ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ಪಂಚತಾರಾ ಸೌಲಭ್ಯ


Team Udayavani, Mar 9, 2019, 7:31 AM IST

m3-jayadeva.jpg

ಮೈಸೂರು: ಪಂಚತಾರಾ ಸೌಲಭ್ಯದೊಂದಿಗೆ ಎರಡು ತಿಂಗಳ ಹಿಂದೆ ಆರಂಭವಾಗಿರುವ ಮೈಸೂರಿನ ಶ್ರೀಜಯದೇವ ಹೃದ್ರೋಗ ವಿಜ್ಞಾನಗಳ ಸಂಸ್ಥೆ, ಈ ಭಾಗದ ಜನರಿಗೆ ಸೂಕ್ತಕಾಲದಲ್ಲಿ ಗುಣಮಟ್ಟದ ಚಿಕಿತ್ಸೆ ಒದಗಿಸುತ್ತಿದೆ ಎಂದು ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್‌.ಮಂಜುನಾಥ್‌ ತಿಳಿಸಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರಿನ ಈ ಸುಸಜ್ಜಿತ ಆಸ್ಪತ್ರೆ ಕಟ್ಟಡ 220 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿದ್ದು, ಸಿದ್ದರಾಮಯ್ಯ ಸರ್ಕಾರ 150 ಕೋಟಿ ಅನುದಾನ ನೀಡಿದರೆ, ಜಯದೇವ ಹೃದ್ರೋಗ ಸಂಸ್ಥೆ ತನ್ನ ಆಂತರಿಕ ಸಂಪನ್ಮೂಲದಿಂದ 70 ಕೋಟಿ ಅನುದಾನವನ್ನು ಭರಿಸಿರುವುದು ಹೆಮ್ಮೆಯ ವಿಷಯ ಎಂದರು.

400 ಹಾಸಿಗೆಗಳ ಸಾಮರ್ಥ್ಯವುಳ್ಳ ಈ ನೂತನ ಆಸ್ಪತ್ರೆಯಲ್ಲಿ ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ದೊರೆಯುವ ಎಲ್ಲಾ ಸೌಲಭ್ಯಗಳೂ ದೊರೆಯಲಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಎಲ್ಲಾ ಆರೋಗ್ಯ ಕಾರ್ಯಕ್ರಮಗಳು, ಖಾಸಗಿ ವಿಮೆ ಸೌಲಭ್ಯದಡಿ ಚಿಕಿತ್ಸೆ ನೀಡುತ್ತಿದ್ದು, ಆಸ್ಪತ್ರೆಯಲ್ಲಿ 13 ಮಂದಿ ಹೃದ್ರೋಗ ತಜ್ಞರು, ಆರು ಹೃದಯ ತಜ್ಞರು ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಮೈಸೂರು, ಮಂಡ್ಯ, ಚಾಮರಾಜ ನಗರ, ಕೊಡಗು ಜಿಲ್ಲೆಯ ಜನರಿಗೆ ಮೈಸೂರಿನ ಆಸ್ಪತ್ರೆಯಿಂದ ಅನುಕೂಲವಾಗಿದೆ. ಬೆಂಗಳೂರಿಗೆ ಹತ್ತಿರವಿರುವ ಚನ್ನಪಟ್ಟಣದವರು ಸಂಚಾರದಟ್ಟಣೆ ಕಾರಣದಿಂದಾಗಿ ಚಿಕಿತ್ಸೆಗಾಗಿ ಮೈಸೂರಿಗೆ ಬರುತ್ತಿದ್ದಾರೆ ಎಂದು ತಿಳಿಸಿದರು. 

