ಡಿಸಿ ರೋಹಿಣಿ ಸಿಂಧೂರಿ- ಶಾಸಕರ ಮುನಿಸಿಗೆ ಬಲಿಯಾದ ಜನಸ್ಪಂದನ ಕಾರ್ಯಕ್ರಮ!
Team Udayavani, Nov 30, 2020, 11:37 AM IST
ಮೈಸೂರು: ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮತ್ತು ಜನಪ್ರತಿನಿಧಿಗಳ ಮುನಿಸಿಗೆ ಜನಸ್ಪಂದನ ಕಾರ್ಯಕ್ರಮವನ್ನೇ ರದ್ದುಗೊಳಿಸಿದ ಘಟನೆ ಮೈಸೂರಿನಲ್ಲಿ ನಡೆದಿದೆ.
ಕಂದಾಯ ಸಚಿವ ಆರ್.ಅಶೋಕ್ ಅವರು ಜನಸ್ಪಂದನ ಕಾರ್ಯಕ್ರಮವನ್ನು ರದ್ದುಗೊಳಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ಜಿಲ್ಲಾಧಿಕಾರಿ ನನ್ನನ್ನು ಭೇಟಿ ಮಾಡಿದ್ದರು. ಈ ವೇಳೆ ಜನಪ್ರತಿನಿಧಿಗಳ ಜತೆ ಹೇಗೆ ನಡೆದುಕೊಳ್ಳಬೇಕು ಎಂಬುದನ್ನು ತಿಳಿಸಿದ್ದೇನೆ. ಜನಸ್ಪಂದನ ಕಾರ್ಯಕ್ರಮದ ಉದ್ಘಾಟನೆಗೆ ಶಾಸಕರನ್ನು ಕರೆಯಲೇಬೇಕು ಎಂದು ಸೂಚಿಸಿದ್ದೇನೆ ಎಂದರು.
ಈಗ ಜನಸ್ಪಂದನ ಕಾರ್ಯಕ್ರಮ ರದ್ದಾಗಿದೆ. ಮುಂದಿನ ದಿನದಲ್ಲಿ ಜಿಲ್ಲಾಧಿಕಾರಿಗಳ ನಡಿಗೆ ಗ್ರಾಮದ ಕಡೆಗೆ ಕಾರ್ಯಕ್ರಮವಿರಲಿದೆ. ಇದಕ್ಕೆ ಮಾರ್ಗಸೂಚಿಗಳನ್ನು ಸಿದ್ದಪಡಿಸಲಾಗುತ್ತಿದೆ. ಈ ವೇಳೆ ಜನರ ಅಹವಾಲಗಳನ್ನು ಕೇಳಲಾಗುತ್ತದೆ ಎಂದು ಹೇಳಿದರು.
ಇದನ್ನೂ ಓದಿ:ಎಚ್ಚರ!…ಸಾರ್ವಜನಿಕ ಸೆಂಟರ್ನಲ್ಲಿ ಮೊಬೈಲ್ ಚಾರ್ಜ್ ಮಾಡುವುದು ಎಷ್ಟು ಸುರಕ್ಷಿತ?
ಜನಸ್ಪಂದನ ಕಾರ್ಯಕ್ರಮ ರದ್ದತಿಯಿಂದ ಸಾರ್ವಜನಿಕರಿಗೆ ಅನಾನೂಕೂಲವಾಗಿದೆ ಎಂದು ನಾನೂ ಒಪ್ಪುತ್ತೇನೆ. ಆದರೆ ಇಂದಿನಿಂದ ಅದು ಆಗುವುದಿಲ್ಲ ಎಂದು ಅಶೋಕ್ ಭರವಸೆ ನೀಡಿದರು.
ಡಿಸಿ ರೋಹಿಣಿ ಸಿಂಧೂರಿ ಅವರು ಶಾಸಕರನ್ನು ಬಿಟ್ಟು ತಾವೇ ಜನಸ್ಪಂದನ ಕಾರ್ಯಕ್ರಮ ನಡೆಸುತ್ತಿದ್ದಾರೆಂದು ಜಿಲ್ಲೆಯ ಶಾಸಕರು ಆರೋಪಿಸಿದ್ದರು. ಬಹಿರಂಗವಾಗಿಯೇ ಜಿಲ್ಲಾಧಿಕಾರಿಗಳ ವಿರುದ್ಧ ಹೇಳಿಕೆ ನೀಡುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