ಕಬಿನಿ ಬಲದಂಡೆ ನಾಲೆಗೆ ನೀರು ಬಿಡಲ್ಲ


Team Udayavani, Feb 5, 2020, 3:00 AM IST

kabini-bala

ನಂಜನಗೂಡು: ಕಬಿನಿ ಬಲದಂಡೆ ನಾಲೆ ಅಚ್ಚುಕಟ್ಟುದಾರರಿಗೆ ನೀರು ಬಿಡುವ ಪ್ರಸ್ತಾವವಿಲ್ಲ. ಹೀಗಾಗಿ ರೈತರ ಎರಡನೇ ಬೆಳೆಗೆ ನೀರು ಸಿಗುವುದಿಲ್ಲ ಎಂದು ಕಾವೇರಿ ನೀರಾವರಿ ನಿಗಮದ ಹುಲ್ಲಹಳ್ಳಿ ವ್ಯಾಪ್ತಿಯ ಅಧಿಕಾರಿ ರವೀಶ ತಿಳಿಸಿದರು. ತಾಲೂಕು ಆಡಳಿತ ಸ್ಥಳಿಯ ಡಾ.ಅಂಬೇಡ್ಕರ್‌ ಭವನದಲ್ಲಿ ಮಂಗಳವಾರ ಏರ್ಪಡಿಸಿದ್ದ ರೈತರ ಕುಂದುಕೊರತೆ ಸಭೆಯಲ್ಲಿ ವಿಷಯ ಸ್ಪಷ್ಟಪಡಿಸಿದರು.

ಕತ್ವಾಡಿಪುರದ ಶಿವಣ್ಣ ಮಾತನಾಡಿ, ಕಬಿನಿ ಅಚ್ಚುಕಟ್ಟಿನ ಪ್ರದೇಶದ ಕೃಷಿಕರಾದ ನಾವೆಲ್ಲ, ಈ ಸಾಲಿನ ನೆರೆ ಹಾವಳಿಯಿಂದಾಗಿ ಸಾಕಷ್ಟು ಹಾನಿ ಅನುಭವಿಸಿದ್ದೇವೆ. ಜಲಾಶಯದಲ್ಲೂ ಸಾಕಷ್ಟು ನೀರಿದೆ. ಹೀಗಾಗಿ ಬೇಸಿಗೆ ಬೆಳೆಗೆ ನೀರು ಕೊಡಬೇಕು ಎಂದು ಆಗ್ರಹಿಸಿದರು.

ಅಲ್ಲದೆ ಭತ್ತದ ಕಟಾವು ಮುಗಿದು ತಿಂಗಳಾಗಿದೆ. ಆದರೂ ಏಕೆ ನಾಲೆಗೆ ನೀರು ಹರಿಸಿಲ್ಲ ಎಂದು ಪ್ರಶ್ನಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ರವೀಶ, ಕಾವೇರಿ ನೀರಾವರಿ ನಿಗಮ ಈಗಾಗಲೇ ಹುಲ್ಲಹಳ್ಳಿ, ರಾಂಪುರ ನಾಲೆಗಳಿಗೆ ನೀರು ಬೀಡಲು ಅನುಮತಿಗೆ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದು, ಕಬಿನಿ ಬಲದಂಡೆ ನಾಲೆಗೆ ಮಾತ್ರ ನೀರಿಲ್ಲ ಎಂದರು.

ಗೊಂದಲದ ಗೂಡಾದ ಸಭೆ: ತಾಲೂಕಿನಲ್ಲಿ ರೈತರಿಗೆ ಸಂಬಂಧಿಸಿದ ನೂರಾರು ಸಮಸ್ಯೆಗಳು ಪ್ರಸ್ತಾಪವಾಗಬೇಕಿದ್ದ ಸಭೆ ರೈತ ಸಂಘಗಳ ಮೇಲಾಟದ ಕಾರಣದಿಂದಾಗಿ ಗೊಂದಲದ ಗೂಡಾಯಿತು. ಮೊದಲೇ ಮಾತು ಸ್ಪಷ್ಟವಾಗಿ ಕೇಳದ ಭವನದಲ್ಲಿ, ಸಭೆಯ ಗೊಂದಲ ತಹಬಂದಿಗೆ ಬಾರದಿರುವದನ್ನು ಕಂಡ ಸಭೆಯ ಅದ್ಯಕ್ಷತೆ ವಹಿಸಿದ್ದ ತಗಶೀಲ್ದಾರ ಮಹೇಶ ಕುಮಾರ್‌, ನೀವು ಗದ್ದಲ ಎಬ್ಬಿಸುವುದಾದರೆ ನಾವು ಸಭೆಯಿಂದ ಹೊರಹೊಗಬೇಕಾಗುತ್ತದೆ ಎಂದು ಖಡಕ್ಕಾಗಿ ಎಚ್ಚರಿಕೆ ನೀಡಿ ತಹಬಂದಿಗೆ ತಂದರು.

