ಸ್ಕೂಟರ್ ನಲ್ಲಿ ನಂಬರ್ ಪ್ಲೇಟ್ ಇಲ್ಲವೆಂದು ಥಳಿಸಿದ ಪೊಲೀಸರು: ಅವಮಾನದಿಂದ ಯುವಕ ಆತ್ಮಹತ್ಯೆ
Team Udayavani, Jun 30, 2020, 12:11 PM IST
ಮೈಸೂರು: ಪೊಲೀಸರ ಕಿರುಕುಳದಿಂದ ಬೇಸತ್ತು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೆ ಆರ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಸುಣ್ಣದ ಕೇರಿ ನಿವಾಸಿ ಕುಮಾರ್ ಎಂಬುವವರ ಪುತ್ರ ದರ್ಶನ್ (17) ಎಂಬಾತನೇ ಆತ್ಮಹತ್ಯೆ ಮಾಡಿಕೊಂಡಿರುವಾತ.
ಈತ ಸ್ಕೂಟರ್ ಹೊಂದಿದ್ದು, ಪೊಲೀಸ್ ತಪಾಸಣೆ ವೇಳೆ ಸ್ಕೂಟರ್ ಹಿಂಬದಿಯಲ್ಲಿ ನಂಬರ್ ಪ್ಲೇಟ್ ಇರಲಿಲ್ಲ. ಇದನ್ನು ಪ್ರಶ್ನಿಸಿದ ಕೆ ಆರ್ ಠಾಣೆ ಪೊಲೀಸರು, ಸ್ಕೂಟರ್ ವಶ ಪಡೆದಿದ್ದರು.
ನಂತರ ಈತನ ಜೊತೆಗಿದ್ದ ಸ್ನೇಹಿತ ರವಿ ಎಂಬಾತನನ್ನ ಮನೆಗೆ ಕಳುಹಿಸಿದ ಪೊಲೀಸರು ದರ್ಶನ್ ಗೆ ಬಳಿಕ ಹಿಗ್ಗಾಮುಗ್ಗಾ ಥಳಿಸಿದ್ದಾರೆ ಎನ್ನಲಾಗಿದೆ. ಇದರಿಂದ ಅವಮಾನ ಸಹಿಸಲಾಗದೆ ಮನೆಗೆ ಬಂದ ದರ್ಶನ್, ಸ್ನಾನದ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಕೆ ಆರ್ ಠಾಣೆಯ ಮುಂದೆ ಮೃತ ದರ್ಶನ್ ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ಮಗನ ಸಾವಿಗೆ ಪೊಲೀಸರು ಕಾರಣರಾದರು ಎಂದು ಆರೋಪಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