳು, ಟಾನಿಕ್‌ಗಳು ತಲುಪಿಸುವ ಆಶಯದೊಂದಿಗೆಕೇಂದ್ರ ಸರ್ಕಾರದ ಮಹತ್ವಾ ಕಾಂಕ್ಷಿ ಜನೌಷಧಕೇಂದ್ರ ತೆರೆಯಲಾಗಿದೆ. ಆದರೆ, ಇಲ್ಲಿ ಸೇವೆಯೇ ಅಸಮರ್ಪಕವಾಗಿದೆ. ಹೀಗಾಗಿ ಜನರು ಮಳಿಗೆಯ ಕಾರ್ಯವೈಖರಿಗೆ ಬೇಸತ್ತಿದ್ದಾರೆ. ಈ ಧೋರಣೆ ಯನ್ನು ಬದಲಿಸಿ ಕೊಂಡು ಜನಸ್ನೇಹಿಯಾಗಿ ಕಾರ್ಯನಿರ್ವಹಿಸಬೇಕಿದೆ. ಇಲ್ಲಿ ತೆರೆದಿರುವ ಮಳಿಗೆಗೆ ಮೊದಲ ನಾಮಫ‌ಲಕ ಅಳವಡಿಸಬೇಕು. ಸಕಾಲದಲ್ಲಿ ಬಾಗಿಲು ತೆರೆಯಬೇಕು. ಮಾರಾಟಗಾರರ ಮೊಬೈಲ್‌ ಸಂಖ್ಯೆ ನಮೂದಿಸಬೇಕು. ಈ ಭಾಗದ ಜನರಿಗೆ ತುರ್ತು ಬೇಕಿರುವ ಔಷಧ ಗಳು ಸಿಗುವಂತಾಗಬೇಕು.ಕಾಲ ಕಾಲಕ್ಕೆ ಪರಿಶೀಲನೆ ನಡೆಸಿ ಎಲ್ಲ ರೀತಿಯ ಔಷಧ ದಾಸ್ತಾನು ಇರುವಂತೆ ನೋಡಿಕೊಳ್ಳಬೇಕು. ಜನರು ಮೆಡಿಕಲ್‌ ಸ್ಟೋರ್‌ಗಳನ್ನು ಅವಲಂಬಿಸುವುದನ್ನು ತಪ್ಪಿಸಬೇಕಿದೆ.

ಎಚ್‌.ಡಿ.ಕೋಟೆ ತಾಲೂಕಿಗೆ ಜನ ಔಷಧಕೇಂದ್ರ ಮಂಜೂರಾಗಿರುವುದು ವರದಾನ. ಮಳಿಗೆಯಲ್ಲಿ 1,400ಕ್ಕೂ ಅಧಿಕ ಔಷಧಗಳನ್ನು ಮಾರಾಟ ಮಾಡಲು ಅವಕಾಶ ಇದೆ. ಆದರೆ, ಇಲ್ಲಿಕೇವಲ 400 ಔಷಧಗಳು ಮಾತ್ರ ಲಭ್ಯ ಇವೆ ಎಂಬ ಆರೋಪಗಳುಕೇಳಿ ಬಂದಿವೆ. ಈ ಕುರಿತು ಔಷಧ ಕೇಂದ್ರದ ಮುಖ್ಯಸ್ಥರಿಗೆ ಮಾಹಿತಿ ನೀಡಿದ್ದರೂ ಉಪಯೋಗವಾಗಿಲ್ಲ.
-ಡಾ| ರವಿಕುಮಾರ್‌, ತಾಲೂಕು ಆರೋಗ್ಯಾಧಿಕಾರಿ

-ಎಚ್‌.ಬಿ.ಬಸವರಾಜು

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.