ನಂತರ ಮಾತನಾಡಿದ ರೈತರು, ತಾಲೂಕಿನ ವಿವಿಧ ಇಲಾಖೆಗಳ ಭ್ರಷ್ಟಾಚಾರಗಳ ಕುರಿತು ಬೆಳಕು ಚಲ್ಲಿದರು. ರೈತರ ಆಕ್ರೋಶಕ್ಕೆ ಕಾರಣವಾಗಿದ್ದು ತಾಲೂಕು ಕೃಷಿ ಇಲಾಖೆ. ಸರ್ಕಾರ ರೈತರ ಅಭಿವೃದ್ಧಿಗೆ ನೀಡುತ್ತಿರುವ ಯಂತ್ರೋಪಕರಣಗಳು ಕೃಷಿ ಸಾಮಗ್ರಿಗಳು ಕಳಪೆಯಾಗಿವೆ. ಸಬ್ಸಿಡಿ ಬೇರೆ ಕೇಡು ಎಂದು ರೈತ ನಾಯಕರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ದೀನದಯಾಳ ಯೋಜನೆಯಡಿಯಲ್ಲಿ ರೈತರಿಗೆ ನೀಡಲಾಗುವ ವಿದ್ಯುತ್‌ಗೆ ಲಂಚ ಎಷ್ಟು ಬಹಿರಂಗ ಪಡಿಸಿ ಎಂಬ ಪ್ರಶ್ನೆ ಎದುರಾದಾಗ ಕೆಪಿಟಿಸಿಎಲ್‌ ಅಧಿಕಾರಿ ದೇವಾರಾಜ ಕಕ್ಕಾ ಬಿಕ್ಕಿಯಾದರು. ಒಂದು ಟೀಸಿಗಾಗಿ ವಿದ್ಯುತ್‌ ಗುತ್ತಿಗೆದಾರರು 1.5 ಲಕ್ಷ ಲಂಚ ಕೇಳಿದರೆ, ಇದು ರೈತರ ಶೋಷಣೆಯೋ ಅಭಿವೃದ್ಧಿಯೋ ಎಂದಾಗ ಉತ್ತರಿಸಲು ತಡವರಿಸಿದ ಅಧಿಕಾರಿ, ಟೀಸಿ ಸಂರ್ಪಕ ಪೂರ್ಣ ಉಚಿತ. ಆದರೆ ಕಾಮಗಾರಿ ಪೂರ್ಣಗೊಂಡಿದೇ ಎಂಬ ಲಿಖೀತ ಪತ್ರ ಗುತ್ತಿಗೆದಾರರಿಂದ ಬೇಕು ಎಂದು ಹೇಳಿದರು. ಅದಕ್ಕೆ ರೈತರು, ಲಂಚ! ಎಂದು ಅಣಕವಾಡಿದರು.

ತಾಲೂಕಿನಲ್ಲಿ ಎಗ್ಗಿಲ್ಲದೆ ಮದ್ಯ ಮಾರಾಟವಾಗುತ್ತಿದ್ದು, ತಿಳಿಸಿದರೂ ನೆಪ ಮಾತ್ರಕ್ಕೆ ದಾಳಿ ನಡೆಸಿ, ಮತ್ತೆ ಪುಸಲಾಯಿಸಿ ಕಳುಹಿಸುತ್ತೀರಿ. ಇದರಿಂದ ಕುಟುಂಬ ಹಾಗೂ ಗ್ರಾಮದ ಸೌಹರ್ದಕ್ಕೆ ಭಂಗ ಬರುತ್ತಿದೆ ಎಂದು ಅಬಕಾರಿ ಅಧಿಕಾರಿ ಪದ್ಮಾವತಿಯವರ ಬೇವರಿಳಿಸಿದರು. ಸಭೆಗೆ ಹಾಜರಾಗಲು ತಾಲೂಕಿನ 38 ಇಲಾಖೆಗಳಿಗೆ ತಿಳಿಸಲಾಗಿತ್ತು. ಆದರೆ ಕಂದಾಯ, ಶಿಕ್ಷಣ, ಅಬಕಾರಿ, ಕೆಪಿಟಿಸಿಎಲ್‌ ಸೇರಿದಂತೆ ಕೇವಲ 12 ಇಲಾಖೆಗಳ ಪ್ರತಿನಿಧಿಗಳು ಮಾತ್ರ ಹಾಜರಿದ್ದು, ಉಳಿದ ಇಲಾಖೆಗಳು ರೈತರಿಗೂ ತಮಗೂ ಸಂಭಂದವಿಲ್ಲಾ ಎಂದು ದೂರ ಉಳಿದವು. ಅಧಿಕಾರಿಗಳ ಗೈರಿಗೆ ರೈತರ ಅಸಮಾಧಾನ ವ್ಯಕ್ತವಾಯಿತು.

ತಾಲೂಕಿನ ರೈತರ ನೂರಾರು ಸಮಸ್ಯೆಗಳು ಸಭೆಯಲ್ಲಿ ಮಾರ್ಧನಿಸಿದಾಗ ಅಧ್ಯಕ್ಷತೆ ವಹಿಸಿದ್ದ ತಹಶೀಲ್ದಾರ ಮಹೇಶ ಕುಮಾರ ಇಂದಿನ ಸಮಸ್ಯೆಗಳಿಗೆ ಆಯಾ ಇಲಾಖೆಯಿಂದ‌ ಪರಿಹಾರ ಅಥವಾ ಕಾರಣ ತಿಳಿಸಲಾಗುತ್ತದೆ ಎಂದರು. ರೈತ ಸಂಘಟನೆಗಳ ಮುಖ್ಯಸ್ಥ ಶಿರಮಳ್ಳಿ ಸಿದ್ದಪ್ಪ, ಬೊಕ್ಕಳ್ಳಿ ನಂಜುಂಡಸ್ವಾಮಿ, ಇಮ್ಮಾವು ರಘು, ಹೆಜ್ಜಿಗೆ ಪ್ರಕಾಶ, ದೇವನೂರು ಶಿವಕುಮಾರ, ಸಿಂಧುವಳ್ಳಿ ಬಸವಣ್ಣ, ಗೊದ್ದನಪುರದ ಸುರೇಶ ಸೇರಿದಂತೆ 150ಕ್ಕೂ ಹೆಚ್ಚು ರೈತ ನಾಯಕರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.