ದಿನದಿಂದ ದಿನಕ್ಕೆ ಇಳಿಕೆಯಾಗುತ್ತಿದೆ ಕಬಿನಿ ಒಡಲು


Team Udayavani, May 28, 2023, 3:16 PM IST

ದಿನದಿಂದ ದಿನಕ್ಕೆ ಇಳಿಕೆಯಾಗುತ್ತಿದೆ ಕಬಿನಿ ಒಡಲು

ಎಚ್‌.ಡಿ.ಕೋಟೆ: ಪ್ರತಿವರ್ಷ ಮೇ ಕೊನೆ ವಾರ ಇಲ್ಲವೆ ಜೂನ್‌ ಮೊದಲ ವಾರದಲ್ಲಿ ಆರಂಭಗೊಳ್ಳಬೇಕಾದ ಮುಂಗಾರು ಮಳೆ ಈ ಬಾರಿ ಒಂದೆರಡು ತಿಂಗಳು ಮುಂಚಿತವಾಗಿ ಆರಂಭಗೊಂಡಿದೆಯಾದರೂ ತಾಲೂಕಿನ ಕಬಿನಿ ಜಲಾಶಯದ ಒಡಲು ದಿನದಿಂದ ದಿನಕ್ಕೆ ತೀರ ಇಳಿಮುಖವಾಗುತ್ತಿದೆ.

ಕಬಿನಿ ಜಲಾಶಯ ಎಂದೊಡನೆ ನೆನಪಾಗೋದು ನೆರೆಯ ತಮಿಳುನಾಡು ನೀರಿಗಾಗಿ ಕ್ಯಾತೆ ತೆಗೆದಾಗಲೆಲ್ಲಾ ತಮಿಳುನಾಡಿಗೆ ನೀರು ಹರಿಸುವ ತೊಟ್ಟಿ ಎಂದು. ತಮಿಳುನಾಡಿಗೆ ನೀರು ಹರಿಸಬೇಕಾದ ಸಂದರ್ಭದಲ್ಲೆಲ್ಲಾ ಪ್ರಮುಖ ಪಾತ್ರವಹಿಸಿರುವ ಕಬಿನಿ ಜಲಾಶಯದ ಒಡಲು ದಿನದಿಂದ ದಿನಕ್ಕೆ ಬರಿದಾಗ ತೊಡಗಿದ್ದು ರೈತರು ಹಾಗೂ ಜನರಲ್ಲಿ ಆತಂಕ ಮೂಡಿಸಿದೆ.

11 ಸಾವಿರ ಕ್ಯೂಸೆಕ್‌ ನೀರಿನ ಸಾಮರ್ಥ್ಯ ಕಡಿಮೆ: ಜಲಾಶಯದ ಗರಿಷ್ಠ ನೀರಿನ ಮಟ್ಟ (ಸಮುದ್ರಮಟ್ಟದಿಂದ) 2284 ಅಡಿ, ಈ ದಿನದ ನೀರಿನ ಮಟ್ಟ 2251.67 ಅಡಿ ಜಲಾಶಯದ ಒಳಹರಿವು 329 ಕ್ಯೂಸೆಕ್‌, ಹೊರಹರಿವು 500 ಕ್ಯೂಸೆಕ್‌ ಇದೆ. ಕಳೆದ ವರ್ಷ ಇದೇ ತಿಂಗಳಲ್ಲಿ ಜಲಾಶಯದ ನೀರಿನ ಶೇಖರಣೆ 2261 ಅಡಿಗಳ ನೀರಿತ್ತು. ಆದರೆ ಈ ಬಾರಿ ಕಳೆದ ಸಾಲಿಗೆ ಹೋಲಿಕೆ ಮಾಡಿದಾಗ 11 ಸಾವಿರ ಕ್ಯೂಸೆಕ್‌ ನೀರಿನ ಸಾಮರ್ಥ್ಯ ಕಡಿಮೆ ಇದೆ. ಕುಡಿಯುವ ನೀರಿಗಾಗಿ ಪ್ರತಿದಿನ 500 ಕ್ಯೂಸೆಕ್‌ ನೀರು ಹೊರಹರಿಯ ಬಿಡಲಾಗುತ್ತಿದೆ.

ಕ್ಷೀಣಿಸುತ್ತಿದೆ ನೀರಿನ ಪ್ರಮಾಣ: ನೆರೆಯ ಕೇರಳ ರಾಜ್ಯದ ವೈನಾಡಿನಲ್ಲಿ ಮಳೆಯಾದಾಗ ಮಾತ್ರ ಕಬಿನಿ ಒಳಹರಿವಿನಲ್ಲಿ ಏರಿಕೆಯಾಗಬೇಕು. ಕೇರಳ ರಾಜ್ಯದಲ್ಲಿ ಮಳೆಯ ಕೊರತೆಯಿಂದಾಗಿ ಜಲಾಶ ಯದ ಒಳಹರಿವಿನಲ್ಲಿ ತೀರ ಇಳಿಕೆ ಕಂಡು ಬಂದಿದೆ. ಮುಂಗಾರು ಮಳೆ ಆರಂಭಕ್ಕೆ ಇನ್ನೂ ಸುಮಾರು 1 ತಿಂಗಳ ಕಾಲಾವಕಾಶ ಇದೆ. ಈಗಲೇ ಜಲಾಶಯದ ಒಡಲು ಬಹುತೇಕ ಕ್ಷೀಣಿಸಿದ್ದು, ದಿನಗಳು ಉರುಳಿದಂತೆ ಮತ್ತಷ್ಟು ನೀರಿನ ಶೇಖ ರಣ ಪ್ರಮಾಣ ಕ್ಷೀಣಿಸುವುದರಲ್ಲಿ ಸಂಶಯ ಇಲ್ಲ.

