ಜನಪ್ರತಿನಿಧಿಗಳ ಕಡೆಗಣನೆ ಖಂಡಿಸಿ ಜಿಪಂ ಮುತ್ತಿಗೆಗೆ ನಿರ್ಣಯ


Team Udayavani, Jun 20, 2019, 3:00 AM IST

janaprati

ತಿ.ನರಸೀಪುರ: ತಾಲೂಕು ಪಂಚಾಯಿತಿಯ ಸಾಮಾನ್ಯ ಸಭೆಯಲ್ಲಿನ ನಿರ್ಣಯ, ಸಭಾ ನಡವಳಿಗಳಿಗೆ ಜಿಪಂ ಹಾಗೂ ಜಿಲ್ಲಾಡಳಿತ ಕಿಂಚಿತ್ತೂ ಗಮನವನ್ನು ನೀಡದೆ ಚುನಾಯಿತ ಜನಪ್ರತಿನಿಧಿಗಳ ಹಕ್ಕಿಗೆ ಚ್ಯುತಿಯನ್ನುಂಟುಮಾಡಿ, ಅಗೌರವ ತಂದಿರುವ ಹಿನ್ನೆಲೆಯಲ್ಲಿ ಜಿಪಂ ಕಚೇರಿಗೆ ಮುಂಭಾಗ ಧರಣಿ ಕುಳಿತು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಮುತ್ತಿಗೆ ಹಾಕಲು ಚುನಾಯಿತ ಪ್ರತಿನಿಧಿಗಳ ಸಭೆಯಲ್ಲಿ ನಿರ್ಧರಿಸಲಾಯಿತು.

ತಾಪಂ ಸಭಾಂಗಣದಲ್ಲಿ ಅಧ್ಯಕ್ಷ ಆರ್‌.ಚಲುವರಾಜು ಅಧ್ಯಕ್ಷತೆಯಲ್ಲಿ ನಡೆದ 2019-20ನೇ ಸಾಲಿನ ಸಮಿತಿ ಮತ್ತು ಸಮಾಲೋಚನೆ ಯೋಜನೆಯಡಿಯಲ್ಲಿ ಚುನಾಯಿತ ಪ್ರತಿನಿಧಿಗಳ ಸಭೆಯಲ್ಲಿ ಸದಸ್ಯ ಎಂ.ಚಂದ್ರಶೇಖರ್‌ ಪ್ರಸ್ತಾಪದಂತೆ ತಾಲೂಕು ಮಟ್ಟದ ಜನಪ್ರತಿನಿಧಿಗಳ ಸಭೆಯಲ್ಲಿನ ನಿರ್ಣಯ ಮತ್ತು ನಡವಳಿಗೆ ಕವಡೆ ಕಾಸಿನ ಕಿಮ್ಮತ್ತನ್ನು ನೀಡದ ಜಿಪಂ ಆಡಳಿತಕ್ಕೆ ಚುರುಕು ಮುಟ್ಟಿಸಲು ಧರಣಿ ನಡೆಸಿ ಸಿಇಒ ಅವರಿಗೆ ಮುತ್ತಿಗೆ ಹಾಕಲು ನಿರ್ಣಯ ಕೈಗೊಳ್ಳಲಾಯಿತು.

ಮಾದರಿ ಹೋರಾಟ: ಸದಸ್ಯ ಎಂ.ಚಂದ್ರಶೇಖರ್‌ ಮಾತನಾಡಿ, ಜಿಪಂ ಆಡಳಿತ ಜಿಲ್ಲಾ ಮಟ್ಟದ ದೊಡ್ಡ ಜನಪ್ರತಿನಿಧಿಗಳ ಸಂಸ್ಥೆಯಾಗಿದೆ. ಸಿಇಒಗೆ ಲಕ್ಷಾಂತರ ರೂ. ಸಂಬಳ, ಕಾರು ಮತ್ತಿತರ ಸವಲತ್ತು ನೀಡಲಾಗಿದೆ. ಆದರೆ, ತಾಲೂಕು ಮಟ್ಟದ ಸಭೆಗಳಲ್ಲಿ ತೆಗೆದುಕೊಂಡ ನಿರ್ಧಾರಗಳ ಬಗ್ಗೆ ಅವರು ಕ್ಯಾರೆ ಎನ್ನುತ್ತಿಲ್ಲ. ಸಮಸ್ಯೆಗಳ ದೂರು ಕೊಟ್ಟರೆ ಮುಕ್ತಾಯದ ಹಿಂಬರಹ ನೀಡುತ್ತಾರೆ.

