ಪರಸ್ಪರ ಸೋಲಿಸಲು ಪ್ರಯತ್ನಿಸಿಲ್ಲ ಎಂದು ಸಿದ್ದರಾಮಯ್ಯ, ಪರಮೇಶ್ವರ್ ಆಣೆ ಮಾಡಲಿ: ಈಶ್ವರಪ್ಪ
Team Udayavani, Jul 9, 2021, 11:29 AM IST
ಮೈಸೂರು: ಸಿದ್ದರಾಮಯ್ಯ,ಪರಮೇಶ್ವರ ಇಬ್ಬರೂ ಯಾವುದಾದರೂ ದಲಿತರ ಬೀದಿಗೆ ಹೋಗಲಿ. ಸಿದ್ದರಾಮಯ್ಯರನ್ನು ಸೋಲಿಸಲು ನಾನು ಪ್ರಯತ್ನ ಮಾಡಿಲ್ಲವೆಂದು ಪರಮೇಶ್ವರ್ ಹೇಳಲಿ, ಪರಮೇಶ್ವರರನ್ನು ಸೋಲಿಸಲು ನಾನು ಪ್ರಯತ್ನ ಮಾಡಿಲ್ಲವೆಂದು ಸಿದ್ದರಾಮಯ್ಯ ಆಣೆ ಮಾಡಿ ಹೇಳಲಿ ಎಂದು ಸಚಿವ ಕೆ.ಎಸ್ ಈಶ್ವರಪ್ಪ ಸವಾಲೆಸೆದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಲ್ಲಿ ಐವರು ಸ್ವಯಂ ಘೋಷಿತ ಮುಖ್ಯಮಂತ್ರಿಗಳಿದ್ದಾರೆ. ಚುನಾವಣೆಗೆ ಇನ್ನೂ ಒಂದೂವರೆ ವರ್ಷವಿದೆ. ಒಂದೊಂದು ಸಮುದಾಯಕ್ಕೆ ಒಬ್ಬೊಬ್ಬ ನಾಯಕ ಸಿಎಂ ಆಗಬೇಕು ಎಂದು ಘೋಷಣೆ ಮಾಡಿಕೊಳ್ಳುತ್ತಿದ್ದಾರೆ ಎಂದು ಕೈ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.
ಇದನ್ನೂ ಓದಿ:ನಾನೊಬ್ಬ ಕಾಮನ್ ಮ್ಯಾನ್, ಜನ ಸ್ಟಾರ್ ಡಮ್ ಕೊಟ್ಟಿದ್ದಾರಷ್ಟೇ.: ಶಿವಣ್ಣ special ಮಾತು
17 ಮಂದಿ ಕಾಂಗ್ರೆಸ್ ಗೆ ಮತ್ತೆ ಸೇರಿಕೊಳ್ಳುವ ವಿಚಾರದಲ್ಲಿ ಡಿ ಕೆ ಶಿವಕುಮರ್, ಸಿದ್ದರಾಮಯ್ಯ ನಡುವೆ ಕಿತ್ತಾಟ ನಡೆಯುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್ ಗೆ ಅಸ್ತಿತ್ವವೇ ಇಲ್ಲ. ನಿಮ್ಮ ಪಕ್ಷ ನಿಮ್ಮ ಶಾಸಕರನ್ನ ಉಳಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ವಿರೋಧ ಪಕ್ಷಕ್ಕೂ ಕಾಂಗ್ರೆಸ್ ಬರಲ್ಲ ಎಂದು ಟೀಕಿಸಿದರು.
ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷಕ್ಕೆ ಸೊಸೆ ಎನ್ನುತ್ತಾರೆ. ಬಾದಾಮಿಯಲ್ಲಿ ನಿಂತು ಅಲ್ಲಿಯೂ ಸೊಸೆ ಎನ್ನುತ್ತಾರೆ. ಕೀಲಿ ಕೈ ನನ್ನ ಕೈಯಲ್ಲಿ ಇದೆ ಎನ್ನುತ್ತಾರೆ. ಹಾಗಿದ್ರೆ ನೀವು ಯಾವ ಪಕ್ಷಕ್ಕೆ ಮಗ ಹೇಳಿ ಎಂದು ಸಿದ್ದರಾಮಯ್ಯ ಸೋಸೆ ಹೇಳಿಕೆಗೆ ಕೆ.ಎಸ್.ಈಶ್ವರಪ್ಪ ಲೇವಡಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!