ನೀರು ಹರಿಸುವುದಕ್ಕೆ ಅವಕಾಶವೇ ಇಲ್ಲ: ಬೇಸಿಗೆ ಆರಂಭಗೊಳ್ಳುತ್ತಿದ್ದಂತೆಯೇ ನೀರಿನ ಸಮಸ್ಯೆ ತಲೆದೂರಿದಾಗ ಕೃಷಿ ಮತ್ತು ಅಂತರ್ಜಲದ ನೀರಿನ ಪ್ರಮಾಣ ಹೆಚ್ಚಿಸಲು ನಾಲೆಗಳ ಮೂಲಕ ನೀರು ಹರಿಸಿ ಕೆರೆಕಟ್ಟೆಗಳಲ್ಲಿ ನೀರು ಶೇಖರಿಸಿ ಕೊಂಡು ಅಂತರ್ಜಲ ಹೆಚ್ಚಿಸುವ ಕಾರ್ಯ ಮಾಮೂಲಾಗಿ ನಡೆಯುತ್ತಿತ್ತು. ಆದರೀಗ ಒಳಹರಿವಿನಲ್ಲಿ ತೀರ ಇಳಿಕೆಯಾಗಿದ್ದು, ಜಲಾಶಯದಲ್ಲಿಯೂ ನೀರಿನ ಶೇಖರಣಾ ಸಾಮರ್ಥ್ಯ ತೀರ ಇಳಿಕೆಯಾಗಿರುವ ಹಿನ್ನೆಲೆಯಲ್ಲಿ ಕೆರೆಕಟ್ಟೆಗಳನ್ನು ತುಂಬಿಸಿಕೊಳ್ಳುವುದಕ್ಕಾಗಲಿ ನಾಲೆಗಳ ಮೂಲಕ ನೀರು ಹರಿಸುವುದಕ್ಕಾಗಲಿ ಅವಕಾಶ ಇಲ್ಲ ಎಂದು ನೀರಾವರಿ ಇಲಾಖೆ ಮೂಲಗಳು ತಿಳಿಸಿವೆ.

ನೀರಿನ ಸಮಸ್ಯೆ ಪರಿಹರಿಸುವುದೇ ಕಷ್ಟಕರ: ಸದ್ಯದ ನೀರಿನ ಶೇಖರಣಾ ಸಾಮರ್ಥ್ಯವನ್ನು ಗಮನಿಸಿದಾಗ ಮಳೆಯಾಗಿ ಜಲಾಶಯದ ಒಳಹರಿವು ಹೆಚ್ಚಾಗುವ ತನಕ ಕುಡಿಯುವ ನೀರಿನ ಸಮಸ್ಯೆ ಪರಿಹರಿಸುವುದೇ ಕಷ್ಟಕರವಾಗಿದೆ ಅನ್ನುವ ಅಂಶ ತಿಳಿದು ಬಂದಿದೆ. ಒಟ್ಟಾರೆ ಸದ್ಯದ ಸ್ಥಿತಿಯಲ್ಲಿ ಕಬಿನಿ ಜಲಾಶಯದ ಒಡಲು ಬಹುತೇಕ ಬರಿದಾಗಿದ್ದು ರೈತರಲ್ಲಿ ಆತಂಕ ಮೂಡಿಸಿದೆ.

ಕಬಿನಿ ಜಲಾಶಯದ ಒಡಲು ಈ ಬಾರಿ ಇಷ್ಟು ಪ್ರಮಾಣದಲ್ಲಿ ಇಳಿಕೆಯಾಗಿರುವುದು ಅಚ್ಚರಿ ಉಂಟು ಮಾಡಿದೆ. ಕೃಷಿಗೆ ನೀರಿನ ಸಮಸ್ಯೆ ಎದುರಾದರೂ ಕುಡಿಯುವ ನೀರಿಗೆ ಭಯಪಡಬೇಕಾದ ಅಗತ್ಯ ಇಲ್ಲ. ಮಳೆ ಆರಂಭಗೊಳ್ಳುತ್ತಿದ್ದಂತೆಯೇ ಜಲಾಶಯ ಭರ್ತಿಯಾಗುವುದರಲ್ಲಿ ಸಂಶಯ ಇಲ್ಲ. – ಪ್ರಸಾದ್‌, ರೈತ

ನೀರು ಅಮೂಲ್ಯ ಬೇಸಿಗೆ ಕಾಲದಲ್ಲಿ ಹನಿಹನಿ ನೀರಿನ ಸಂರಕ್ಷಣೆಗೂ ಜನಸಾಮಾನ್ಯರು ಎಚ್ಚರವಹಿಸಬೇಕು. ಮಳೆಗಾಲ ಆರಂಭಗೊಳ್ಳಲು ಇನ್ನೂ ಒಂದು ತಿಂಗಳಿರುವಾಗಲೇ ಕಬಿನಿ ಜಲಾಶಯ ದಿನದಿಂದ ದಿನಕ್ಕೆ ಬರಿದಾಗುತ್ತಿರುವುದು ಅಘಾತ ಉಂಟು ಮಾಡಿದೆ. – ಪಿ.ಆರ್‌.ಪಳನಿಸ್ವಾಮಿ, ಜಿಲ್ಲಾ ಉಪಾಧ್ಯಕ್ಷ, ರೈತ ಸಂಘ

– ಎಚ್‌.ಬಿ.ಬಸವರಾಜು

ಟಾಪ್ ನ್ಯೂಸ್

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.