ಜಿಲ್ಲೆಯ ಯಾವೊಂದು ತಾಲೂಕು ಪಂಚಾಯಿತಿಗೆ ಭೇಟಿ ನೀಡಿಲ್ಲ, ಗ್ರಾಮೀಣ ಪ್ರದೇಶಗಳಿಗೆ ಬಂದೇ ಇಲ್ಲ. ಜನರಿಂದ ಆಯ್ಕೆಗೊಂಡವರು ಅರ್ಜಿ ಹಿಡಿದು ಅವರ ಮುಂದೆ ಹೋಗಬೇಕಾಗಿದೆ. ಅಂತಹವರಿಗೆ ಪ್ರತಿಭಟನೆ ಮೂಲಕ ಪಾಠ ಕಲಿಸಬೇಕು. ಜಿಲ್ಲೆಗೆ ನಮ್ಮ ಹೋರಾಟ ಮಾದರಿಯಾಗಬೇಕು ಎಂದು ತಿಳಿಸಿದರು.

ಸಭಾ ನಿರ್ಣಯ ರವಾನಿಸಿ: ಮತ್ತೋರ್ವ ಸದಸ್ಯ ಎಂ.ರಮೇಶ ಮಾತನಾಡಿ, ಕುಂಭಮೇಳದಲ್ಲೂ ಶಿಷ್ಟಾಚಾರ ನೆಪದಲ್ಲಿ ತಾಪಂ ಸದಸ್ಯರನ್ನು ಕಡೆಗಣಿಸಲಾಯಿತು. ಜನಪ್ರತಿನಿಧಿಗಳನ್ನು ಗೌರಸಿದ ತಹಶೀಲ್ದಾರ್‌ ಹಾಗೂ ಕಾರ್ಯನಿರ್ವಹಕ ಅಧಿಕಾರಿ ಇಬ್ಬರ ವಿರುದ್ಧವೂ ಕ್ರಮ ಜರುಗಿಸುವಂತೆ ಕಳೆದ ಸಾಮಾನ್ಯ ಸಭೆಯಲ್ಲಿ ನಿರ್ಣಯ ಕೈಗೊಂಡರೂ ಯಾವುದೇ ಪ್ರಯೋಜನವಾಗಿಲ್ಲ.

ಜಿಲ್ಲಾಡಳಿತಕ್ಕೆ ನಾವುಗಳು ಅಷ್ಟೊಂದು ಕಡೆಯಾಗಿ ಕಾಣಿಸುತ್ತಿವಾ?, ಅವರೆಲ್ಲರ ಬೇಜವಾಬ್ದಾರಿಗೆ ಮುತ್ತಿಗೆ ಪ್ರತಿಭಟನೆ ಹೋರಾಟದಿಂದಲೇ ಉತ್ತರ ನೀಡಬೇಕು. ಅದಕ್ಕೂ ಮೊದಲು ಸಭಾ ನಿರ್ಣಯ ಮತ್ತು ನಡವಳಿಯನ್ನು ಜಿಪಂ ಕಚೇರಿಗೆ ರವಾನಿಸಬೇಕು ಎಂದು ಆಗ್ರಹಿಸಿದರು.

