ಕೆರೆಗಳಿಗೆ ಕಡೆಗೂ ಹರಿಯಿತು ಕಪಿಲಾ ನೀರು


Team Udayavani, Sep 1, 2021, 3:41 PM IST

ಕೆರೆಗಳಿಗೆ ಕಡೆಗೂ ಹರಿಯಿತು ಕಪಿಲಾ ನೀರು

ನಂಜನಗೂಡು, ಯಳಂದೂರು, ಚಾಮರಾಜನಗರ ತಾಲೂಕಿನ ಒಟ್ಟು 24 ಕೆರೆಗಳಿಗೆ ಕಪಿಲಾ ನದಿ ನೀರು ಹರಿಸುವ ಮಹತ್ವಾಕಾಂಕ್ಷಿ ಯೋಜನೆ ಗೆ ಮಂಗಳವಾರ ಪ್ರಾಯೋಗಿಕವಾಗಿ ಚಾಲನೆ ದೊರೆತಿದೆ. ಇಂದು, ನಾಳೆ, ನಾಡಿದ್ದು ನೀರುಬರುತ್ತದೆ ಎಂದು ಮೂರ್‍ನಾಲ್ಕು ವರ್ಷ ಗಳಿಂದ ಕಾಯುತ್ತಿದ್ದ ಜನತೆ ಮಂಗಳವಾರ ಕಡೆಗೂಹರಿದ ಗಂಗೆಯನ್ನು ಕಂಡು ಸಂತಸಪಟ್ಟರು. ಸಿದ್ದರಾಮಯ್ಯ ಅವಧಿಯಲ್ಲಿ 2016ರ ಡಿಸೆಂಬರ್‌ನಲ್ಲಿ 233 ಕೋಟಿರೂ. ವೆಚ್ಚದ ಯೋಜನೆಗೆ ಚಾಲನೆ ನೀಡಲಾಗಿತ್ತು. 18 ತಿಂಗಳಲ್ಲಿ ಯೋಜನೆ ಪೂರ್ಣಗೊಳಿಸುವ ಗುರಿ ಹೊಂದಲಾಗಿತ್ತು. ಹಲವು ಅಡಚಣೆಗಳಿಂದ ವಿಳಂಬವಾದರೂಮಂಗಳವಾರ ಸುತ್ತೂರಿನ ಪಂಪ್‌ಹೌಸ್‌ನಿಂದ ನೀರು ಹರಿಸಲು ಪ್ರಾಯೋಗಿಕವಾಗಿ ಚಾಲನೆ ದೊರೆಯಿತು.

ನಂಜನಗೂಡು: ತಾಲೂಕಿನ ಬಿಳಗರೆ ಹೋಬಳಿಯ ದಶಕಗಳ ಕನಸಿನ ಫ‌ಲವಾಗಿ ಮಂಗಳವಾರ ತಗಡೂರಿನಕೊಮ್ಮನ ಕರೆಗೆಕಪಿಲಾ ನೀರು ಹರಿಯಿತು. ಸುತ್ತೂರು ಬಳಿಯ ಪಂಪ್‌ಹೌಸಿನಿಂದ ತಗಡೂರು ಕರೆಗೆ ಕಪಿಲಾ ನೀರು ಇಂದು ಬರುತ್ತದೆ ನಾಳೆ ಬರುತ್ತದೆ ಎಂದು ಕಾದಿದ್ದ ಜನತೆ ಯಲ್ಲಿ ಮಂಗಳವಾರ ನೀರು ಬಂದು ತಲುಪಿದಾಗ ಆನಂದ ಭಾಷ್ಪ ಕಾಣಿಸಿಕೊಂಡಿತು. ತಮ್ಮ ಕ್ಷೇತ್ರ ವ್ಯಾಪ್ತಿಯ ಕರೆಗೆ ನೀರು ಬರುವ ಸಮಯ ದಲ್ಲಿ ಖುದ್ದು ಹಾಜರಿದ್ದ ಶಾಸಕ ಡಾ|ಯತೀಂದ್ರಅವರುಜನತೆ ಸಂತೋಷದಕಡಲಲ್ಲಿತಾವೂ ಭಾಗಿಯಾಗಿದ್ದೂ ಅಲ್ಲದೆ ಆಗಮಿಸಿದ ನದಿ ನೀರಿಗೆ ಪೂಜೆ ಸಲ್ಲಿಸಿ ಬರಮಾಡಿಕೊಂಡರು. ಬಳಿಕ ಮಾತನಾಡಿದ ಅವರು, ಕೆರೆಗೆ ನೀರು ಹರಿಯುವ ಮೂಲಕ ತಂದೆ ಸಿದ್ದರಾಮಯ್ಯ ಹಾಗೂ ತಮ್ಮ ಕನಸು ನನಸಾಗಿದೆ. ಸಿದ್ದರಾಮಯ್ಯ ಮುಖ್ಯ ಮಂತ್ರಿಯಾಗಿದ್ದ ಅವಧಿಯಲ್ಲಿ 233 ಕೋಟಿ ರೂ. ಯೋಜನೆ ಸಿದ್ಧಪಡಿಸಿ, ಕಾಮಗಾರಿಗೆ ಭೂಮಿ ಪೂಜೆ ನರೆವೇರಿಸಲಾಗಿತ್ತು. ನನ್ನ ಅವಧಿಯಲ್ಲಿ ನೀರು ಬಂದಿದೆ ಎಂದರು.