ತಿಂಗಳಲ್ಲಿ ಆರಂಭ: 700 ಹಾಸಿಗೆಗಳ ಸಾಮರ್ಥ್ಯ ಹೊಂದಿರುವ ಬೆಂಗಳೂರಿನ ಜಯದೇವ ಹೃದ್ರೋಗ ಸಂಸ್ಥೆಯ ಮೇಲೆ ಸಾಕಷ್ಟು ಒತ್ತಡ ಇರುವುದರಿಂದ ಇನ್ಫೋಸಿಸ್‌ ಪ್ರತಿಷ್ಠಾನದಿಂದ 300 ಹಾಸಿಗೆ ಸಾಮರ್ಥ್ಯದ ಕಟ್ಟಡ ನಿರ್ಮಾಣಕ್ಕೆ ಚಾಲನೆ ನೀಡಲಾಗಿದ್ದು, ಇದರೊಂದಿಗೆ ಜಯದೇವ ಆಸ್ಪತ್ರೆ ಒಂದು ಸಾವಿರ ಹಾಸಿಗೆ ಸಾಮರ್ಥ್ಯ ಹೊಂದಿದ ದಕ್ಷಿಣ ಭಾರತದ ಏಕೈಕ ಆಸ್ಪತ್ರೆಯಾಗಲಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ಕಲಬುರ್ಗಿಯಲ್ಲಿ  ಪ್ರಸ್ತುತ 125 ಹಾಸಿಗೆ ಸಾಮರ್ಥ್ಯದಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆ ಕಾರ್ಯ ನಿರ್ವಹಿಸುತ್ತಿದ್ದು, ದಿನೇ ದಿನೇ ಆಸ್ಪತ್ರೆಯ ಮೇಲೆ ಒತ್ತಡ ಹೆಚ್ಚುತ್ತಿರುವ ಕಾರಣ 7ಎಕರೆ ಜಾಗದಲ್ಲಿ 300 ಹಾಸಿಗೆ ಸಾಮರ್ಥ್ಯದ ಹೊಸ ಕಟ್ಟಡ ನಿರ್ಮಾಣಕ್ಕೆ ಮುಂದಾಗಿದ್ದು, ಮೂರ್‍ನಾಲ್ಕು ದಿನಗಳಲ್ಲಿ ಕಟ್ಟಡ ನಿರ್ಮಾಣಕ್ಕೆ ಚಾಲನೆ ದೊರೆಯಲಿದೆ ಎಂದು ತಿಳಿಸಿದರು.

ರಾಷ್ಟ್ರದಲ್ಲಿ ಎನ್‌ಎಬಿಎಚ್‌ ರ್‍ಯಾಂಕಿಂಗ್‌ ಪಡೆದಿರುವ ಏಕೈಕ ಆಸ್ಪತ್ರೆ ನಮ್ಮ ಜಯದೇವ ಹೃದ್ರೋಗ ವಿಜ್ಞಾನಗಳ ಸಂಸ್ಥೆ ಎಂದರು. ಜಯದೇವ ಹೃದ್ರೋಗ ವಿಜ್ಞಾನಗಳ ಸಂಸ್ಥೆ ಮೈಸೂರಿನ ಮುಖ್ಯಸ್ಥ ಡಾ.ಕೆ.ಎಸ್‌.ಸದಾನಂದ, ಪ್ರಾದೇಶಿಕ ವೈದ್ಯಾಧಿಕಾರಿ ಡಾ.ಪಾಂಡುರಂಗ ಹಾಜರಿದ್ದರು.

ದೈಹಿಕ ಚಟುವಟಿಕೆ ಇಲ್ಲದ್ದಕ್ಕೆ ಹೃದ್ರೋಗ ಸಂಬಂಧಿ ಕಾಯಿಲೆ: ವಾಯುಮಾಲಿನ್ಯ, ದೈಹಿಕ ಚಟುವಟಿಕೆಗಳಿಲ್ಲದಿರುವುದು, ಒತ್ತಡದ ಜೀವನ ಶೈಲಿಯಿಂದಾಗಿ 40 ವರ್ಷದೊಳಗಿನವರು ಹೃದಯ ಸಂಬಂಧಿ ಕಾಯಿಲೆಗಳಿಗೆ ಒಳಗಾಗುತ್ತಿದ್ದಾರೆ.  ದೇಶದ ದೆಹಲಿ, ನಾಗಪುರ, ಬನಾರಸ್‌, ಕರ್ನಾಟಕದಲ್ಲಿ ಬೆಂಗಳೂರು ಹಾಗೂ ತುಮಕೂರು ವಲಯದಲ್ಲಿ ಅತಿ ಹೆಚ್ಚಿನ ವಾಯು ಮಾಲಿನ್ಯವಿದ್ದು,