ಸಮಾಜ ಕಲ್ಯಾಣಾಧಿಕಾರಿಗಳ ತಾತ್ಸಾರ: ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳ ಪಾಲಕರು ಮತ್ತು ಸಹಾಯಕ ನಿಯೋಜನೆ ಮತ್ತು ವರ್ಗಾವಣೆಯಲ್ಲಿ ಸಮಾಜ ಕಲ್ಯಾಣಾಧಿಕಾರಿಗಳು ತಾತ್ಸಾರ ಮಾಡುತ್ತಿದ್ದಾರೆ ಎಂದು ಸದಸ್ಯರಾದ ಕೆಬ್ಬೆ ರಂಗಸ್ವಾಮಿ ಹಾಗೂ ಎಚ್‌.ಜವರಯ್ಯ ಆರೋಪಿಸಿದರು. ತಾಪಂ ಸದಸ್ಯರ ಸೂಚನೆ ಮತ್ತು ಸಲಹೆಗಳನ್ನು ಧಿಕ್ಕರಿಸುತ್ತಿದ್ದಾರೆ. ಹಾಗಾಗಿ ಹಲವು ವಿದ್ಯಾರ್ಥಿ ನಿಲಯಗಳ ಅವ್ಯವಸ್ಥೆಯಿಂದ ಕೂಡಿದ್ದು, ತಾಂತ್ರಿಕ ಸಮಸ್ಯೆಗಳಿಂದ ಇಲಾಖೆಯಲ್ಲಿ ಕೆಲಸ ಕಾರ್ಯಗಳೇ ಕುಂಠಿತಗೊಂಡಿವೆ ಎಂದು ದೂರಿದರು.

ಸಭೆಯಲ್ಲಿ ಪ್ರಭಾರ ಕಾರ್ಯನಿರ್ವಹಕ ಅಧಿಕಾರಿ ನಿಂಗಯ್ಯ, ಸದಸ್ಯರಾದ ಶಿವಮ್ಮ, ನಾಗಮಣಿ, ಪಲ್ಲವಿ, ಚಿನ್ನಮ್ಮ, ಶಿವಮ್ಮ, ಲೋಲಾಕ್ಷಿ, ಕೆಬ್ಬೆ ರಂಗಸ್ವಾಮಿ, ಬಿ.ಸಾಜಿದ್‌ ಅಹಮ್ಮದ್‌, ರತ್ನರಾಜ್‌, ಪುಷ್ಪಪ್ರಭುಸ್ವಾಮಿ, ಲೋಕೋಪಯೋಗಿ ಎಇಇ ಶಿವಶಂಕರಯ್ಯ, ಜಿಪಂ ಎಇಗಳಾದ ಟಿ.ಪ್ರಕಾಶ್‌, ದೇವರಾಜು, ಸಿಡಿಪಿಒ ಬಿ.ಎನ್‌.ಬಸವರಾಜು, ಬಿಇಒ ಎಸ್‌.ಸ್ವಾಮಿ, ಸಹಾಯಕ ಕೃಷಿ ನಿರ್ದೇಶಕ ಸುಂದರಮ್ಮ ಇತರರಿದ್ದರು.

ಜಿಪಂ ಸಿಇಒಗೆ 15 ದಿನ ಗಡುವು: ಸದಸ್ಯರೆಲ್ಲರ ಅಹವಾಲು ಆಲಿಸಿದ ಅಧ್ಯಕ್ಷ ಆರ್‌.ಚಲುವರಾಜು ಮಾತನಾಡಿ, ಈಗಿನ ಸಭೆಯಲ್ಲಿನ ನಿರ್ಣಯವನ್ನು 10 ದಿನಗಳೊಳಗೆ ಜಿಪಂ ರವಾನಿಸಲಾಗುವುದು. ಸಿಇಒ ಬೇಜವಾಬ್ದಾರಿ ವರ್ತನೆ ಮುಂದುವರಿದರೆ 15 ದಿನದೊಳಗೆ ಧರಣಿ ಮತ್ತು ಮುತ್ತಿಗೆ ಹೋರಾಟದ ದಿನವನ್ನು ನಿಗದಿಪಡಿಸಲಾಗುವುದು. ಸದಸ್ಯರೆಲ್ಲರೂ ಒಮ್ಮತದಿಂದ ಪ್ರತಿಭಟನೆಯಲ್ಲಿ ಭಾಗವಹಿಸಬೇಕು. ತಾಲೂಕು ಮಟ್ಟದ ಸಭೆಗಳಿಗೆ ಅಧಿಕಾರಿಗಳು ನಿರಂತರವಾಗಿ ಗೈರಾಗಿರುವ ಬಗ್ಗೆಯೂ ಜಿಲ್ಲಾಧಿಕಾರಿಗೆ ದೂರು ನೀಡಲಾಗುವುದು ಎಂದು ತಿಳಿಸಿದರು.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.