ಇದನ್ನೂ ಓದಿ:ಯಶವಂತಪುರ : RTO ಕಚೇರಿ ಮುಂದಿನ ರಸ್ತೆ ಅಗಲೀಕರಣಕ್ಕೆ ಕೂಡಲೇ ಕ್ರಮ

ಈ ಕೆರೆಯೊಂದಿಗೆ ತಾಲೂಕಿನ ಚಿಕ್ಕಹೊಮ್ಮದ ಕೆರೆ ಹಾಗೂ ಉಮ್ಮತ್ತೂರು ಕೆರೆ ಸೇರಿದಂತೆ 11 ಕೆರೆಗಳಿಗೆ ಮೊದಲನೇ ಹಂತದಲ್ಲಿ ನೀರು ಹರಿಯಲಿದ್ದು, ಉಳಿದ 13ಕೆರೆಗಳಿಗೆ2 ಹಂತದಲ್ಲಿ ಕಪಿಲಾ ನೀರು ತಲುಪಲಿದೆ ಎಂದು ತಿಳಿಸಿದರು. ಈ ಎಲ್ಲ ಕೆರೆಗಳನ್ನೂ ತುಂಬಿಸುವು
ದರೊಂದಿಗೆ ಮಳೆಯಾಶ್ರಿತ ಪ್ರದೇಶವಾದ ನಂಜನ ಗೂಡು, ಚಾ.ನಗರ, ಯಳಂದೂರು ತಾಲೂಕಿನಲ್ಲಿ ಅಂತರ್ಜಲ ವೃದ್ಧಿಯಾಗಿ ರೈತರ ಬದುಕು ಹಸನಾಗಲಿದೆ ಎಂದರು. ಈ ವೇಳೆ ತಗಡೂರು ಗ್ರಾಪಂ ಅಧ್ಯಕ್ಷೆ ಸರಸ್ವತಿ, ಉಪಾಧ್ಯಕ್ಷ ಆರ್‌.ಮಹದೇವು, ತಗಡೂರು
ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷೆ ಹಾಡ್ಯ ರಂಗಸ್ವಾಮಿ ಸೇರಿದಂತೆ ತಗಡೂರು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಉಪಸ್ಥಿತರಿದ್ದರು.

ಉಮ್ಮತ್ತೂರು ಕೆರೆಯತ್ತ ಕಪಿಲಾ ನೀರು
ಚಾಮರಾಜನಗರ: ತಾಲೂಕಿನ ಉಮ್ಮತ್ತೂರು ದೊಡ್ಡಕೆರೆಗೆ ನಂಜನಗೂಡು ತಾಲೂಕಿನ ಸುತ್ತೂರಿನ ಪಂಪ್‌ಹೌಸ್‌ನಿಂದ ನೀರು ಹರಿಸಲು ಮಂಗಳವಾರ ಚಾಲನೆ ನೀಡಲಾಗಿದೆ.

