ಕಾಂಗ್ರೆಸ್‌ಗೆ ಜೆಡಿಎಸ್‌ ಎದುರಾಳಿ, ಬಿಜೆಪಿ ಆಟಕ್ಕುಂಟು ಲೆಕ್ಕಕಿಲ್ಲ


Team Udayavani, Nov 13, 2019, 3:00 AM IST

congressge-jds

ಹುಣಸೂರು: ಉಪಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಜೆಡಿಎಸ್‌ ಎದುರಾಳಿಯಾಗಿದ್ದು, ಮೇಲ್ನೋಟಕ್ಕೆ ಬಿಜೆಪಿ ರೇಸ್‌ನಲ್ಲಿರುವಂತೆ ಕಾಣುತ್ತದೆ. ಹಲವಾರು ಚುನಾವಣೆ, ಉಪ ಚುನಾವಣೆಯನ್ನು ಕಂಡಿರುವ ತಮಗೆ ಎಲ್ಲವನ್ನೂ ಎದುರಿಸುವ ಶಕ್ತಿ ಇದೆ ಎಂದು ಕಾಂಗ್ರೆಸ್‌ ಅಭ್ಯರ್ಥಿ, ಮಾಜಿ ಶಾಸಕ ಎಚ್‌.ಪಿ.ಮಂಜುನಾಥ್‌ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾನು ಕಳೆದ ಚುನಾವಣೆಯಲ್ಲಿ ಅಪಪ್ರಚಾರದಿಂದ ಸೋತಿದ್ದೇನೆ. ಹೀಗಾಗಿ ಪಕ್ಷದ ಕಾರ್ಯಕರ್ತರು ಸಾಮಾಜಿಕ ಜಾಲತಾಣದಲ್ಲಿ ಯಾರನ್ನೂ ಟೀಕಿಸುವುದು, ಹೀಯಾಳಿಸುವುದು ಬೇಡ, ಬದಲಿಗೆ ತಾವು ಮಾಡಿರುವ ಅಭಿವೃದ್ಧಿ ಕೆಲಸಗಳ ಬಗ್ಗೆ ಜನರಿಗೆ ಮನವರಿಕೆ ಮಾಡಿಕೊಡಿ ಎಂದು ಮನವಿ ಮಾಡಿದರು.

ಈ ಬಾರಿ ಕೈಬಡಲ್ಲ: ತಮ್ಮ ಶಾಸಕತ್ವದ ಅವಧಿಯಲ್ಲಿ ತಾಲೂಕಿನ ಅಭಿವೃದ್ಧಿಗೆ ಶ್ರಮಿಸಿದ್ದು,, ಇದು ಜನಮಾನಸದಲ್ಲಿ ಹಾಸುಹೊಕ್ಕಿದೆ. ತಾವು ಎಲ್ಲಾ ಧರ್ಮ, ಸಮುದಾಯಗಳೊಂದಿಗೆ ವಿಶ್ವಾಸದಲ್ಲಿದ್ದು, ಸೋತರೂ ಕೂಡ ಕ್ಷೇತ್ರದ ಜನರ ಸಂಕಷ್ಟಕ್ಕೆ ಸ್ಪಂದಿಸಿದ್ದೇನೆ. ಈ ಬಾರಿ ಕೈಬಿಡುವುದಿಲ್ಲ ಎಂದುವಿಶ್ವಾಸ ವ್ಯಕ್ತಪಡಿಸಿದರು.

15ರಿಂದ ಪ್ರಚಾರ: ನಾನು, ನನ್ನ ತಾಲೂಕು, ನನ್ನ ಜನ ಎಂಬ ಸಿದ್ಧಾಂತದಡಿ ಈವರೆವಿಗೂ ಜನಸೇವೆ ಮಾಡಿಕೊಂಡು ಬಂದಿದ್ದು, ನ.15 ಶುಕ್ರವಾರ ಬಿಳಿಕೆರೆ ಹೋಬಳಿಯ ಕೊಮ್ಮೇಗೌಡನಕೊಪ್ಪಲಿನ ಮಹದೇಶ್ವರಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ, ಪ್ರಚಾರ್ಯ ಕಾರ್ಯ ಆರಂಭಿಸಲಾಗುವುದು. ನಂತರ ಎಲ್ಲಾ 274 ಬೂತ್‌ಗಳಲ್ಲೂ ದಿನಕ್ಕೆ ನಾಲ್ಕು ಗ್ರಾಮ ಪಂಚಾಯ್ತಿಗಳಂತೆ ಭೇಟಿ ನೀಡಲಾಗುವುದು ಹಾಗೂ ಕೊನೆಯ ನಾಲ್ಕುದಿನ ನಗರದಲ್ಲಿ ಪ್ರಚಾರ ನಡೆಸಿ ಮತಯಾಚಿಸಲಾಗುವುದು ಎಂದರು.