ಈ ವಾಯುಮಾಲಿನ್ಯವೇ ಹೃದಯಾಘಾತಕ್ಕೆ ಪ್ರಮುಖ ಕಾರಣವಾಗಿದೆ. ಜೊತೆಗೆ ಭಾರತದಲ್ಲಿ ಶೇ.52ರಷ್ಟು ಮಂದಿ ದೈಹಿಕ ಚಟುವಟಿಕೆಗಳಿಲ್ಲದಿರುವುದೂ ಹೃದ್ರೋಗಕ್ಕೆ ಕಾರಣವಾಗಿದೆ. ಇದಕ್ಕಾಗಿ ನಿತ್ಯ ಕನಿಷ್ಠ 30 ನಿಮಿಷವಾದರೂ ನಡೆಯುವ ಅಗತ್ಯವಿದೆ. ಸೋಷಿಯಲ್‌ ಮೀಡಿಯಾದಿಂದಾಗಿ ಯುವ ವೈದ್ಯರಲ್ಲೂ ವೃತ್ತಿಯ ಒತ್ತಡ ಹೆಚ್ಚಿದೆ ಎಂದು ಡಾ.ಸಿ.ಎನ್‌.ಮಂಜುನಾಥ್‌ ಹೇಳಿದರು.

ಮಾಸ್ಟರ್‌ ಹೆಲ್ತ್‌ ಚೆಕ್‌ ಅಪ್‌: ಮಾಸ್ಟರ್‌ ಹೆಲ್ತ್‌ ಚೆಕ್‌ ಅಪ್‌ನಲ್ಲಿ 2 ಗಂಟೆ ಅವಧಿಯಲ್ಲಿ ಹೃದ್ರೋಗಕ್ಕೆ ಸಂಬಂಧಿಸಿದ ಎಲ್ಲಾ ರೀತಿಯ ತಪಾಸಣೆ ಮಾಡಲಾಗುತ್ತದೆ. 4ಕ್ಯಾತಲ್ಯಾಬ್ಸ್, 4 ಶಸ್ತ್ರಚಿಕಿತ್ಸಾ ಕೊಠಡಿ, 24ಗಂಟೆಗಳ ಐಸಿಯು ಸೌಲಭ್ಯವಿದೆ. ಪ್ರಸ್ತುತ ನಿತ್ಯ 400 ರಿಂದ 500 ಜನ ಹೊರ ರೋಗಿಗಳು ಚಿಕಿತ್ಸೆಗೆ ಬರುತ್ತಿದ್ದು, ವಾರ್ಷಿಕ 5650 ಜನ ಒಳ ರೋಗಿಗಳಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪ್ರತಿ ನಿತ್ಯ 30 ರಿಂದ 35 ಜನರಿಗೆ ಆಂಜಿಯೋ ಗ್ರಾಂ, ಆಂಜಿಯೋ ಪ್ಲಾಸ್ಟಿ ಮಾಡಲಾಗುತ್ತಿದ್ದು, ಮೂರು ತೆರೆದ ಹೃದಯ ಶಸ್ತ್ರಚಿಕಿತ್ಸೆ ಮಾಡಲಾಗುತ್ತಿದೆ. ಕಳೆದ ಎರಡು ತಿಂಗಳಲ್ಲಿ 80 ಜನರಿಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಯಶಸ್ಸಿನ ಪ್ರಮಾಣ ಶೇ.99ರಷ್ಟಿದೆ ಎಂದು ಡಾ.ಸಿ.ಎನ್‌.ಮಂಜುನಾಥ್‌ ತಿಳಿಸಿದರು.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.