ಸುತ್ತೂರಿನ ಕಬಿನಿ ನದಿಯಿಂದ ಪೈಪ್‌ ಮೂಲಕ ನೀರು ಹರಿಸುವಕಾರ್ಯಕ್ಕೆ ಮಂಗಳವಾರ ಚಾಲನೆ ನೀಡಲಾಯಿತು. ಅಲ್ಲಿಂದ ನಂಜನಗೂಡು
ತಾಲೂಕಿನ ತಗಡೂರು ಗ್ರಾಮದಕೊಮ್ಮಗೆರೆಗೆ ನೀರು ತಲುಪಿತು. ಅಲ್ಲಿಂದ ಉಮ್ಮತ್ತೂರುಕೆರೆಯ ಕಡೆಗೆ ಹರಿಸಲಾಗಿದೆ. ಆ ನೀರು ನಂಜನಗೂಡು ತಾಲೂಕಿನ ಚುಂಚನಹಳ್ಳಿ ಹಾಗೂ ಹನುಮನಪುರ ನಡುವೆ ಇರುವ ವಿತರಣಾ ತೊಟ್ಟಿಗೆ ಮಂಗಳವಾರ ಸಂಜೆ ತಲುಪಿದೆ. ಇಲ್ಲಿಂದ ತಾಲೂಕಿನ ಉಮ್ಮತ್ತೂರು ಕೆರೆಗೆ3 ಕಿ.ಮೀ. ಅಂತರದವರೆಗೆ ಪೈಪ್‌ಲೈನ್‌ ಮೂಲಕ ಹರಿದು, ನಂತರ2 ಕಿ.ಮೀ. ದೂರ ಭೂಮಿಯ ಮೇಲೆ ಗುರುತ್ವಾಕರ್ಷಣ ಶಕ್ತಿಯ ಮೂಲಕ ಹರಿದು ಉಮ್ಮತ್ತೂರುಕೆರೆಗೆ ನೀರು ತಲುಪಬೇಕಿದೆ. ವಿದ್ಯುತ್‌ ಅಡಚಣೆ ಉಂಟಾಗದಿದ್ದಲ್ಲಿ ಬುಧವಾರ ಬೆಳಗಿನ ಜಾವದ ವೇಳೆಗೆ ಉಮ್ಮತ್ತೂರುಕೆರೆಗೆ ನೀರು ಬರಬಹುದೆಂದು ನಿರೀಕ್ಷಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಉಮ್ಮತ್ತೂರು ಕೆರೆ ಪಕ್ಕ ಕೊಟ್ಟೂರು ಬಸವೇಶ್ವರ ದೇವಾಲಯದ ಮುಂದೆ ರೈತರು ನಡೆಸುತ್ತಿದ್ದ ಚಳವಳಿಯನ್ನು ತಾತ್ಕಾಲಿಕ ವಾಗಿ ಹಿಂತೆಗೆದುಕೊಳ್ಳಲಾಯಿತು. ಕೆರೆಗೆ ನೀರು ತುಂಬಿದ ಬಳಿಕ ಸೆ.2ರಂದು ಶಾಸಕ ಎನ್‌. ಮಹೇಶ್‌ ನೇತೃತ್ವದಲ್ಲಿ ಗಂಗೆ ಪೂಜೆ ಸಲ್ಲಿಸುವುದು. ಒಂದು ವೇಳೆ ನೀರು ಮತ್ತೆ ಸ್ಥಗಿತವಾದರೆ ಅದೇ ಸ್ಥಳದಲ್ಲಿ ನಾನೂ ನಿಮ್ಮ ಜೊತೆ ಪ್ರತಿಭಟನೆ ಮುಂದುವರಿಸುತ್ತೇನೆ ಎಂದು ಶಾಸಕ ಎನ್‌. ಮಹೇಶ್‌ ಭರವಸೆ ನೀಡಿದ್ದಾರೆ ಎಂದು ಕಬ್ಬುಬೆಳೆಗಾರರ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್‌ ತಿಳಿಸಿ ದರು. ಮಂಗಳವಾರ ಪ್ರತಿಭಟನಾ ಸ್ಥಳಕ್ಕೆ ಶಾಸಕ ಎನ್‌. ಮಹೇಶ್‌, ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ, ದಲಿತ ಸಂಘಟನೆ ಗಳ ಮುಖಂಡ ಸಿ.ಎಂ. ಕೃಷ್ಣಮೂರ್ತಿ ಭೇಟಿ ನೀಡಿದ್ದರು. ಜಿಲ್ಲಾಧ್ಯಕ್ಷಹೊನ್ನೂರು ಪ್ರಕಾಶ್‌,ಹೆಬ್ಬಸೂರು ಬಸವಣ್ಣ, ಹಾಡ್ಯವಿ, ಮಹೇಶ್‌,ಕುಮಾರ್‌ ಇತರರಿದ್ದರು.

ಟಾಪ್ ನ್ಯೂಸ್

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.