ತಮ್ಮ ಪರ ಪಕ್ಷದ ರಾಜ್ಯಾಧ್ಯಕ್ಷ ದಿನೇಶ್‌ಗುಂಡೂರಾವ್‌, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್‌, ಡಿ.ಕೆ.ಶಿವಕುಮಾರ್‌, ಮಹದೇವಪ್ಪ, ಸತೀಶ್‌ ಜಾರಕಿಹೊಳಿ, ಜಮೀರ್‌ ಅಹಮದ್‌ ಸೇರಿದಂತೆ ಪಕ್ಷದ ಎಲ್ಲ ನಾಯಕರು ಪ್ರಚಾರಕ್ಕೆ ಆಗಮಿಸುವರು, ಕೆ.ಪಿ.ಸಿ.ಸಿ.ಉಸ್ತುವಾರಿಯಾಗಿ ಎಚ್‌.ಸಿ.ಮಹದೇವಪ್ಪ ನೇತೃತ್ವದಲ್ಲಿ ಆರ್‌ ಧ್ರುವನಾರಾಯಣ್‌, ವೆಂಕಟೇಶ್‌, ಅನಿಲ್‌ ಚಿಕ್ಕಮಾದು, ಡಾ.ಯತೀಂದ್ರ, ರಾಣಿ ಸತೀಶ್‌, ಡಿಸಿಸಿ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್‌ ಮತ್ತಿತರರು ಚುನಾವಣಾ ಉಸ್ತುವಾರಿವಹಿಸುವರು.

ಬಿಜೆಪಿ ವಿರೋಧಿ ಅಲೆ: ಜಿಲ್ಲಾಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್‌ ಮಾತನಾಡಿ, ಸ್ವಹಿತಕ್ಕಾಗಿ ರಾಜೀನಾಮೆ ನೀಡಿರುವ ಎಲ್ಲಾ ಕ್ಷೇತ್ರಗಳಲ್ಲೂ ಅವರಿಗೆ ಜನ ವಿರೋಧವಿದೆ. ಕಾಂಗ್ರೆಸ್‌ಗೆ ಜನಾಭಿಪ್ರಾಯವಿದ್ದು, ದೊಡ್ಡ ಅಲೆಯೇ ಎದ್ದಿದೆ. ಇದನ್ನು ಸರಕಾರವೇ ನಡೆಸಿರುವ ಸರ್ವೆ, ಇಂಟಲಿಜನ್ಸ್‌ ವರದಿಯಿಂದ ಬಹಿರಂಗವಾಗಿದೆ.

ತಾವು ಈ ಚುನಾವಣೆಯನ್ನು ಪಕ್ಷವು ಗಂಭೀರವಾಗಿ ಪರಿಗಣಿಸಿದ್ದು, ಮುಂದೆ ತಾಲೂಕಿನ ದೊಡ್ಡ ಗುಂಪೊಂದು ಪಕ್ಷ ಸೇರಲಿದೆ ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಜಿಪಂ ಸದಸ್ಯರಾದ ಕಟ್ಟನಾಯಕ, ಸಾವಿತ್ರಿ ಮಂಜು, ತಾಪಂ ಅಧ್ಯಕ್ಷೆ ಪದ್ಮಮ್ಮ, ತಾಲೂಕು ಕಾಂಗ್ರೆಸ್‌ ಮುಖಂಡರಾದ‌ ನಾರಾಯಣ್‌, ಶಿರೇನಹಳ್ಳಿ ಬಸವರಾಜು, ಜಯರಾಮ್‌ ಇತರರಿದ್ದರು.

ಇಂದು ನಾಮಪತ್ರ ಸಲ್ಲಿಕೆ: ಉಪ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ತಾವು ಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ಧಿ ಕೆಲಸಗಳೇ ತಮಗೆ ಶ್ರೀರಕ್ಷೆಯಾಗಿದೆ. ಬುಧವಾರ ಬೆಳಗ್ಗೆ ಬಿಳಿಕೆರೆಯ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಾಗುವುದು.

ಬಳಿಕ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಮತ್ತು ಮಾಜಿ ಶಾಸಕ ದಿ.ಚಿಕ್ಕಮಾದು ಸಮಾಧಿಗೆ ನಮನ ಸಲ್ಲಿಸಿದ ನಂತರ ಕನ್ಯಕಾಪರಮೇಶ್ವರಿ ದೇವಾಲಯ, ಸಾಯಿಬಾಬ ಮಂದಿರದಲ್ಲಿ ಪೂಜೆ ಸಲ್ಲಿಸಿದ ನಂತರ ಬೆಳಗ್ಗೆ 10ಗಂಟೆಗೆ ಕಾಂಗ್ರೆಸ್‌ ಕಚೇರಿಯಲ್ಲಿ ನಡೆಯುವ ಮುಖಂಡರು ಹಾಗೂ ಕಾರ್ಯಕರ್ತರ ಸಭೆ ನಡೆಸಲಾಗುವುದು. ನಂತರ ತಾಲೂಕು ಕಚೇರಿಗೆ ತೆರಳಿ 11 ರಿಂದ 12 ಗಂಟೆಯೊಳಗೆ ನಾಮಪತ್ರ ಸಲ್ಲಿಸಲಾಗುವುದು ಎಂದು ಕಾಂಗ್ರೆಸ್‌ ಅಭ್ಯರ್ಥಿ ಮಂಜುನಾಥ್‌ ತಿಳಿಸಿದರು.

ಟಾಪ್ ನ್ಯೂಸ್

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.